ವಲಯ ಮಟ್ಟದ ಕಬಡ್ಡಿ ಪಂದ್ಯಾಟ: ಮನ್ ಶರ್ ಪ್ರಾಥಮಿಕ ಶಾಲಾ ತಂಡ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ: ಕರ್ನಾಟಕ ಸರಕಾರ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಶಿಕ್ಷಣಾಧಿಕಾರಿಗಳ ಕಛೇರಿ, ಬೆಳ್ತಂಗಡಿ ಹಾಗೂ ಸ.ಉ.ಪ್ರಾ.ಶಾಲೆ ಮಾಲಾಡಿ ಇವರ ಜಂಟಿ ಆಶ್ರಯದಲ್ಲಿ ಗುರುವಾಯನಕೆರೆ ಮತ್ತು ಪುಂಜಾಲಕಟ್ಟೆ ವಲಯ ಮಟ್ಟದ ಪ್ರಾಥಮಿಕ ಶಾಲಾ ಬಾಲಕ -ಬಾಲಕಿಯರ ಕಬಡ್ಡಿ ಪಂದ್ಯಾಟವು ಸೆ. 4 ರಂದು ನಡೆದಿದ್ದು ಈ ಪಂದ್ಯಾಟದಲ್ಲಿ ಮನ್ ಶರ್ ವಿದ್ಯಾಸಂಸ್ಥೆ ಗೇರುಕಟ್ಟೆಯ ಪ್ರಾಥಮಿಕ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿಗಳ ತಂಡವು ಪ್ರಥಮ ಸ್ಥಾನವನ್ನು ಮುಡಿಗೇರಿಸಿಕೊಂಡಿತು.


ಪಂದ್ಯಾವಳಿಯಲ್ಲಿ ನಿಹಾಲ್ ಬೆಸ್ಟ್ ಕ್ಯಾಚರ್ ಆಗಿ ಹೊರಹೊಮ್ಮಿದರೆ ಶಾಹಿಲ್ ಬೆಸ್ಟ್ ಆಲ್ ರೌಂಡರ್ ಟ್ರೋಫಿಯನ್ನು ತಮ್ಮದಾಗಿಸಿಕೊಂಡರು.

Leave a Comment

error: Content is protected !!