25.5 C
ಪುತ್ತೂರು, ಬೆಳ್ತಂಗಡಿ
June 8, 2026
ತಾಲೂಕು ಸುದ್ದಿಪ್ರಮುಖ ಸುದ್ದಿ

ಸೆ.6: ರೆಖ್ಯದಲ್ಲಿ 24ನೇ ವರ್ಷದ ಮೊಸರು ಕುಡಿಕೆ ಉತ್ಸವ

ರೆಖ್ಯ: ಸಾರ್ವಜನಿಕ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ರೆಖ್ಯ, ವಿಶ್ವಹಿಂದೂ ಪರಿಷತ್ ಬಜರಂಗದಳ ರೆಖ್ಯ ಇದರ ನೇತೃತ್ವದಲ್ಲಿ ಶ್ರೀ ಕ್ಷೇ. ಧ.ಗ್ರಾ.ಯೋಜನೆ ರೆಖ್ಯ, ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂದಿರ ರೆಖ್ಯ, ಶ್ರೀ ಗುಡ್ರಮಲ್ಲೇಶ್ವರ ದೇವಸ್ಥಾನ ರೆಖ್ಯ, ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಕೋಲಾರು ರೆಖ್ಯ, ಶ್ರೀ ಅಯ್ಯಪ್ಪ ಭಜನಾ ಮಂದಿರ ರೆಖ್ಯ ಇದರ ಸಹಕಾರದೊಂದಿಗೆ ರೆಖ್ಯ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂದಿರದಲ್ಲಿ ಸೆ.6 ರಂದು 24ನೇ ವರ್ಷದ ಮೊಸರು ಕುಡಿಕೆ ಉತ್ಸವ ಜರುಗಲಿದೆ. ಬೆಳ್ಳಗಿನಿಂದ ಪುರುಷರಿಗೆ, ಮಹಿಳೆಯರಿಗೆ, ಮಕ್ಕಳಿಗೆ ವಿವಿಧ ಆಟೋಟ ಸ್ಪರ್ಧೆಗಳು ಜರುಗಲಿದೆ. ಸಂಜೆ ನಡೆಯುವ ಧಾರ್ಮಿಕ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ರೆಖ್ಯ ಸಾರ್ವಜನಿಕ ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿ ಅಧ್ಯಕ್ಷ ನವೀನ್ ಕೆ. ರೆಖ್ಯ ವಹಿಸಲಿದ್ದಾರೆ.

ಧಾರ್ಮಿಕ ಉಪನ್ಯಾಸವನ್ನು ನೇಲ್ಯಡ್ಕ ಸರಕಾರಿ ಪ್ರೌಢಶಾಲಾ ಶಿಕ್ಷಕ ಅರವಿಂದ ಗೋಖಲೆ ನೀಡಲಿದ್ದು, ವಿವಿಧ ಗಣ್ಯರು ಅತಿಥಿಗಳಾಗಿ ಆಗಮಿಸಲಿದ್ದಾರೆ. ಕಾರ್ಯಕ್ರಮದಲ್ಲಿ ನಿವೃತ್ತ ಯೋಧ ಮಹಾಬಲ ಕೆ. ಮುದ್ದಿಗೆ, ಹತ್ಯಡ್ಕ ಪ್ರಾ.ಕೃ.ಪ.ಸ ಸಂಘದ ನಿವೃತ್ತ ಸಿಇಒ ತ್ಯಾಂಪಣ್ಣ ಶೆಟ್ಟಿಗಾರ್‌ರವರನ್ನು ಸನ್ಮಾನಿಸಲಾಗುವುದು.

Related posts

ಕೊಕ್ಕಡ: ಪಾರ್ಪಿಕಲ್ -ದರ್ಬೆತಕ್ಕದಲ್ಲಿ ರಸ್ತೆಗೆ ಬಿದ್ದ ಮರ, ವಾಹನ ಸಂಚಾರಕ್ಕೆ ತಡೆ

Suddi Udaya

ನಾಳ ವರ್ಷವಧಿ ಜಾತ್ರಾ ಮಹೋತ್ಸವ ಲೆಕ್ಕಪತ್ರ ಮಂಡನೆ, ಅಭಿನಂದನೆ ಹಾಗೂ ಅಧಿಕಾರ ಹಸ್ತಾಂತರ

Suddi Udaya

ಮಹಾಕುಂಭಮೇಳದಲ್ಲಿ ಪವಿತ್ರ ಸ್ನಾನಗೈದ ಯುವ ಕಾಂಗ್ರೆಸ್ ರಾಜ್ಯ ಸಮಿತಿಯ ಕಾರ್ಯದರ್ಶಿ ಪವನ್ ಸಾಲ್ಯಾನ್ ಕೊಲ್ಲಾಜೆ

Suddi Udaya

ಜೀವಿತಾವಧಿಯಲ್ಲಿ ಹೇಗೆ ಬದುಕಿದ್ದಾನೆ ಎಂಬುದು ಬಹಳ ಮುಖ್ಯ: ತಿಮ್ಮಣ್ಣರಸ ಡಾ. ಪದ್ಮಪ್ರಸಾದ್ ಅಜಿಲ – ತಾ.ಪಂ ವಿಶ್ರಾಂತ ಅಧೀಕ್ಷಕ‌ ಪ್ರಶಾಂತ್ ಬಳಂಜ ಅವರಿಂದ ವಿಶಿಷ್ಟ ರೀತಿಯ ಕೃತಜ್ಞತಾ ಕಾರ್ಯಕ್ರಮ

Suddi Udaya

ಪಣೆಜಾಲು- ಗುಂಪಲಾಜೆ ಶ್ರೀ ನಾಗ-ರಕ್ತೇಶ್ವರಿ ಹಾಗೂ ಪರಿವಾರ ದೈವಗಳಿಗೆ ದೇವಸ್ಥಾನ, ಕಟ್ಟೆಗಳಿಗೆ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ಅಳದಂಗಡಿ ವಲಯದ ಭಜನಾ ಮಂಡಳಿಗಳ ಪದಾಧಿಕಾರಿಗಳ ಸಭೆ

Suddi Udaya
error: Content is protected !!