July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ವಾಣಿ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ

ಬೆಳ್ತಂಗಡಿ: ಉತ್ತಮ ಗುಣನಡತೆಗಳಿಂದ ಶ್ರೇಷ್ಠ ವ್ಯಕ್ತಿತ್ವ ರೂಪಿತವಾಗಲು ಸಾಧ್ಯ ಎಂದು ಮಡಂತ್ಯಾರು ಸೇಕ್ರೇಡ್ ಹಾರ್ಟ್ ಪದವಿ ಪೂರ್ವ ಕಾಲೇಜಿನ ನಿವೃತ್ತ ಶಿಕ್ಷಕ ವಿಶ್ವನಾಥ ಶೆಟ್ಟಿ ಹೇಳಿದರು.

ಅವರು ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಗುರುವಂದನೆ ಪ್ರಯುಕ್ತ ಸನ್ಮಾನ ಸ್ವೀಕರಿಸಿ ಮಾತನಾಡುತ್ತಾ, ಸಮಾಜದಲ್ಲಿ ಯಾರಿಗೂ ತೊಂದರೆ ಕೊಡದೆ, ಯಾವ ಕಾರಣಕ್ಕೂ ಹಿಂಜರಿಯದೆ, ಇನ್ನೊಬ್ಬರ ಬಾಯಿಗೆ ಆಹಾರವಾಗದೆ ಬಾಳಬೇಕು. ಹಣ ಸಂಪಾದನೆ ಮುಖ್ಯ ಉದ್ದೇಶವಾಗದೆ, ಮಾನಸಿಕ ನೆಮ್ಮದಿಯನ್ನು ಹೊಂದಿದವರಾಗಬೇಕು. ವ್ಯಸನಗಳಿಗೆ ಬಲಿಯಾಗದೆ, ಉತ್ತಮ ವಿಚಾರದ ಕುರಿತು ಧ್ಯಾನಾಸ್ತಕರಾಗಿ ಜ್ಞಾನ ಗಳಿಸಬೇಕು. ನಾವಿರುವ ಪರಿಸರ ಸ್ವಚ್ಛವಾಗಿದ್ದರೆ, ಮನಸ್ಸು ಸ್ವಚ್ಛವಾಗಿರುತ್ತದೆ. ನಮಗೆ ತಾಯಿ ತಂದೆ ಜೀವ ಕೊಟ್ಟರೆ, ಗುರು ಜೀವನವನ್ನು ಕೊಡುತ್ತಾರೆ ಎಂದರು.

ಕಾಲೇಜಿನ ಪ್ರಾಂಶುಪಾಲ ಯದುಪತಿ ಗೌಡ ಅಧ್ಯಕ್ಷತೆ ವಹಿಸಿದ್ದರು. ಉಪಪ್ರಾಂಶುಪಾಲ ವಿಷ್ಣುಪ್ರಕಾಶ್ ಎಂ ಹಾಗೂ ಉಪನ್ಯಾಸಕ ವೃಂದದವರು ಉಪಸ್ಥಿತರಿದ್ದರು. ವಿದ್ಯಾರ್ಥಿ ಕ್ಷೇಮಪಾಲನಾ ಕಾರ್ಯದರ್ಶಿ ಕು| ಪಂಚಮಿ ಸ್ವಾಗತಿಸಿದರು. ಕು|ಮೌನ್ವಿತ ಧನ್ಯವಾದ ಸಲ್ಲಿಸಿದರು. ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಕು| ನಮೃತಾ ಮತ್ತು ಕು|ಸನುಷಾ ಪಿಂಟೋ ಕಾರ್ಯಕ್ರಮ ನಿರೂಪಿಸಿದರು.

Related posts

ಅಂತರ್ ಕಾಲೇಜು ತೆಂಕುತಿಟ್ಟು ಯಕ್ಷಗಾನ ಸ್ಪರ್ಧೆ: ಎಸ್.ಡಿ.ಎಮ್ ಕಾಲೇಜಿಗೆ ದ್ವಿತೀಯ ಸ್ಥಾನ

Suddi Udaya

ಬಂದಾರು: ಡಾ. ಬಿ. ಆರ್ ಅಂಬೇಡ್ಕರ್ ಜಯಂತಿ ಆಚರಣೆ ಮತ್ತು ಸ್ವಚ್ಛತಾ ಕಾರ್ಯಕ್ರಮ

Suddi Udaya

ಮಾಜಿ ಶಾಸಕ ವಸಂತ ಬಂಗೇರ ನಿಧನಕ್ಕೆ ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷ ಸಂಪತ್ ಬಿ ಸುವರ್ಣರವರಿಂದ ಸಂತಾಪ

Suddi Udaya

ಬಳಂಜ: ನಮ್ಮ ಮಣ್ಣು ನಮ್ಮ ದೇಶ ಧ್ಯೇಯದೊಂದಿಗೆ ದೆಹಲಿಯಲ್ಲಿ ನಿರ್ಮಾಣಗೊಳ್ಳುವ ಹುತಾತ್ಮರ ಸ್ಮಾರಕಕ್ಕೆ ಬಳಂಜ ಗ್ರಾ.ಪಂ ಮುಖೇನಾ ಮಣ್ಣು ಹಸ್ತಾಂತರ

Suddi Udaya

ಬಂದಾರು: ಬಾಲಕಿಗೆ ಲೈಂಗಿಕ ಕಿರುಕುಳ, ಆರೋಪಿ ರಿಕ್ಷಾ ಚಾಲಕ ಸಹಿತ ಇಬ್ಬರ ಬಂಧನ

Suddi Udaya

ಧರ್ಮಸ್ಥಳದಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

Suddi Udaya
error: Content is protected !!