26.2 C
ಪುತ್ತೂರು, ಬೆಳ್ತಂಗಡಿ
June 8, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶಿಶಿಲ: ಸರಕಾರಿ ಮೀಸಲು ಅರಣ್ಯದಿಂದ ಮರಕಳ್ಳತನ ಪ್ರಕರಣ : ಓರ್ವನ ಬಂಧನ

ಶಿಶಿಲ : ಶಿಶಿಲ ಗ್ರಾಮದ ಹೇವಾಜೆ ಎಂಬಲ್ಲಿ ಸರಕಾರಿ ಮೀಸಲು ಅರಣ್ಯದಿಂದ ಮರಕಳ್ಳತನ ನಡೆಸಿದ ಓರ್ವನನ್ನು ಅರಣ್ಯಾಧಿಕಾರಿಗಳ ತಂಡ ಸೆ.5 ರಂದು ಬಂಧಿಸಿದ್ದಾರೆ.

ಧರ್ನಪ್ಪ ಗೌಡ ಎಂಬಾತನೇ ಬಂಧಿತ ಆರೋಪಿಯಾಗಿದ್ದು, ಇನ್ನೋರ್ವ ಆರೋಪಿ ಅಜಿತ್ ಪರಾರಿಯಾಗಿದ್ದಾನೆ ಎಂದು ಉಪ್ಪಿನಂಗಡಿ ವಲಯಾರಣ್ಯಾಧಿಕಾರಿ ತಿಳಿಸಿದ್ದಾರೆ.

ಸೆ. 5ರಂದು ಮಧ್ಯಾಹ್ನ ಶಿಶಿಲ ಗ್ರಾಮದ ಹೇವಾಜೆ ಎಂಬಲ್ಲಿ ಕಾಡಿನಲ್ಲಿ ಬೇಂಗ ಮರವೊಂದನ್ನು ಕಡಿದು, ಅದನ್ನು ದಿಮ್ಮಿಗಳನ್ನಾಗಿ ಮಾಡುತ್ತಿದ್ದಾಗ ದಾಳಿ ನಡೆಸಿದ ಅರಣ್ಯಾಧಿಕಾರಿಗಳು ಆರೋಪಿಯನ್ನು ಬಂಧಿಸಿ, ಮರವನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ವಶಪಡಿಸಿಕೊಂಡ ಮರದ ಮೌಲ್ಯ ಒಂದು ಲಕ್ಷದ 26 ಸಾವಿರ ರೂ. ಎಂದು ಅಂದಾಜಿಸಲಾಗಿದೆ.

ಉಪ್ಪಿನಂಗಡಿ ವಲಯಾರಣ್ಯಾಧಿಕಾರಿ ಜಯಪ್ರಕಾಶ್ ಕೆ.ಕೆ ಅವರ ನೇತೃತ್ವದಲ್ಲಿ ತನಿಖೆ ನಡೆಯುತ್ತಿದೆ.

ಈ ಕಾರ್ಯಾಚರಣೆಯಲ್ಲಿ ಉಪ ಅರಣ್ಯಾಧಿಕಾರಿ ಪ್ರಶಾಂತ್, ಭರತ್, ಅರಣ್ಯ ಪಾಲಕ ಸನತ್, ವಿನಯಚಂದ್ರ, ರಾಜೇಶ್, ಲಿಂಗಪ್ಪ, ಸುನೀಲ್ ನಾಯ್ಕ ಹಾಗೂ ಜೀಪು ಚಾಲಕ ಕಿಶೋರ್ ಭಾಗವಹಿಸಿದ್ದರು.


Related posts

ಉಜಿರೆ ರುಡ್‌ಸೆಟ್ ಸಂಸ್ಥೆಯ 2023-24 ನೇ ಸಾಲಿನ ವಾರ್ಷಿಕ ವರದಿ ಬಿಡುಗಡೆ

Suddi Udaya

ಉಜಿರೆ ಶ್ರೀ ಧ.ಮಂ. ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ವಿದ್ಯಾರ್ಥಿ ಸರಕಾರದ ಪ್ರಮಾಣ ವಚನ ಸ್ವೀಕಾರ ಸಮಾರಂಭ

Suddi Udaya

ಎಲ್ ಸಿ ಆರ್ ಇಂಡಿಯನ್ ವಿದ್ಯಾ ಸಂಸ್ಥೆಯಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ

Suddi Udaya

ಗುರುವಾಯನಕೆರೆ ಸ.ಹಿ.ಪ್ರಾ. ಶಾಲೆಯಲ್ಲಿ ಉಚಿತ ವೈದ್ಯಕೀಯ ದಂತ ಚಿಕಿತ್ಸೆ ಶಿಬಿರ

Suddi Udaya

ಮಲವಂತಿಗೆ: ತೋಟಕ್ಕೆ ನುಗ್ಗಿದ ಕಾಡಾನೆ; ಅಪಾರ ಕೃಷಿ ಹಾನಿ

Suddi Udaya

ಕೊಕ್ಕಡ ಎಂಡೋಸಲ್ಫಾನ್ ಪುನರ್ವಸತಿ ಕೇಂದ್ರದಲ್ಲಿ ಧಾರ್ಮಿಕ ಮುಖಂಡ ಕಿರಣ್ ಚಂದ್ರ ಡಿ. ಪುಷ್ಪಗಿರಿ ಅವರ ಹುಟ್ಟುಹಬ್ಬದ ಆಚರಣೆ: ಧನಸಹಾಯ ವಿತರಣೆ

Suddi Udaya
error: Content is protected !!