24.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವೇಣೂರು: ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದನ್ವಯ ಸ್ವ ಉದ್ಯೋಗ ಪ್ರೇರಣಾ ಶಿಬಿರ

ವೇಣೂರು : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿಸಿ ಟ್ರಸ್ಟ್ (ರಿ), ಗುರುವಾಯನಕೆರೆ, ವೇಣೂರು ವಲಯದ ಕರಿಮಣೇಲು ಕಾರ್ಯಕ್ಷೇತ್ರ ದ ಪಡ್ಡಂತಡ್ಕ ಮಂಜುನಾಥೇಶ್ವರ ಭಜನಾ ಮಂದಿರದಲ್ಲಿ ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದನ್ವಯ ಸ್ವ ಉದ್ಯೋಗ ಪ್ರೇರಣಾ ಶಿಬಿರ ಕಾರ್ಯಕ್ರಮದ ಉದ್ಘಾಟನೆಯನ್ನು ಒಕ್ಕೂಟದ ಅಧ್ಯಕ್ಷರಾದ ದೋಗೂ ನಾಯ್ಕರವರು ನೆರವೇರಿಸಿದರು.

ಸಂಪನ್ಮೂಲ ವ್ಯಕ್ತಿಯಾಗಿ ಸಿದ್ದವನ ಉಜಿರೆಯ ರುಡ್ ಸೆಟ್ ಸಂಸ್ಥೆಯ ಸಿಬ್ಬಂದಿ ರಶ್ಮಿ ರವರು ಮಾತನಾಡಿ ರುಡ್ ಸೆಟ್ ಸಂಸ್ಥೆ ಬೆಳೆದು ಬಂದ ಬಗ್ಗೆ ಇಲ್ಲಿ ನೀಡುವ ತರಭೇತಿಗಳು, ತರಬೇತಿ ಯ ನಂತರ ಫಲಾನುಭವಿಗಳು ಸ್ವ ಉದ್ಯೋಗ ಮಾಡಲು ಪ್ರೇರಣೆ, ಬ್ಯಾಂಕ್ ನಲ್ಲಿ ಸಬ್ಸಿಡಿ ಯಲ್ಲಿ ಸಿಗುವ ಸಾಲಗಳ ಬಗ್ಗೆ ಮಾಹಿತಿ ನೀಡಲಾಗುತಿದೆ. ತರಭೇತಿ ಪಡೆಯುವುದು ಮುಖ್ಯವಲ್ಲ ನಂತರ ದಿನಗಳಲ್ಲಿ ಕಲಿತ ವಿದ್ಯೆ ಯಲ್ಲಿ ಸ್ವ ಉದ್ಯೋಗ ಮಾಡುವುದು ಮುಖ್ಯ ವಾಗಿರುತ್ತದೆ ಇದರ ಬಗ್ಗೆ ನಾವು ತರಭೇತಿಯ ಬಳಿಕವು ಪಲಾನುಭಾವಿಯ ಸಂಪರ್ಕದಲ್ಲಿ ಇರುತ್ತೇವೆ. ಯಾಕೆಂದ್ರೆ ಎಲ್ಲರಿಗೂ ಸರಕಾರಿ, ಹಾಗೂ ಖಾಸಗಿ ಉದ್ಯೋಗ ಸಿಗಲು ಸಾಧ್ಯವಿಲ್ಲ ಅದರಿಂದ ಸ್ವ ಉದ್ಯೋಗ ಮಾಡಬೇಕಾದ ಅನಿವಾರ್ಯತೆ ಇದೇ ಎಂದರು. ನಮ್ಮ ತರಬೇತಿ ಸಂಸ್ಥೆಯಲ್ಲಿ ಕೃಷಿ ಸಂಬ0ಧಿತ, ಉತ್ಪನ ಸಂಬಂಧಿತ, ಉದ್ಯಮಶೀಲತಾ ತರಭೇತಿ , ಸೇವೆಗೆ ಸಂಬಂಧಿಸಿದಂತೆ ಸೆಲ್ ಫೋನ್ ರಿಪೇರಿ, ಸಿ. ಸಿ ಟಿವಿ, ಕಂಪ್ಯೂಟರ್, ಗ್ರಹೋಪಯೋಗಿ ಉಪಕರಣಗಳ ರಿಪೇರಿ, ಹಾಗೂ ಇನ್ನಿತರ ತರಭೇತಿಗಳನ್ನು ನೀಡಲಾಗುವುದು ಕಲಿಯಲು ಆಸಕ್ತಿ ಇರುವವರು ಇ-ಮೆಲ್,ವೆಬ್ ಸೈಟ್, ದೂರವಾಣಿ ಮುಖಂತರವು ಅರ್ಜಿ ನೀಡಬಹುದು ಎಂದರು.

