26.9 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿವರದಿ

ಶ್ರೀರತ್ನಾತ್ರಯ ಜೈನ ಸಂಘ ದಿಂದ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹ್ಮದ್ ಖಾನ್ ರಿಗೆ ಮನವಿ: ಜೈನ ಧರ್ಮೀಯರಿಗೆ ಪ್ರತ್ಯೇಕ ನಿಗಮ ರಚನೆ ಸಚಿವರ ಭರವಸೆ

ಬೆಳ್ತಂಗಡಿ: ಶ್ರೀರತ್ನಾತ್ರಯ ಜೈನ ಸಂಘ ಬೆಳ್ತಂಗಡಿ ಇದರ ವತಿಯಿಂದ ಕರ್ನಾಟಕ ಸರ್ಕಾರದ ಅಲ್ಪಸಂಖ್ಯಾತರ ಕಲ್ಯಾಣ ಸಚಿವರಾದ ಜಮೀರ್ ಅಹ್ಮದ್ ಖಾನ್ ಅವರನ್ನು ಇಂದು ಬೆಳಿಗ್ಗೆ ಮಂಗಳೂರಿನಲ್ಲಿ ಭೇಟಿ ಮಾಡಿ ಗೌರವಿಸಿ, ಮನವಿ ಪತ್ರವನ್ನು ನೀಡಲಾಯಿತು.


ಜಿಲ್ಲಾಮಟ್ಟದಲ್ಲಿ ಸರ್ಕಾರದ ವತಿಯಿಂದ ಸಸ್ಯಹಾರಿ ವಿದ್ಯಾರ್ಥಿ ನಿಲಯ, ಜಿನ ಮಂದಿರಗಳ ಅಭಿವೃದ್ಧಿ ಬಗ್ಗೆ ವಿಶೇಷ ಅನುದಾನ, ಪುರೋಹಿತರಿಗೆ ಗೌರವಧನ, ಸಮುದಾಯ ಭವನಗಳ ನಿಯಮಗಳ ಸರಳೀಕರಣ, ಬಸದಿಗಳ ಸಂಪರ್ಕ ರಸ್ತೆಗಳ ಡಾಮರೀಕರಣ ಮುಂತಾದ ಹಲವಾರು ಬೇಡಿಕೆಗಳನ್ನು ಸಚಿವರ ಮುಂದೆ ಮಂಡಿಸಲಾಯಿತು.
ಮನವಿ ಸ್ವೀಕರಿಸಿದ ಸಚಿವರು ಅತಿ ಶೀಘ್ರದಲ್ಲಿ ಜೈನ ಸಮುದಾಯದ ಅಭಿವೃದ್ಧಿ ನಿಗಮವನ್ನು ರಚನೆ ಮಾಡುವುದಾಗಿ ತಿಳಿಸಿದರು. ಮಾತ್ರವಲ್ಲದೆ ಸಮುದಾಯದ ಅಭಿವೃದ್ಧಿಗೆ ಎಲ್ಲ ರೀತಿಯ ಸಹಕಾರ ನೀಡುವುದಾಗಿ ಭರವಸೆ ನೀಡಿದರು.


ಈ ಸಂದರ್ಭದಲ್ಲಿ ಹರೀಶ್ ಕುಮಾರ್ ಶಾಸಕರು ವಿಧಾನ ಪರಿಷತ್ , ಡಾ. ಕೆ. ಜಯಕೀರ್ತಿ ಜೈನ್. ಧರ್ಮಸ್ಥಳ, ಸುದರ್ಶನ್ ಜೈನ್ ಬಂಟ್ವಾಳ, ಶಶಿಕಿರಣ್ ಜೈನ್ ಬೆಳ್ತಂಗಡಿ, ಶುಭಕರ್ ಹೆಗ್ಡೆ ಇಜಿಲಾOಪಾಡಿ, ಮಹಾವೀರ್ ಜೈನ್ ದೆಪ್ಪುನಿ , ಫಣಿರಾಜ ಜೈನ್ ಕೊಕ್ಕಡ,. ಜಿನರಾಜ ಪೂವಣಿ ಉಜಿರೆ,. ಭರತ್ ಜೈನ್ ಉಜಿರೆ, ರತ್ನರಾಜ ಜೈನ್ ಪೇರಂದಬೈಲ್, ಧರಣೇಂದ್ರ ಇಂದ್ರ, ಸುದೇಶ್ ಕುಮಾರ್ ಮುಂತಾದವರು ಉಪಸ್ಥಿತರಿದ್ದರು.

Related posts

ನ್ಯಾಯತರ್ಪು ಸ್ವಸಹಾಯ ಸಂಘದ ಲಾಭಾಂಶ ವಿತರಣೆ

Suddi Udaya

ಬೆಳ್ತಂಗಡಿ: ವಿವಿಧ ಚೆಕ್ ಬೌನ್ಸ್ ಪ್ರಕರಣದಲ್ಲಿ ಆರೋಪಿಗಳ ಖುಲಾಸೆ

Suddi Udaya

ಉರುವಾಲು ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲೆಯಲ್ಲಿ ವಿದ್ಯಾರ್ಥಿ ಮಂತ್ರಿ ಮಂಡಲ ರಚನೆ

Suddi Udaya

ಮದ್ದಡ್ಕ ತಾಯಿ‌ ಪಿಲಿಚಾಮುಂಡಿ‌ ದೈವಸ್ಥಾನದಲ್ಲಿ ತಾಂಬೂಲ ಪ್ರಶ್ನಾ ಚಿಂತನೆ

Suddi Udaya

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ನೂತನ ಸಮಿತಿ ರಚನೆ

Suddi Udaya

ಶ್ರೀ ಕ್ಷೇತ್ರ ಸೌತಡ್ಕಕ್ಕೆ ನಟಿ ರಚಿತಾ ರಾಮ್ ಭೇಟಿ

Suddi Udaya
error: Content is protected !!