ಕೊಕ್ಕಡ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಸೌತಡ್ಕ ಶ್ರೀ ಮಹಾಗಣಪತಿ ಸೇವಾ ಟ್ರಸ್ಟ್ ನಿಂದ ರೂ.2 ಲಕ್ಷ ದೇಣಿಗೆ

Suddi Udaya

ಕೊಕ್ಕಡ :ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದ ನೂತನ ಶಿಲಾಮಯ ಗರ್ಭಗುಡಿಗಳೊಂದಿಗೆ ಜೀರ್ಣೋದ್ಧಾರಗೊಳ್ಳುತ್ತಿರುವ ಶ್ರೀ ಕ್ಷೇತ್ರಕ್ಕೆ ಶ್ರೀ ಮಹಾಗಣಪತಿ ಸೇವಾ ಟ್ರಸ್ಟ್ ಸೌತಡ್ಕ ಇವರಿಂದ 2 ಲಕ್ಷ ರೂ. ಗಳ ದೇಣಿಗೆಯನ್ನು ಸೆ.4ರಂದು ಶ್ರೀ ಕ್ಷೇತ್ರದಲ್ಲಿ ಹಸ್ತಾಂತರಿಸಲಾಯಿತು.


ಈ ಸಂಧರ್ಭದಲ್ಲಿ ಆರ್. ಎಸ್. ಎಸ್. ಮುಖಂಡ ಕೃಷ್ಣ ಭಟ್, ಕೊಕ್ಕಡ ಸಹಕಾರಿ ಸಂಘದ ಅಧ್ಯಕ್ಷ ಕುಶಾಲಪ್ಪ ಗೌಡ ಪೂವಾಜೆ, ದೇವಸ್ಥಾನದ ಜೀರ್ಣೋದ್ದಾರ ಸಮಿತಿ ಉಪಾಧ್ಯಕ್ಷ ಕುಶಾಲಪ್ಪ ಗೌಡ ಪುಡಿಕೆತ್ತೂರು, ದೇವಸ್ಥಾನದ ಅರ್ಚಕರು, ಟ್ರಸ್ಟ್ ನ ಸದಸ್ಯರು ಹಾಗೂ ಭಕ್ತಾದಿಗಳು ಮತ್ತು ಶ್ರೀ ಕ್ಷೇತ್ರದ ಜೀರ್ಣೋದ್ಧಾರ ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

Leave a Comment

error: Content is protected !!