April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ: ಶ್ರೀ ಧ. ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಶಿಕ್ಷಕರ ದಿನಾಚರಣೆ

ಉಜಿರೆಯ ಶ್ರೀ ಧ.ಮಂ. ಮಹಿಳಾ ಐಟಿಐಯಲ್ಲಿ ಸೆ.5 ರಂದು ಶಿಕ್ಷಕರ ದಿನಾಚರಣೆ ಕಾರ್ಯಕ್ರಮವನ್ನು ಆಚರಿಸಲಾಯಿತು.

 ಕಾರ್ಯಕ್ರಮದಲ್ಲಿ ಎಸ್ ರಾಧಾಕೃಷ್ಣನ್ ಇವರ ಭಾವಚಿತ್ರಕ್ಕೆ ಪ್ರಾಂಶುಪಾಲರಾದ ವಿ. ಪ್ರಕಾಶ್ ಕಾಮತ್ ಹಾಗೂ ಸಿಬ್ಬಂದಿಗಳಾದ ಶ್ರೀಮತಿ ಸಂಧ್ಯಾ, ಶ್ರೀಮತಿ ಸುಮಂಗಲಾ ಹಾಗೂ ಕು. ದಿವ್ಯ ಇವರು ಪುಷ್ಪ ನಮನ ಸಲ್ಲಿಸುವ ಮೂಲಕ ಗೌರವ ಸಮರ್ಪಣೆ ಮಾಡಿದರು.

 
ಈ ಸಂದರ್ಭದಲ್ಲಿ ಮಾತನಾಡಿದ ಪ್ರಾಂಶುಪಾಲರು ಎಸ್ ರಾಧಾಕೃಷ್ಣನ್ ರವರ ಆದರ್ಶ್ ಇಂದಿಗೂ ಶಿಕ್ಷಕರನ್ನು ಗೌರವದಿಂದ ಕಾಣುವ ಹಾಗೆ ಆಗಿದೆ ಅದೇ ರೀತಿ ನಮ್ಮ ಬಾಲ್ಯದ ಶಿಕ್ಷಕ - ಶಿಕ್ಷಕಿಯರನ್ನು ಇಂದು ಖುದ್ದಾಗಿ ಅಥವಾ ದೂರವಾಣಿ ಮೂಲಕ ಮಾತನಾಡಲು ಪ್ರಯತ್ನ ಮಾಡೋಣ ಯಾಕೆಂದರೆ ಇಂದು ನಾವು ಈ ಮಟ್ಟಕ್ಕೆ ಬೆಳೆಯಲು ಅವರ ತ್ಯಾಗ ಹಾಗೂ ಪರಿಶ್ರಮ ಅಮೂಲ್ಯವಾದದ್ದು. ಅದೇ ರೀತಿ ನಮ್ಮ ಮೊದಲ ಗುರು ನಮ್ಮ  ತಾಯಿ-ತಂದೆ. ಇವರಿಬ್ಬರನ್ನು ತುಂಬಾ ಪ್ರೀತಿಯಿಂದ ನೋಡಿಕೊಳ್ಳಿ ಹಾಗೂ ಗೌರವಿಸಿ. ನಮ್ಮ ತಪ್ಪುಗಳನ್ನು ತಿದ್ದಿ ತೀಡಿ ನಮಗೆ ದೈರ್ಯ ತುಂಬುವ, ಉತ್ತಮ ಆಚಾರ-ವಿಚಾರಗಳನ್ನು ಕಲಿಸಿದ ಗುರುಗಳೊಂದಿಗೆ ಮುಂದೆಯೂ ಇದೇ ರೀತಿಯ ಬಾಂಧವ್ಯ ಬೆಳೆಸಲು ನಾವು ಪ್ರಯತ್ನ ಮಾಡೋಣ ಎಂದು ಹೇಳಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. 

ನಂತರ ವಿದ್ಯಾರ್ಥಿನಿಯರು ಅಧ್ಯಾಪಕರ ಮನರಂಜನೆಗಾಗಿ ಆಟಗಳನ್ನು ಆಡಿಸಿದರು. ಕೊನೆಗೆ ಸಿಹಿ ಹಂಚಿ ಸಂಭ್ರಮಿಸಿದರು. ಪ್ರಾಂಶುಪಾಲರು ಹಾಗೂ ಉಪನ್ಯಾಸಕರು ಕಾರ್ಯಕ್ರಮ ನಡೆಸಿದ ಎಲ್ಲಾ ವಿದ್ಯಾರ್ಥಿನಿಯರಿಗೆ ಧನ್ಯವಾದಗಳನ್ನು ತಿಳಿಸಿದರು.

Related posts

ಉಜಿರೆ: ಎಸ್.ಡಿ.ಎಂ ವಸತಿ ಪದವಿಪೂರ್ವ ಕಾಲೇಜಿನಲ್ಲಿ ವಿಶ್ವ ಪರಿಸರ ದಿನ ಆಚರಣೆ

Suddi Udaya

ಕಕ್ಕಿಂಜೆ ಸ.ಪ್ರೌ. ಶಾಲೆಯಲ್ಲಿ ಸ್ವಾಸ್ತ್ಯ ಸಂಕಲ್ಪ ದಿನಾಚರಣೆ

Suddi Udaya

ಕುವೆಟ್ಟು: ಚರಂಡಿ ವ್ಯವಸ್ಥೆ ದುರಸ್ತಿಗೊಳಿಸಿ, ಕಾಮಗಾರಿ ಪ್ರಾರಂಭ ಮಾಡುವಂತೆ ಕುವೆಟ್ಟು ಗ್ರಾ.ಪಂ. ಅಧ್ಯಕ್ಷೆ ಹಾಗೂ ಪಿಡಿಒ ರವರಿಗೆ ಮನವಿ

Suddi Udaya

ಮದ್ದಡ್ಕ ಸಮೃದ್ಧಿ ಹಾಲು ಉತ್ಪಾದಕರ ಸಹಕಾರ ಸಂಘದ ಮಹಾಸಭೆ

Suddi Udaya

ವಾಣಿ ಶಿಕ್ಷಣ ಸಂಸ್ಥೆಯಲ್ಲಿ ನಾಡಪ್ರಭು ಕೆಂಪೇಗೌಡ ಜಯಂತಿ ಆಚರಣೆ

Suddi Udaya

ತಾಲೂಕಿನ ಯುವ ಮೋರ್ಚಾ ಅಧ್ಯಕ್ಷನ ಬಂಧನಕ್ಕೆ ಭಾರತೀಯ ಮಜ್ದೂರು ಸಂಘದ ಜಿಲ್ಲಾಧ್ಯಕ್ಷ ಅನಿಲ್ ಕುಮಾರ್ ತೀವ್ರ ಖಂಡನೆ

Suddi Udaya
error: Content is protected !!