September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ : ಶ್ರೀ ಧ.ಮಂ. ಆಂ.ಮಾ. (ರಾಜ್ಯ ಪಠ್ಯಕ್ರಮ) ಪ್ರೌಢಶಾಲೆಯಲ್ಲಿ ಶಿಕ್ಷಕರ ದಿನಾಚರಣೆ

ಉಜಿರೆ: ವಿದ್ಯಾರ್ಥಿಗಳು ಉತ್ತಮ ಸಂಸ್ಕೃತಿ, ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕು. ಗುರುಗಳಿಗೆ ಮಾತೃ-ಪಿತೃ ಸಮಾನ ಸ್ಥಾನಮಾನ ನೀಡಿ ಗೌರವಿಸಬೇಕು ಎಂದು ಶ್ರೀ ಧರ್ಮಸ್ಥಳ ಮoಜುನಾಥೇಶ್ವರ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಬಿ. ಸೋಮಶೇಖರ್ ಶೆಟ್ಟಿ ಹೇಳಿದರು.


ಇಲ್ಲಿನ ಶ್ರೀ ಧ.ಮಂ. ಆಂಗ್ಲ ಮಾಧ್ಯಮ (ರಾಜ್ಯ ಪಠ್ಯಕ್ರಮ) ಪ್ರೌಢಶಾಲೆಯಲ್ಲಿ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿದರು.
ವಿದ್ಯಾರ್ಥಿಗಳ ಮುಂದೆ ಗುರಿ ಇರಬೇಕು; ಹಿಂದೆ ಗುರು ಇರಬೇಕು. ದಾರಿ ತೋರಿ ಮುನ್ನಡೆಸುವ ಗುರುವಿಗೆ ತಂದೆ-ತಾಯಿಗೆ ನೀಡುವ ರೀತಿಯಲ್ಲಿಯೇ ಗೌರವದ ಸ್ಥಾನ ನೀಡಬೇಕು ಎಂದು ಅವರು ತಿಳಿಸಿದರು. ನಾನು ಸೇವೆ ಸಲ್ಲಿಸಿದ ಈ ಶಾಲೆಯಲ್ಲಿ ನನ್ನ ವಿದ್ಯಾರ್ಥಿಗಳೇ ಶಿಕ್ಷಕರಾಗಿದ್ದು ಅವರೊಂದಿಗೆ ವೇದಿಕೆ ಹಂಚಿಕೊಳ್ಳುತ್ತಿರುವುದು ಸಂತೋಷ ತಂದಿದೆ” ಎಂದು ಅವರು ಹರ್ಷ ವ್ಯಕ್ತಪಡಿಸಿದರು.


ವಿದ್ಯಾರ್ಥಿಗಳು ಸಾಂಸ್ಕೃತಿಕ ಕಾರ್ಯಕ್ರಮ ಪ್ರಸ್ತುತಪಡಿಸಿ, ಶಿಕ್ಷಕರಿಗೆ ವಿವಿಧ ಆಟೋಟ ಸ್ಪರ್ಧೆಗಳನ್ನು ನಡೆಸಿದರು.


ವಿದ್ಯಾರ್ಥಿಗಳಾದ ಪ್ರಥಮ್ ಸ್ವಾಗತಿಸಿ, ಶೇಕ್ ಅಬ್ದುಲ್ ರಿಹಾನ್ ವಂದಿಸಿ, ಯೋಗಾನಂದ ನಿರೂಪಿಸಿದರು.

Related posts

ಅರಸಿನಮಕ್ಕಿ: ಕಪಿಲ ಕೇಸರಿ ಯುವಕ ಮಂಡಲದ ವತಿಯಿಂದ ಶ್ರೀರಾಮೋತ್ಸವ ಮತ್ತು ಹೋಳಿಗೆ ಹಬ್ಬ

Suddi Udaya

ಅಳದಂಗಡಿ ಹಾಲು ಉತ್ಪಾದಕರ ಸಹಕಾರ ಸಂಘದ ಸುವರ್ಣ ಮಹೋತ್ಸವ ಸಂಪನ್ನ: ಉತ್ತಮ ಹೈನುಗಾರರು ಹಾಗೂ ಮಾಜಿ ಅಧ್ಯಕ್ಷರುಗಳಿಗೆ ಸನ್ಮಾನ

Suddi Udaya

ಗೋ ವಧೆ ಮಾಫಿಯಾದವರನ್ನು ಮಟ್ಟಹಾಕಿ ಜೈಲಿಗಟ್ಟಲು ವಿಶ್ವ ಹಿಂದೂ ಪರಿಷತ್ ಆಗ್ರಹ

Suddi Udaya

ಸುರ್ಯ ದೇವಸ್ಥಾನದ ಆನುವಂಶಿಕ ಆಡಳಿತಮೊಕ್ತೇಸರಾಗಿ ಡಾ. ಸತೀಶ್ಚಂದ್ರ ಸುರ್ಯಗುತ್ತು ನೇಮಕ

Suddi Udaya

ಸೌಜನ್ಯ ಕೊಲೆ ಪ್ರಕರಣವನ್ನು ಹಾಲಿ ನ್ಯಾಯಾಧೀಶರ ಮುಖಾಂತರ ನ್ಯಾಯಾಂಗ ತನಿಖೆಗೆ ವಹಿಸಲು ರಾಜ್ಯ ಮತ್ತು ಕೇಂದ್ರ ಸರಕಾರಕ್ಕೆ ವಿ.ಹಿಂ.ಪಂ ಆಗ್ರಹ

Suddi Udaya

ಅಂಡಿಂಜೆ: 31ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ: ಆರ್ಯಭಟ ಪ್ರಶಸ್ತಿ ಪುರಸ್ಕೃತ ದೇವೇಂದ್ರ ಹೆಗ್ಡೆ ಕೊಕ್ರಾಡಿ ರವರಿಗೆ ಸನ್ಮಾನ

Suddi Udaya
error: Content is protected !!