ಕಾರ್ಯಕ್ರಮದಲ್ಲಿ ಜ್ಞಾನವಿಕಾಸ ಸಮನ್ವಯಧಿಕಾರಿ ಹರಿಣಿ, ಸೇವಾಪ್ರತಿನಿಧಿ ಶೋಭಾ, ಒಕ್ಕೂಟ ಪದಾಧಿಕಾರಿಗಳಾದ ಗಣೇಶ್, ಆನಂದ, ಯಶೋಧ ಹಾಗೂ ಸದಸ್ಯರು ಉಪಸ್ಥಿತರಿದ್ದರು. ಕಾರ್ಯಕ್ರಮದ ನಿರೂಪಣೆ ಯನ್ನು ಶ್ವೇತಾರವರು ನೆರವೇರಿಸಿದರು.

Related posts

ತೆಕ್ಕಾರು ಸರಳಿಕಟ್ಟೆ ಸ.ಉ.ಪ್ರಾ. ಶಾಲೆಯ ಪ್ರವೇಶ ದ್ವಾರದ ಉದ್ಘಾಟನೆ

Suddi Udaya

ಮಡಂತ್ಯಾರು ರಚನಾ ಸಿಲ್ಕ್ ನಲ್ಲಿ ಶೇ. 10-50 ಆಷಾಢ ಡಿಸ್ಕೌಂಟ್ ಸೇಲ್

Suddi Udaya

ಜು.30: ಬಿಜೆಪಿ ಬೆಳ್ತಂಗಡಿ ಮಂಡಲ ವತಿಯಿಂದ ಕಣಿಯೂರು ಗ್ರಾ. ಪಂ. ನ ಸದಸ್ಯ ಪ್ರವೀಣ್ ಗೌಡ ಮೇಲೆ ಕಾಂಗ್ರೆಸ್ ಕಾರ್ಯಕರ್ತರಿಂದ ನಡೆದ ಹಲ್ಲೆಯನ್ನು ಖಂಡಿಸಿ ಆರೋಪಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಜರಗಿಸುವಂತೆ ಬೃಹತ್ ಪ್ರತಿಭಟನೆ

Suddi Udaya

ಉಜಿರೆ ಎಸ್.ಡಿ.ಎಂ. ಪದವಿ ಕಾಲೇಜಿನ ವಿವಿಧ ವಿಭಾಗದಲ್ಲಿ 38 ವರ್ಷಗಳ ಕಾಲ ಸೇವೆ ಸಲ್ಲಿಸಿದ ಸದಾನಂದ ಬಿ ಮುಂಡಾಜೆ ರವರಿಗೆ ಗ್ರಂಥಾಲಯ ವಿಭಾಗದಿಂದ ಬೀಳ್ಕೊಡುಗೆ

Suddi Udaya

ಮೇ 28: ಮಿತ್ತಬಾಗಿಲು ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಶಿಲಾಮಯ ಧ್ವಜಸ್ತಂಭ

Suddi Udaya

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸಮುದಾಯ ಭವನಕ್ಕೆ ಹೈ ಮಾಸ್ಕ್ ದೀಪದ ಕೊಡುಗೆ ನೀಡಿದ ವಿಧಾನ ಪರಿಷತ್ತು ಶಾಸಕ ಪ್ರತಾಪ್ ಸಿಂಹ ನಾಯಕ್

Suddi Udaya
error: Content is protected !!