July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ : ಶ್ರೀ ಧ.ಮಂ. ಆಂ.ಮಾ. (ರಾಜ್ಯ ಪಠ್ಯಕ್ರಮ) ಪ್ರೌಢಶಾಲೆಯಲ್ಲಿ ಶಿಕ್ಷಕರ ದಿನಾಚರಣೆ

ಉಜಿರೆ: ವಿದ್ಯಾರ್ಥಿಗಳು ಉತ್ತಮ ಸಂಸ್ಕೃತಿ, ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕು. ಗುರುಗಳಿಗೆ ಮಾತೃ-ಪಿತೃ ಸಮಾನ ಸ್ಥಾನಮಾನ ನೀಡಿ ಗೌರವಿಸಬೇಕು ಎಂದು ಶ್ರೀ ಧರ್ಮಸ್ಥಳ ಮoಜುನಾಥೇಶ್ವರ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಬಿ. ಸೋಮಶೇಖರ್ ಶೆಟ್ಟಿ ಹೇಳಿದರು.


ಇಲ್ಲಿನ ಶ್ರೀ ಧ.ಮಂ. ಆಂಗ್ಲ ಮಾಧ್ಯಮ (ರಾಜ್ಯ ಪಠ್ಯಕ್ರಮ) ಪ್ರೌಢಶಾಲೆಯಲ್ಲಿ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿದರು.
ವಿದ್ಯಾರ್ಥಿಗಳ ಮುಂದೆ ಗುರಿ ಇರಬೇಕು; ಹಿಂದೆ ಗುರು ಇರಬೇಕು. ದಾರಿ ತೋರಿ ಮುನ್ನಡೆಸುವ ಗುರುವಿಗೆ ತಂದೆ-ತಾಯಿಗೆ ನೀಡುವ ರೀತಿಯಲ್ಲಿಯೇ ಗೌರವದ ಸ್ಥಾನ ನೀಡಬೇಕು ಎಂದು ಅವರು ತಿಳಿಸಿದರು. ನಾನು ಸೇವೆ ಸಲ್ಲಿಸಿದ ಈ ಶಾಲೆಯಲ್ಲಿ ನನ್ನ ವಿದ್ಯಾರ್ಥಿಗಳೇ ಶಿಕ್ಷಕರಾಗಿದ್ದು ಅವರೊಂದಿಗೆ ವೇದಿಕೆ ಹಂಚಿಕೊಳ್ಳುತ್ತಿರುವುದು ಸಂತೋಷ ತಂದಿದೆ” ಎಂದು ಅವರು ಹರ್ಷ ವ್ಯಕ್ತಪಡಿಸಿದರು.


ವಿದ್ಯಾರ್ಥಿಗಳು ಸಾಂಸ್ಕೃತಿಕ ಕಾರ್ಯಕ್ರಮ ಪ್ರಸ್ತುತಪಡಿಸಿ, ಶಿಕ್ಷಕರಿಗೆ ವಿವಿಧ ಆಟೋಟ ಸ್ಪರ್ಧೆಗಳನ್ನು ನಡೆಸಿದರು.


ವಿದ್ಯಾರ್ಥಿಗಳಾದ ಪ್ರಥಮ್ ಸ್ವಾಗತಿಸಿ, ಶೇಕ್ ಅಬ್ದುಲ್ ರಿಹಾನ್ ವಂದಿಸಿ, ಯೋಗಾನಂದ ನಿರೂಪಿಸಿದರು.

Related posts

ಶರತ್ ಮಡಿವಾಳ ಸ್ಮಾರಕಕ್ಕೆ ಪುಷ್ಪ ನಮನ

Suddi Udaya

ಬಳಂಜ ಬೀಳುವ ಹಂತದಲ್ಲಿದ್ದ ಮನೆಯನ್ನು ಸರಿಪಡಿಸಿದ ಗ್ರಾಮಸ್ಥರು, ಸತೀಶ್ ದೇವಾಡಿಗರ ಸೇವಾ ಮನೋಭಾವ ಶ್ಲಾಘನೀಯ

Suddi Udaya

‘ರಾಘು ಮಾಸ್ಟರ್’ ನಾಟಕ 100ಕ್ಕೂ ಹೆಚ್ಚು ಯಶಸ್ವಿ ಪ್ರದರ್ಶನ: ಶಿಶಿಲ ಶಾಲೆಯಲ್ಲಿ ಪ್ರಸನ್ನ ಶೆಟ್ಟಿ ಬೈಲೂರು ಹಾಗೂ ತಂಡದವರಿಂದ ಸಂಭ್ರಮಾಚರಣೆ

Suddi Udaya

ಉಜಿರೆ ಯು.ಎಸ್ ಆಟೋ ಚಾಲಕ ಮಾಲಕರ ಸಂಘದ ವತಿಯಿಂದ 79ನೇ ಸ್ವಾತಂತ್ರೋತ್ಸವ ಆಚರಣೆ

Suddi Udaya

ಮೊಗ್ರು: ಕೋರಿಯಾರು ಎಂಬಲ್ಲಿ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ಪಟ್ರಮೆ ಗ್ರಾ.ಪಂ. ಹಾಗೂ ಸಂಜೀವಿನಿ ಒಕ್ಕೂಟದ ವತಿಯಿಂದ ಸ್ವಚ್ಛತಾ ಆಂದೋಲನ

Suddi Udaya
error: Content is protected !!