25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಶ್ರೀ ಧ.ಮಂ ಪ.ಪೂ ಕಾಲೇಜಿನಲ್ಲಿ ಸಂಸ್ಕೃತೋತ್ಸವ ಕಾರ್ಯಕ್ರಮ

ಉಜಿರೆ: ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ಸಂಸ್ಕೃತ ಭಾಷಾ ವಿಭಾಗದ ಸಂಸ್ಕೃತ ಸಂಘ ಹಾಗೂ ಸಂಸ್ಕೃತ ಅಂತರಾಧ್ಯಯನ ವೃತ್ತಮ್ ಇವುಗಳ ಸಹಭಾಗಿತ್ವದಲ್ಲಿ ಸಂಸ್ಕೃತೋತ್ಸವ ಕಾರ್ಯಕ್ರಮ ನಡೆಯಿತು.
ಪ್ರಾಚಾರ್ಯ ಪ್ರಮೋದ್ ಕುಮಾರ್ ಅವರು ಶುಭಾಶಂಸನೆ ಮಾಡಿ ಸಂಸ್ಕೃತ ಭಾಷಾ ಮಹತ್ವ ತಿಳಿಸಿದರು.

ಮಹಾಕವಿ ಕಾಳಿದಾಸನ ಮೇಘದೂತಮ್ ಕಾವ್ಯದ ಅನುಸಂಧಾನ ಕಾರ್ಯಕ್ರಮ ನಡೆಯಿತು. ಅರ್ಥಗಾರಿಕೆಯಲ್ಲಿ ಅಂಜಲಿ , ಲಘ ಶಾಸ್ತ್ರೀಯ ಸಂಗೀತದಲ್ಲಿ ಪ್ರಸೀದಾ ರಾವ್ , ಶ್ಲೋಕದಲ್ಲಿ ಆದಿತ್ಯ ಹೆಗಡೆ , ಶಾಸ್ತ್ರೀಯ ಸಂಗೀತದಲ್ಲಿ ಸಿಂಧೂರ ಶೆಂಡ್ಯೆ, ಯಕ್ಷಗಾನ ಭಾಗವತಿಕೆಯಲ್ಲಿ ಸಿಂಚನಾ, ವರ್ಣ ಚಿತ್ರದಲ್ಲಿ ಸೌಂದರ್ಯ ಅವರು ಮೇಘದೂತಮ್ ಕಾವ್ಯವನ್ನು ಪ್ರಸ್ತುತಪಡಿಸಿದರು. ಅಭಿರಾಮ ಹೆಚ್.ವೈ ಹಾಗೂ ವೈಶಾಖ್ ಪಕ್ಕವಾದ್ಯಗಳಲ್ಲಿ ಸಹಕರಿಸಿದರು.

ಸಂಸ್ಕೃತ ಭಾಷಾ ವಿಭಾಗದ ಮುಖ್ಯಸ್ಥ ಡಾ.ಪ್ರಸನ್ನಕುಮಾರ ಐತಾಳ್ ಪ್ರಾಸ್ತಾವಿಕ ಮಾತನಾಡಿದರು. ಚಂದ್ರಮೌಳಿ ಶರ್ಮಾ ಸ್ವಾಗತಿಸಿ, ಶ್ರೀತುಳಸೀ ಭಟ್ ವಂದಿಸಿದರು. ಸಂಸ್ಕೃತ ಸಂಘದ ಅಧ್ಯಕ್ಷ ಆದಿತ್ಯ ಹೆಗಡೆ ನಿರೂಪಿಸಿದರು.

Related posts

ಡಾ| ಡಿ.ವೀರೇಂದ್ರ ಹೆಗ್ಗಡೆಯವರಿಗೆ ಕೊಕ್ಕಡ ನಗರ ಭಜನಾ ಸಪ್ತಾಹದ ಅಂಗವಾಗಿ ಪಿಲಿ ನಲಿಕೆ -2025 ರ ಆಮಂತ್ರಣ ಪತ್ರಿಕೆ ನೀಡಿ, ಆಹ್ವಾನ

Suddi Udaya

ನೈರುತ್ಯ ಶಿಕ್ಷಕ ಕ್ಷೇತ್ರದ ಜೆಡಿಎಸ್‌ ಮೈತ್ರಿ ಅಭ್ಯರ್ಥಿ ಎಸ್.ಎಲ್ ಭೋಜೇಗೌಡ ಗೆಲುವು

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಧ್ಯಾನ ತರಬೇತಿ

Suddi Udaya

ಸ್ಯಾಕ್ಸೋಫೋನ್ ಕಲಾವಿದ ಡಿ.ಬಿ.ಪ್ರಕಾಶ ದೇವಾಡಿಗರಿಗೆ ಅಮೇರಿಕದ ಪುತ್ತಿಗೆ ಮಠದಲ್ಲಿ “ಕೃಷ್ಣಾನುಗ್ರಹ ಪತ್ರ” ಪ್ರದಾನ

Suddi Udaya

ಹದಗೆಟ್ಟಿರುವ ಸೋಮಂತಡ್ಕ ಮಜಲು ರಸ್ತೆ : ಸಂಬಂಧ ಪಟ್ಟವರು ರಸ್ತೆಯ ದುರವಸ್ಥೆಯನ್ನು ಸರಿಪಡಿಸುವಂತೆ ಗ್ರಾಮಸ್ಥರ ಮನವಿ

Suddi Udaya

ಇತ್ತೀಚೆಗೆ ಮೃತರಾದ ಕುಕ್ಕಪ್ಪ ಗೌಡರವರ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya
error: Content is protected !!