April 2, 2025
ತಾಲೂಕು ಸುದ್ದಿಪ್ರಮುಖ ಸುದ್ದಿ

ಸೆ.6: ರೆಖ್ಯದಲ್ಲಿ 24ನೇ ವರ್ಷದ ಮೊಸರು ಕುಡಿಕೆ ಉತ್ಸವ

ರೆಖ್ಯ: ಸಾರ್ವಜನಿಕ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ರೆಖ್ಯ, ವಿಶ್ವಹಿಂದೂ ಪರಿಷತ್ ಬಜರಂಗದಳ ರೆಖ್ಯ ಇದರ ನೇತೃತ್ವದಲ್ಲಿ ಶ್ರೀ ಕ್ಷೇ. ಧ.ಗ್ರಾ.ಯೋಜನೆ ರೆಖ್ಯ, ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂದಿರ ರೆಖ್ಯ, ಶ್ರೀ ಗುಡ್ರಮಲ್ಲೇಶ್ವರ ದೇವಸ್ಥಾನ ರೆಖ್ಯ, ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಕೋಲಾರು ರೆಖ್ಯ, ಶ್ರೀ ಅಯ್ಯಪ್ಪ ಭಜನಾ ಮಂದಿರ ರೆಖ್ಯ ಇದರ ಸಹಕಾರದೊಂದಿಗೆ ರೆಖ್ಯ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂದಿರದಲ್ಲಿ ಸೆ.6 ರಂದು 24ನೇ ವರ್ಷದ ಮೊಸರು ಕುಡಿಕೆ ಉತ್ಸವ ಜರುಗಲಿದೆ. ಬೆಳ್ಳಗಿನಿಂದ ಪುರುಷರಿಗೆ, ಮಹಿಳೆಯರಿಗೆ, ಮಕ್ಕಳಿಗೆ ವಿವಿಧ ಆಟೋಟ ಸ್ಪರ್ಧೆಗಳು ಜರುಗಲಿದೆ. ಸಂಜೆ ನಡೆಯುವ ಧಾರ್ಮಿಕ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ರೆಖ್ಯ ಸಾರ್ವಜನಿಕ ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿ ಅಧ್ಯಕ್ಷ ನವೀನ್ ಕೆ. ರೆಖ್ಯ ವಹಿಸಲಿದ್ದಾರೆ.

ಧಾರ್ಮಿಕ ಉಪನ್ಯಾಸವನ್ನು ನೇಲ್ಯಡ್ಕ ಸರಕಾರಿ ಪ್ರೌಢಶಾಲಾ ಶಿಕ್ಷಕ ಅರವಿಂದ ಗೋಖಲೆ ನೀಡಲಿದ್ದು, ವಿವಿಧ ಗಣ್ಯರು ಅತಿಥಿಗಳಾಗಿ ಆಗಮಿಸಲಿದ್ದಾರೆ. ಕಾರ್ಯಕ್ರಮದಲ್ಲಿ ನಿವೃತ್ತ ಯೋಧ ಮಹಾಬಲ ಕೆ. ಮುದ್ದಿಗೆ, ಹತ್ಯಡ್ಕ ಪ್ರಾ.ಕೃ.ಪ.ಸ ಸಂಘದ ನಿವೃತ್ತ ಸಿಇಒ ತ್ಯಾಂಪಣ್ಣ ಶೆಟ್ಟಿಗಾರ್‌ರವರನ್ನು ಸನ್ಮಾನಿಸಲಾಗುವುದು.

Related posts

ಚಂದ್ರಯಾನ-3 ಯಶಸ್ವಿಯಾದ ಹಿನ್ನಲೆ: ವಿ.ಹಿಂ.ಪ. ಮತ್ತು ಭಜರಂಗದಳ ಕಾರ್ಯಕರ್ತರಿಂದ ಗುರುವಾಯನಕೆರೆಯಲ್ಲಿ ಸಂಭ್ರಮಾಚರಣೆ

Suddi Udaya

ಕೊಕ್ರಾಡಿ : ಕೈತ್ರೋಡಿ ನಿವಾಸಿ ವಜ್ರ ಕುಮಾರ್ ಜೈನ್ ನಿಧನ

Suddi Udaya

ಮಂಗಳೂರು ಕೆಎಂಸಿ ಆಸ್ಪತ್ರೆ ಸಹಯೋಗದಲ್ಲಿ ಕಕ್ಕಿಂಜೆ ಶ್ರೀಕೃಷ್ಣ ಆಸ್ಪತ್ರೆಯಲ್ಲಿ ನೂತನ ತುರ್ತು ಚಿಕಿತ್ಸಾ ವೈದ್ಯಕೀಯ ಕೇಂದ್ರ ಉದ್ಘಾಟನೆ

Suddi Udaya

ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಉಪ ನಿರೀಕ್ಷಕರಾಗಿ (ಎಸ್.ಐ) ಭಡ್ತಿಗೊಂಡು, ವರ್ಗಾವಣೆಗೊಂಡ ದೇವಪ್ಪ ಎಂ. ರವರಿಗೆ ಬಿಳ್ಕೋಡುಗೆ

Suddi Udaya

ತಣ್ಣೀರುಪಂತ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಅಧ್ಯಕ್ಷರಾಗಿ ಜಯಾನಂದ ಕಲ್ಲಾಪು, ಉಪಾಧ್ಯಕ್ಷರಾಗಿ ಸುನಿಲ್ ಅಣವು

Suddi Udaya

ವಿಜಯ ಕ್ರೇಡಿಟ್ ಕೋ- ಆಪರೇಟಿವ್ ಸೊಸೈಟಿಗೆ ‘ದ.ಕ ಜಿಲ್ಲಾ ಉತ್ತಮ ಪತ್ತಿನ ಸಹಕಾರಿ ಸಂಘ’ ಪ್ರಶಸ್ತಿ

Suddi Udaya
error: Content is protected !!