September 6, 2026
ತಾಲೂಕು ಸುದ್ದಿಪ್ರಮುಖ ಸುದ್ದಿ

ಸೆ.6: ರೆಖ್ಯದಲ್ಲಿ 24ನೇ ವರ್ಷದ ಮೊಸರು ಕುಡಿಕೆ ಉತ್ಸವ

ರೆಖ್ಯ: ಸಾರ್ವಜನಿಕ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ರೆಖ್ಯ, ವಿಶ್ವಹಿಂದೂ ಪರಿಷತ್ ಬಜರಂಗದಳ ರೆಖ್ಯ ಇದರ ನೇತೃತ್ವದಲ್ಲಿ ಶ್ರೀ ಕ್ಷೇ. ಧ.ಗ್ರಾ.ಯೋಜನೆ ರೆಖ್ಯ, ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂದಿರ ರೆಖ್ಯ, ಶ್ರೀ ಗುಡ್ರಮಲ್ಲೇಶ್ವರ ದೇವಸ್ಥಾನ ರೆಖ್ಯ, ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಕೋಲಾರು ರೆಖ್ಯ, ಶ್ರೀ ಅಯ್ಯಪ್ಪ ಭಜನಾ ಮಂದಿರ ರೆಖ್ಯ ಇದರ ಸಹಕಾರದೊಂದಿಗೆ ರೆಖ್ಯ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂದಿರದಲ್ಲಿ ಸೆ.6 ರಂದು 24ನೇ ವರ್ಷದ ಮೊಸರು ಕುಡಿಕೆ ಉತ್ಸವ ಜರುಗಲಿದೆ. ಬೆಳ್ಳಗಿನಿಂದ ಪುರುಷರಿಗೆ, ಮಹಿಳೆಯರಿಗೆ, ಮಕ್ಕಳಿಗೆ ವಿವಿಧ ಆಟೋಟ ಸ್ಪರ್ಧೆಗಳು ಜರುಗಲಿದೆ. ಸಂಜೆ ನಡೆಯುವ ಧಾರ್ಮಿಕ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ರೆಖ್ಯ ಸಾರ್ವಜನಿಕ ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿ ಅಧ್ಯಕ್ಷ ನವೀನ್ ಕೆ. ರೆಖ್ಯ ವಹಿಸಲಿದ್ದಾರೆ.

ಧಾರ್ಮಿಕ ಉಪನ್ಯಾಸವನ್ನು ನೇಲ್ಯಡ್ಕ ಸರಕಾರಿ ಪ್ರೌಢಶಾಲಾ ಶಿಕ್ಷಕ ಅರವಿಂದ ಗೋಖಲೆ ನೀಡಲಿದ್ದು, ವಿವಿಧ ಗಣ್ಯರು ಅತಿಥಿಗಳಾಗಿ ಆಗಮಿಸಲಿದ್ದಾರೆ. ಕಾರ್ಯಕ್ರಮದಲ್ಲಿ ನಿವೃತ್ತ ಯೋಧ ಮಹಾಬಲ ಕೆ. ಮುದ್ದಿಗೆ, ಹತ್ಯಡ್ಕ ಪ್ರಾ.ಕೃ.ಪ.ಸ ಸಂಘದ ನಿವೃತ್ತ ಸಿಇಒ ತ್ಯಾಂಪಣ್ಣ ಶೆಟ್ಟಿಗಾರ್‌ರವರನ್ನು ಸನ್ಮಾನಿಸಲಾಗುವುದು.

Related posts

ವೇಣೂರಿನಲ್ಲಿ ಎರಡು ತಂಡಗಳ ನಡುವೆ ಹೊಡೆದಾಟ: ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಬೆಳ್ತಂಗಡಿ: ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಗೂಡ್ಸ್ ಟೆಂಪೋ

Suddi Udaya

ಗರ್ಡಾಡಿ ಪಲ್ಗುಣಿ ನದಿ ಪರಿಸರದಲ್ಲಿ ನೀರು ನಾಯಿ

Suddi Udaya

ಎಕ್ಸೆಲ್ ಗುರುವಾಯನಕೆರೆ: ದ್ವಿತೀಯ ಪಿಯುಸಿಯಲ್ಲಿ ಅಭೂತ ಪೂರ್ವ ಸಾಧನೆ-ರಾಜ್ಯದ ಟಾಪ್ 10 ರಲ್ಲಿ ಎಕ್ಸೆಲ್ ನ 34 ವಿದ್ಯಾರ್ಥಿಗಳು

Suddi Udaya

ವೇಣೂರು ನವಚೇತನ ಆಂಗ್ಲಮಾಧ್ಯಮ ಶಾಲೆಯ ವಾರ್ಷಿಕೋತ್ಸವ

Suddi Udaya

ಕೂಟ ಮಹಾ ಜಗತ್ತು ಬೆಳ್ತಂಗಡಿ ಅಂಗಸಂಸ್ಥೆಯ ಮಹಿಳಾ ವೇದಿಕೆಯಿಂದ ಆಟಿಕೂಟ ಆಚರಣೆ

Suddi Udaya
error: Content is protected !!