March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ವಾಣಿ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ

ಬೆಳ್ತಂಗಡಿ: ಉತ್ತಮ ಗುಣನಡತೆಗಳಿಂದ ಶ್ರೇಷ್ಠ ವ್ಯಕ್ತಿತ್ವ ರೂಪಿತವಾಗಲು ಸಾಧ್ಯ ಎಂದು ಮಡಂತ್ಯಾರು ಸೇಕ್ರೇಡ್ ಹಾರ್ಟ್ ಪದವಿ ಪೂರ್ವ ಕಾಲೇಜಿನ ನಿವೃತ್ತ ಶಿಕ್ಷಕ ವಿಶ್ವನಾಥ ಶೆಟ್ಟಿ ಹೇಳಿದರು.

ಅವರು ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಗುರುವಂದನೆ ಪ್ರಯುಕ್ತ ಸನ್ಮಾನ ಸ್ವೀಕರಿಸಿ ಮಾತನಾಡುತ್ತಾ, ಸಮಾಜದಲ್ಲಿ ಯಾರಿಗೂ ತೊಂದರೆ ಕೊಡದೆ, ಯಾವ ಕಾರಣಕ್ಕೂ ಹಿಂಜರಿಯದೆ, ಇನ್ನೊಬ್ಬರ ಬಾಯಿಗೆ ಆಹಾರವಾಗದೆ ಬಾಳಬೇಕು. ಹಣ ಸಂಪಾದನೆ ಮುಖ್ಯ ಉದ್ದೇಶವಾಗದೆ, ಮಾನಸಿಕ ನೆಮ್ಮದಿಯನ್ನು ಹೊಂದಿದವರಾಗಬೇಕು. ವ್ಯಸನಗಳಿಗೆ ಬಲಿಯಾಗದೆ, ಉತ್ತಮ ವಿಚಾರದ ಕುರಿತು ಧ್ಯಾನಾಸ್ತಕರಾಗಿ ಜ್ಞಾನ ಗಳಿಸಬೇಕು. ನಾವಿರುವ ಪರಿಸರ ಸ್ವಚ್ಛವಾಗಿದ್ದರೆ, ಮನಸ್ಸು ಸ್ವಚ್ಛವಾಗಿರುತ್ತದೆ. ನಮಗೆ ತಾಯಿ ತಂದೆ ಜೀವ ಕೊಟ್ಟರೆ, ಗುರು ಜೀವನವನ್ನು ಕೊಡುತ್ತಾರೆ ಎಂದರು.

ಕಾಲೇಜಿನ ಪ್ರಾಂಶುಪಾಲ ಯದುಪತಿ ಗೌಡ ಅಧ್ಯಕ್ಷತೆ ವಹಿಸಿದ್ದರು. ಉಪಪ್ರಾಂಶುಪಾಲ ವಿಷ್ಣುಪ್ರಕಾಶ್ ಎಂ ಹಾಗೂ ಉಪನ್ಯಾಸಕ ವೃಂದದವರು ಉಪಸ್ಥಿತರಿದ್ದರು. ವಿದ್ಯಾರ್ಥಿ ಕ್ಷೇಮಪಾಲನಾ ಕಾರ್ಯದರ್ಶಿ ಕು| ಪಂಚಮಿ ಸ್ವಾಗತಿಸಿದರು. ಕು|ಮೌನ್ವಿತ ಧನ್ಯವಾದ ಸಲ್ಲಿಸಿದರು. ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಕು| ನಮೃತಾ ಮತ್ತು ಕು|ಸನುಷಾ ಪಿಂಟೋ ಕಾರ್ಯಕ್ರಮ ನಿರೂಪಿಸಿದರು.

Related posts

ತೆಂಕಕಾರಂದೂರು : ಜನಾರ್ದನ ಆಚಾರ್ಯ ರವರ ಮನೆಯ ಹಿಂಬದಿ ಗುಡ್ಡ ಕುಸಿತ

Suddi Udaya

ಬೆಳ್ತಂಗಡಿ ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ಹಾಗೂ ಟ್ರಸ್ಟಿಗಳ ಬಗ್ಗೆ ಅವಹೇಳನಕಾರಿ ಪೋಸ್ಟ್ ಆರೋಪ: ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

Suddi Udaya

ಕಿರು ನಾಟಕ ಸ್ಪರ್ಧೆ: ಬೆಳ್ತಂಗಡಿ ಸ.ಪ.ಪೂ. ಕಾಲೇಜಿನ ವಿದ್ಯಾರ್ಥಿಗಳು ದ್ವಿತೀಯ ಸ್ಥಾನ

Suddi Udaya

ಬೆಳ್ತಂಗಡಿ: ಗೌಸಿಯಾ ಜಾಮಿಯಾ ಮಸೀದಿಯಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ

Suddi Udaya

ಕಕ್ಕಿಂಜೆ: ರವಿ ಗುರುಸ್ವಾಮಿ ಅಸೌಖ್ಯದಿಂದ ನಿಧನ

Suddi Udaya

ಲಯನ್ ಎಂ. ಜಿ. ಶೆಟ್ಟಿಯವರಿಗೆ ಪ್ರತಿಷ್ಠಿತ ಎಮ್.ಜೆ.ಎಫ್ ಗೌರವ

Suddi Udaya
error: Content is protected !!