September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿವರದಿ

ಶ್ರೀರತ್ನಾತ್ರಯ ಜೈನ ಸಂಘ ದಿಂದ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹ್ಮದ್ ಖಾನ್ ರಿಗೆ ಮನವಿ: ಜೈನ ಧರ್ಮೀಯರಿಗೆ ಪ್ರತ್ಯೇಕ ನಿಗಮ ರಚನೆ ಸಚಿವರ ಭರವಸೆ

ಬೆಳ್ತಂಗಡಿ: ಶ್ರೀರತ್ನಾತ್ರಯ ಜೈನ ಸಂಘ ಬೆಳ್ತಂಗಡಿ ಇದರ ವತಿಯಿಂದ ಕರ್ನಾಟಕ ಸರ್ಕಾರದ ಅಲ್ಪಸಂಖ್ಯಾತರ ಕಲ್ಯಾಣ ಸಚಿವರಾದ ಜಮೀರ್ ಅಹ್ಮದ್ ಖಾನ್ ಅವರನ್ನು ಇಂದು ಬೆಳಿಗ್ಗೆ ಮಂಗಳೂರಿನಲ್ಲಿ ಭೇಟಿ ಮಾಡಿ ಗೌರವಿಸಿ, ಮನವಿ ಪತ್ರವನ್ನು ನೀಡಲಾಯಿತು.


ಜಿಲ್ಲಾಮಟ್ಟದಲ್ಲಿ ಸರ್ಕಾರದ ವತಿಯಿಂದ ಸಸ್ಯಹಾರಿ ವಿದ್ಯಾರ್ಥಿ ನಿಲಯ, ಜಿನ ಮಂದಿರಗಳ ಅಭಿವೃದ್ಧಿ ಬಗ್ಗೆ ವಿಶೇಷ ಅನುದಾನ, ಪುರೋಹಿತರಿಗೆ ಗೌರವಧನ, ಸಮುದಾಯ ಭವನಗಳ ನಿಯಮಗಳ ಸರಳೀಕರಣ, ಬಸದಿಗಳ ಸಂಪರ್ಕ ರಸ್ತೆಗಳ ಡಾಮರೀಕರಣ ಮುಂತಾದ ಹಲವಾರು ಬೇಡಿಕೆಗಳನ್ನು ಸಚಿವರ ಮುಂದೆ ಮಂಡಿಸಲಾಯಿತು.
ಮನವಿ ಸ್ವೀಕರಿಸಿದ ಸಚಿವರು ಅತಿ ಶೀಘ್ರದಲ್ಲಿ ಜೈನ ಸಮುದಾಯದ ಅಭಿವೃದ್ಧಿ ನಿಗಮವನ್ನು ರಚನೆ ಮಾಡುವುದಾಗಿ ತಿಳಿಸಿದರು. ಮಾತ್ರವಲ್ಲದೆ ಸಮುದಾಯದ ಅಭಿವೃದ್ಧಿಗೆ ಎಲ್ಲ ರೀತಿಯ ಸಹಕಾರ ನೀಡುವುದಾಗಿ ಭರವಸೆ ನೀಡಿದರು.


ಈ ಸಂದರ್ಭದಲ್ಲಿ ಹರೀಶ್ ಕುಮಾರ್ ಶಾಸಕರು ವಿಧಾನ ಪರಿಷತ್ , ಡಾ. ಕೆ. ಜಯಕೀರ್ತಿ ಜೈನ್. ಧರ್ಮಸ್ಥಳ, ಸುದರ್ಶನ್ ಜೈನ್ ಬಂಟ್ವಾಳ, ಶಶಿಕಿರಣ್ ಜೈನ್ ಬೆಳ್ತಂಗಡಿ, ಶುಭಕರ್ ಹೆಗ್ಡೆ ಇಜಿಲಾOಪಾಡಿ, ಮಹಾವೀರ್ ಜೈನ್ ದೆಪ್ಪುನಿ , ಫಣಿರಾಜ ಜೈನ್ ಕೊಕ್ಕಡ,. ಜಿನರಾಜ ಪೂವಣಿ ಉಜಿರೆ,. ಭರತ್ ಜೈನ್ ಉಜಿರೆ, ರತ್ನರಾಜ ಜೈನ್ ಪೇರಂದಬೈಲ್, ಧರಣೇಂದ್ರ ಇಂದ್ರ, ಸುದೇಶ್ ಕುಮಾರ್ ಮುಂತಾದವರು ಉಪಸ್ಥಿತರಿದ್ದರು.

Related posts

ಕನ್ಯಾಡಿ I: ನೇರೊಳ್‌ಪಲ್ಕೆ ಅಂಗನವಾಡಿ ಕೇಂದ್ರದಲ್ಲಿ ಸ್ವಾತ್ರಂತ್ರ್ಯೋತ್ಸವ ಆಚರಣೆ

Suddi Udaya

ಪಂಜಿಕಲ್ಲು ಕಜೆಬೈಲು ಶ್ರೀ ಪಿಲಿಚಾಮುಂಡಿ ದೈವದ ನೇಮದ ಪ್ರಯುಕ್ತ: ಮಧ್ಯಯಕ್ಷಕೂಟದ ವತಿಯಿಂದ ತಾಳಮದ್ದಳೆ

Suddi Udaya

ನಾಲ್ಕನೇ ಬಾರಿಗೆ ಪೆಟ್ರೋಲ್ ಡೀಸೆಲ್ ದರ ಏರಿಕೆ

Suddi Udaya

ಬರೆಂಗಾಯ ಸಾರ್ವಜನಿಕ ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿಯಿಂದ ಮೊಸರು ಕುಡಿಕೆ ಉತ್ಸವ; ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ನಾಲ್ಕೂರು: ಬೊಳ್ಳಾಜೆ ನಿವಾಸಿ ಸೀತು ನಿಧನ

Suddi Udaya

ಮೇಲಂತಬೆಟ್ಟು: ಕೊಡಮಣಿತ್ತಾಯ ಮತ್ತು ಬ್ರಹ್ಮ ಬೈದರ್ಕಳ ವರ್ಷಾವಧಿ ಜಾತ್ರೆ

Suddi Udaya
error: Content is protected !!