22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿವರದಿ

ಶ್ರೀರತ್ನಾತ್ರಯ ಜೈನ ಸಂಘ ದಿಂದ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹ್ಮದ್ ಖಾನ್ ರಿಗೆ ಮನವಿ: ಜೈನ ಧರ್ಮೀಯರಿಗೆ ಪ್ರತ್ಯೇಕ ನಿಗಮ ರಚನೆ ಸಚಿವರ ಭರವಸೆ

ಬೆಳ್ತಂಗಡಿ: ಶ್ರೀರತ್ನಾತ್ರಯ ಜೈನ ಸಂಘ ಬೆಳ್ತಂಗಡಿ ಇದರ ವತಿಯಿಂದ ಕರ್ನಾಟಕ ಸರ್ಕಾರದ ಅಲ್ಪಸಂಖ್ಯಾತರ ಕಲ್ಯಾಣ ಸಚಿವರಾದ ಜಮೀರ್ ಅಹ್ಮದ್ ಖಾನ್ ಅವರನ್ನು ಇಂದು ಬೆಳಿಗ್ಗೆ ಮಂಗಳೂರಿನಲ್ಲಿ ಭೇಟಿ ಮಾಡಿ ಗೌರವಿಸಿ, ಮನವಿ ಪತ್ರವನ್ನು ನೀಡಲಾಯಿತು.


ಜಿಲ್ಲಾಮಟ್ಟದಲ್ಲಿ ಸರ್ಕಾರದ ವತಿಯಿಂದ ಸಸ್ಯಹಾರಿ ವಿದ್ಯಾರ್ಥಿ ನಿಲಯ, ಜಿನ ಮಂದಿರಗಳ ಅಭಿವೃದ್ಧಿ ಬಗ್ಗೆ ವಿಶೇಷ ಅನುದಾನ, ಪುರೋಹಿತರಿಗೆ ಗೌರವಧನ, ಸಮುದಾಯ ಭವನಗಳ ನಿಯಮಗಳ ಸರಳೀಕರಣ, ಬಸದಿಗಳ ಸಂಪರ್ಕ ರಸ್ತೆಗಳ ಡಾಮರೀಕರಣ ಮುಂತಾದ ಹಲವಾರು ಬೇಡಿಕೆಗಳನ್ನು ಸಚಿವರ ಮುಂದೆ ಮಂಡಿಸಲಾಯಿತು.
ಮನವಿ ಸ್ವೀಕರಿಸಿದ ಸಚಿವರು ಅತಿ ಶೀಘ್ರದಲ್ಲಿ ಜೈನ ಸಮುದಾಯದ ಅಭಿವೃದ್ಧಿ ನಿಗಮವನ್ನು ರಚನೆ ಮಾಡುವುದಾಗಿ ತಿಳಿಸಿದರು. ಮಾತ್ರವಲ್ಲದೆ ಸಮುದಾಯದ ಅಭಿವೃದ್ಧಿಗೆ ಎಲ್ಲ ರೀತಿಯ ಸಹಕಾರ ನೀಡುವುದಾಗಿ ಭರವಸೆ ನೀಡಿದರು.


ಈ ಸಂದರ್ಭದಲ್ಲಿ ಹರೀಶ್ ಕುಮಾರ್ ಶಾಸಕರು ವಿಧಾನ ಪರಿಷತ್ , ಡಾ. ಕೆ. ಜಯಕೀರ್ತಿ ಜೈನ್. ಧರ್ಮಸ್ಥಳ, ಸುದರ್ಶನ್ ಜೈನ್ ಬಂಟ್ವಾಳ, ಶಶಿಕಿರಣ್ ಜೈನ್ ಬೆಳ್ತಂಗಡಿ, ಶುಭಕರ್ ಹೆಗ್ಡೆ ಇಜಿಲಾOಪಾಡಿ, ಮಹಾವೀರ್ ಜೈನ್ ದೆಪ್ಪುನಿ , ಫಣಿರಾಜ ಜೈನ್ ಕೊಕ್ಕಡ,. ಜಿನರಾಜ ಪೂವಣಿ ಉಜಿರೆ,. ಭರತ್ ಜೈನ್ ಉಜಿರೆ, ರತ್ನರಾಜ ಜೈನ್ ಪೇರಂದಬೈಲ್, ಧರಣೇಂದ್ರ ಇಂದ್ರ, ಸುದೇಶ್ ಕುಮಾರ್ ಮುಂತಾದವರು ಉಪಸ್ಥಿತರಿದ್ದರು.

Related posts

ವೇಣೂರು ಭಗವಾನ್ ಶ್ರೀ ಬಾಹುಬಲಿಗೆ ಮಹಾ ಮಸ್ತಕಾಭಿಷೇಕ: ಮೂಡಬಿದ್ರೆ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಹಾಗೂ ಅಳದಂಗಡಿ ಅರಸರ ಉಪಸ್ಥಿತಿಯಲ್ಲಿ ಚಪ್ಪರ ಮುಹೂರ್ತ

Suddi Udaya

ಸೌಜನ್ಯ ಕೊಲೆ ಪ್ರಕರಣ: ಆ.27 ಬೆಳ್ತಂಗಡಿ ಮಿನಿ ವಿಧಾನ ಸೌಧದ ಎದುರು ಬೃಹತ್ ಪ್ರತಿಭಟನೆ ಅವಿಭಜಿತ ದ.ಕ ಮತ್ತು ಉಡುಪಿ ಜಿಲ್ಲೆಗಳ ಶಾಸಕರುಗಳು ಭಾಗಿ:

Suddi Udaya

ಉಜಿರೆ ಟೆಕ್ಸ್ ಟೈಲ್ಸ್ ಉದ್ಯಮಿಯಿಂದ ಲೈಂಗಿಕ ದೌರ್ಜನ್ಯ ಆರೋಪ: ಕೆಲಸಕ್ಕೆ ಬಂದ ಮಹಿಳೆಯಿಂದ ಬೆಳ್ತಂಗಡಿ ಠಾಣೆಯಲ್ಲಿ ದೂರು ದಾಖಲು

Suddi Udaya

ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ನಾರಾವಿ ಮಹಾಶಕ್ತಿಕೇಂದ್ರದ ಸಭೆ

Suddi Udaya

ಅಮೃತ ಸೋಮೇಶ್ವರರವರ ನೆನಪಿಗೆ ‘ಅಮೃತ ಮಥನ’ ಕಾರ್ಯಕ್ರಮ

Suddi Udaya

ಶ್ರೀ ಭಗವದ್ಗೀತಾ ಸ್ಪರ್ಧೆ : ಉಜಿರೆಯ ಎಸ್.ಡಿ.ಎಂ ಪ.ಪೂ ಕಾಲೇಜಿನ ವಿದ್ಯಾರ್ಥಿನಿ ಹಂಸಿನಿ ಭಿಡೆ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya
error: Content is protected !!