25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಶ್ರೀ ಧ.ಮಂ ಪ.ಪೂ ಕಾಲೇಜಿನಲ್ಲಿ ಸಂಸ್ಕೃತೋತ್ಸವ ಕಾರ್ಯಕ್ರಮ

ಉಜಿರೆ: ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ಸಂಸ್ಕೃತ ಭಾಷಾ ವಿಭಾಗದ ಸಂಸ್ಕೃತ ಸಂಘ ಹಾಗೂ ಸಂಸ್ಕೃತ ಅಂತರಾಧ್ಯಯನ ವೃತ್ತಮ್ ಇವುಗಳ ಸಹಭಾಗಿತ್ವದಲ್ಲಿ ಸಂಸ್ಕೃತೋತ್ಸವ ಕಾರ್ಯಕ್ರಮ ನಡೆಯಿತು.
ಪ್ರಾಚಾರ್ಯ ಪ್ರಮೋದ್ ಕುಮಾರ್ ಅವರು ಶುಭಾಶಂಸನೆ ಮಾಡಿ ಸಂಸ್ಕೃತ ಭಾಷಾ ಮಹತ್ವ ತಿಳಿಸಿದರು.

ಮಹಾಕವಿ ಕಾಳಿದಾಸನ ಮೇಘದೂತಮ್ ಕಾವ್ಯದ ಅನುಸಂಧಾನ ಕಾರ್ಯಕ್ರಮ ನಡೆಯಿತು. ಅರ್ಥಗಾರಿಕೆಯಲ್ಲಿ ಅಂಜಲಿ , ಲಘ ಶಾಸ್ತ್ರೀಯ ಸಂಗೀತದಲ್ಲಿ ಪ್ರಸೀದಾ ರಾವ್ , ಶ್ಲೋಕದಲ್ಲಿ ಆದಿತ್ಯ ಹೆಗಡೆ , ಶಾಸ್ತ್ರೀಯ ಸಂಗೀತದಲ್ಲಿ ಸಿಂಧೂರ ಶೆಂಡ್ಯೆ, ಯಕ್ಷಗಾನ ಭಾಗವತಿಕೆಯಲ್ಲಿ ಸಿಂಚನಾ, ವರ್ಣ ಚಿತ್ರದಲ್ಲಿ ಸೌಂದರ್ಯ ಅವರು ಮೇಘದೂತಮ್ ಕಾವ್ಯವನ್ನು ಪ್ರಸ್ತುತಪಡಿಸಿದರು. ಅಭಿರಾಮ ಹೆಚ್.ವೈ ಹಾಗೂ ವೈಶಾಖ್ ಪಕ್ಕವಾದ್ಯಗಳಲ್ಲಿ ಸಹಕರಿಸಿದರು.

ಸಂಸ್ಕೃತ ಭಾಷಾ ವಿಭಾಗದ ಮುಖ್ಯಸ್ಥ ಡಾ.ಪ್ರಸನ್ನಕುಮಾರ ಐತಾಳ್ ಪ್ರಾಸ್ತಾವಿಕ ಮಾತನಾಡಿದರು. ಚಂದ್ರಮೌಳಿ ಶರ್ಮಾ ಸ್ವಾಗತಿಸಿ, ಶ್ರೀತುಳಸೀ ಭಟ್ ವಂದಿಸಿದರು. ಸಂಸ್ಕೃತ ಸಂಘದ ಅಧ್ಯಕ್ಷ ಆದಿತ್ಯ ಹೆಗಡೆ ನಿರೂಪಿಸಿದರು.

Related posts

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಶ್ರೀ ಕೃಷ್ಣ ಭಜನಾ ಮಂದಿರ ನಿರ್ಮಾಣಕ್ಕೆ ರೂ.1 ಲಕ್ಷ ದೇಣಿಗೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ವನಮಹೋತ್ಸವ

Suddi Udaya

ನೀತಿ ಸಂಹಿತೆ ಜಾರಿ: ಸೆ.21-25 ರೊಳಗೆ ಮಹಾಸಭೆ ನಡೆಸುವವರು ಚುನಾವಣಾಧಿಕಾರಿಯಿಂದ ಅನುಮತಿ ಪಡೆಯುವಂತೆ ವಿನಂತಿ

Suddi Udaya

ನಾಲ್ಕೂರು: ರೋಹಿಣಿ ಪದ್ಮನಾಭ ಸುವರ್ಣ ನಿಧನ

Suddi Udaya

ಎಸ್.ಡಿ.ಎಂ ಕಾಲೇಜು : ಅರ್ಥಶಾಸ್ತ್ರ ಮತ್ತು ಗ್ರಾಮೀಣಾಭಿವೃದ್ಧಿ ವಿದ್ಯಾರ್ಥಿಗಳಿಂದ ಶೈಕ್ಷಣಿಕ ಭೇಟಿ

Suddi Udaya

ವೇಣೂರು ಜಿನಪ್ರಸಾದ ಕಾಂಪ್ಲೆಕ್ಸ್‌ನಲ್ಲಿ ಟಿ.ಸಿ.ಎಲ್ ಲಾಂಡ್ರಿ ಸರ್ವಿಸ್ ಉದ್ಘಾಟನೆ

Suddi Udaya
error: Content is protected !!