May 20, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಸೆ.7: ಬರೆಂಗಾಯ ಸಾರ್ವಜನಿಕ ಶ್ರೀ ಕೃಷ್ಣ ಜನ್ಮಾಷ್ಟಮಿ ಹಾಗೂ ಮೊಸರು ಕುಡಿಕೆ ಉತ್ಸವ

ನಿಡ್ಲೆ: ಸಾರ್ವಜನಿಕ ಶ್ರೀಕೃಷ್ಣ ಜನ್ಮಾಷ್ಟಮಿ ಸಮಿತಿ ಬರೆಂಗಾಯ ಹಾಗೂ ನಿಸರ್ಗ ಯುವಜನೇತರ ಮಂಡಲ ಬರೆಂಗಾಯ ನಿಡ್ಲೆ ಇದರ ಸಂಯುಕ್ತ ಆಶ್ರಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ ಹಾಗೂ ಮೊಸರು ಕುಡಿಕೆ ಉತ್ಸವವು ಸೆ.7 ರಂದು ಉ.ದ.ಕ.ಜಿ.ಪ.ಹಿ.ಪ್ರಾ. ಶಾಲೆ ಬರೆಂಗಾಯದಲ್ಲಿ ಜರುಗಲಿದೆ.

ಬರೆಂಗಾಯ ಭಟಾರಿ ಯಾನೆ ಮಲೆದೇವತೆ ದೈವಸ್ಥಾನ ಕೊಡಂಗೆ ಇದರ ಆಡಳಿತ ಟ್ರಸ್ಟ್ ಅಧ್ಯಕ್ಷ ಹೆಚ್ ವಿಶ್ವನಾಥ ರಾವ್ ಹಿರ್ತಡ್ಕ ಉದ್ಘಾಟಿಸಲಿದ್ದಾರೆ.ಅಧ್ಯಕ್ಷತೆಯನ್ನು ಬರೆಂಗಾಯ ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷ ರುಕ್ಮಯ್ಯ ಪೂಜಾರಿ ಪೋರ್ಕಳ ವಹಿಸಲಿರುವರು, ಶ್ರೀ ನಾರಾಯಣಗುರು ಕಾಲೇಜು ಕುದ್ರೋಳಿ ಇದರ ಉಪನ್ಯಾಸಕರಾದ ಕೇಶವ ಬಂಗೇರ ಧಾರ್ಮಿಕ ಪ್ರವಚನ ನೀಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಶಾಸಕ ಹರೀಶ್ ಪೂಂಜ, ಕೊಕ್ಕಡ ಉಪವಲಯ ಅರಣ್ಯಧಿಕಾರಿ ಕೆ.ಆರ್ ಅಶೋಕ್, ನಿಡ್ಲೆ ಗ್ರಾ.ಪಂ. ಅಧ್ಯಕ್ಷೆ ಶ್ರೀಮತಿ ಶ್ಯಾಮಲ, ಬರೆಂಗಾಯ ಶಾಲಾ ಮುಖ್ಯ ಶಿಕ್ಷಕ ಗೋಪಾಲ್ ಆಗಮಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಮಿಯಾರು ಶಾಲಾ ರಾಷ್ಟ್ರಪ್ರಶಸ್ತಿ ಪುರಸ್ಕೃತ ಶಿಕ್ಷಕಿ ಕು.ವಸಂತಿ ಟಿ, ಕೊಕ್ಕಡ ಉಪವಲಯ ಅರಣ್ಯಾಧಿಕಾರಿ ಕೆ.ಆರ್ ಅಶೋಕ್, ಕೊಕ್ಕಡ ಫ್ರೌಢ ಶಾಲಾ ಶಿಕ್ಷಕ ದಯಾನಂದ ಪಿ.ಡಿರವರನ್ನು ಸನ್ಮಾನಿಸಲಾಗುವುದು.


ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ದ.ಕ ಜಿಲ್ಲೆಯ ಸುಪ್ರಸಿದ್ದ ಯಕ್ಷಗಾನ ಕಲಾವಿದರ ಕೂಡುವಿಕೆಯಿಂದ ಡಿ ಮನೋಹರ್ ಕುಮಾರ್ ವಿರಚಿತ ಮತ್ತು ಅಶೋಕ್ ಶೆಟ್ಟಿ ಸರಪಾಡಿ ಇವರ ಸಂಯೋಜನೆಯಲ್ಲಿ ಯಕ್ಷಗಾನ ಗೆಜ್ಜೆದ ಪೂಜೆ ಜರುಗಲಿದೆ.

Related posts

ಕನ್ಯಾಡಿ: ಪ್ರಗತಿಪರ ಕೃಷಿಕ ಬೊಲ್ಲೊಟ್ಟು ಬಾಬು ಶೆಟ್ಟಿ ನಿಧನ

Suddi Udaya

ಹೆದ್ದಾರಿ ಕಾಮಗಾರಿಯನ್ನು ಕಕ್ಕಿಂಜೆ ಪೇಟೆ ಮೂಲಕ ಮಾಡುವಂತೆ ಆಗ್ರಹ: ಬೈಪಾಸ್ ರಸ್ತೆ ಬೇಡ: ಪೇಟೆಯ ವರ್ತಕರ ಬೆಂಬಲ ಇದೆ

Suddi Udaya

ವಾಲಿಬಾಲ್ ಪಂದ್ಯಾಟ: ಮುಂಡಾಜೆ ವಿವೇಕಾನಂದ ಶಿಕ್ಷಣ ಸಂಸ್ಥೆಯ ಬಾಲಕಿಯರ ತಂಡ ಪ್ರಥಮ ಸ್ಥಾನ

Suddi Udaya

ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ವತಿಯಿಂದ ಪ್ರತಿಭಾ ಪುರಸ್ಕಾರ

Suddi Udaya

ಕುಂಭಶ್ರೀ ಸಮೂಹ ಶಿಕ್ಷಣ ಸಂಸ್ಥೆಯ ಸಂಚಾಲಕರಾದ ಗಿರೀಶ್ ಕೆ.ಎಚ್.ರವರಿಗೆ ಸನ್ಮಾನ

Suddi Udaya

ಸುಮಾರು 700 ವರ್ಷಗಳ ಇತಿಹಾಸ ಹೊಂದಿದ್ದ ತೆಕ್ಕಾರಿನ ಶ್ರೀಗೋಪಾಲಕೃಷ್ಣ ದೇವರಿಗೆ ನೂರೈವತ್ತು ವರ್ಷಗಳ ನಂತರ ಬಾಲಾಲಯದಲ್ಲಿ ಪ್ರಥಮ ಪೂಜೆ

Suddi Udaya
error: Content is protected !!