23.7 C
ಪುತ್ತೂರು, ಬೆಳ್ತಂಗಡಿ
April 24, 2026
ತಾಲೂಕು ಸುದ್ದಿಪ್ರಮುಖ ಸುದ್ದಿ

ಸೆ.6: ರೆಖ್ಯದಲ್ಲಿ 24ನೇ ವರ್ಷದ ಮೊಸರು ಕುಡಿಕೆ ಉತ್ಸವ

ರೆಖ್ಯ: ಸಾರ್ವಜನಿಕ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ರೆಖ್ಯ, ವಿಶ್ವಹಿಂದೂ ಪರಿಷತ್ ಬಜರಂಗದಳ ರೆಖ್ಯ ಇದರ ನೇತೃತ್ವದಲ್ಲಿ ಶ್ರೀ ಕ್ಷೇ. ಧ.ಗ್ರಾ.ಯೋಜನೆ ರೆಖ್ಯ, ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂದಿರ ರೆಖ್ಯ, ಶ್ರೀ ಗುಡ್ರಮಲ್ಲೇಶ್ವರ ದೇವಸ್ಥಾನ ರೆಖ್ಯ, ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಕೋಲಾರು ರೆಖ್ಯ, ಶ್ರೀ ಅಯ್ಯಪ್ಪ ಭಜನಾ ಮಂದಿರ ರೆಖ್ಯ ಇದರ ಸಹಕಾರದೊಂದಿಗೆ ರೆಖ್ಯ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂದಿರದಲ್ಲಿ ಸೆ.6 ರಂದು 24ನೇ ವರ್ಷದ ಮೊಸರು ಕುಡಿಕೆ ಉತ್ಸವ ಜರುಗಲಿದೆ. ಬೆಳ್ಳಗಿನಿಂದ ಪುರುಷರಿಗೆ, ಮಹಿಳೆಯರಿಗೆ, ಮಕ್ಕಳಿಗೆ ವಿವಿಧ ಆಟೋಟ ಸ್ಪರ್ಧೆಗಳು ಜರುಗಲಿದೆ. ಸಂಜೆ ನಡೆಯುವ ಧಾರ್ಮಿಕ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ರೆಖ್ಯ ಸಾರ್ವಜನಿಕ ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿ ಅಧ್ಯಕ್ಷ ನವೀನ್ ಕೆ. ರೆಖ್ಯ ವಹಿಸಲಿದ್ದಾರೆ.

ಧಾರ್ಮಿಕ ಉಪನ್ಯಾಸವನ್ನು ನೇಲ್ಯಡ್ಕ ಸರಕಾರಿ ಪ್ರೌಢಶಾಲಾ ಶಿಕ್ಷಕ ಅರವಿಂದ ಗೋಖಲೆ ನೀಡಲಿದ್ದು, ವಿವಿಧ ಗಣ್ಯರು ಅತಿಥಿಗಳಾಗಿ ಆಗಮಿಸಲಿದ್ದಾರೆ. ಕಾರ್ಯಕ್ರಮದಲ್ಲಿ ನಿವೃತ್ತ ಯೋಧ ಮಹಾಬಲ ಕೆ. ಮುದ್ದಿಗೆ, ಹತ್ಯಡ್ಕ ಪ್ರಾ.ಕೃ.ಪ.ಸ ಸಂಘದ ನಿವೃತ್ತ ಸಿಇಒ ತ್ಯಾಂಪಣ್ಣ ಶೆಟ್ಟಿಗಾರ್‌ರವರನ್ನು ಸನ್ಮಾನಿಸಲಾಗುವುದು.

Related posts

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಬೆಳಾಲು ಕಾರ್ಯಕ್ಷೇತ್ರದ ಸದಸ್ಯ ಬಾಬು ಗೌಡ ರವರಿಗೆ ಊರುಗೋಲು ವಿತರಣೆ

Suddi Udaya

ಜು.27: ದ.ಕ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ: ಜಿಲ್ಲಾಧಿಕಾರಿ ಆದೇಶ

Suddi Udaya

ಚಾರ್ಮಾಡಿ ತ್ರಿವರ್ಣ ಸಂಜೀವಿನಿ ಮಹಿಳಾ ಒಕ್ಕೂಟದ ಮಾಸಿಕ ಸಭೆ

Suddi Udaya

ಶಿಶಿಲದಲ್ಲಿ ನರೇಂದ್ರ ಮೋದಿಯವರ ಪರಿಕಲ್ಪನೆಯಂತೆ ಒಂಬತ್ತು ಜನ ಮಹಿಳೆಯರಿಂದ ಪ್ರಥಮ ಮತದಾನ

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದಲ್ಲಿ ಬಿಜೆಪಿ ಜಯಭೇರಿ: 18216 ಮತಗಳ ಅಂತರದಿಂದ ಹರೀಶ್ ಪೂಂಜ ಪ್ರಚಂಡ ಗೆಲುವು: ರಕ್ಷಿತ್ ಶಿವರಾಂಗೆ ಸೋಲು

Suddi Udaya

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಉಡುಪಿ ಜಿಲ್ಲೆ ಪ್ರಥಮ, ದ.ಕ ಜಿಲ್ಲೆ ದ್ವಿತೀಯ

Suddi Udaya
error: Content is protected !!