26.2 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ: ಶ್ರೀ ಧ. ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಶಿಕ್ಷಕರ ದಿನಾಚರಣೆ

ಉಜಿರೆಯ ಶ್ರೀ ಧ.ಮಂ. ಮಹಿಳಾ ಐಟಿಐಯಲ್ಲಿ ಸೆ.5 ರಂದು ಶಿಕ್ಷಕರ ದಿನಾಚರಣೆ ಕಾರ್ಯಕ್ರಮವನ್ನು ಆಚರಿಸಲಾಯಿತು.

 ಕಾರ್ಯಕ್ರಮದಲ್ಲಿ ಎಸ್ ರಾಧಾಕೃಷ್ಣನ್ ಇವರ ಭಾವಚಿತ್ರಕ್ಕೆ ಪ್ರಾಂಶುಪಾಲರಾದ ವಿ. ಪ್ರಕಾಶ್ ಕಾಮತ್ ಹಾಗೂ ಸಿಬ್ಬಂದಿಗಳಾದ ಶ್ರೀಮತಿ ಸಂಧ್ಯಾ, ಶ್ರೀಮತಿ ಸುಮಂಗಲಾ ಹಾಗೂ ಕು. ದಿವ್ಯ ಇವರು ಪುಷ್ಪ ನಮನ ಸಲ್ಲಿಸುವ ಮೂಲಕ ಗೌರವ ಸಮರ್ಪಣೆ ಮಾಡಿದರು.

 
ಈ ಸಂದರ್ಭದಲ್ಲಿ ಮಾತನಾಡಿದ ಪ್ರಾಂಶುಪಾಲರು ಎಸ್ ರಾಧಾಕೃಷ್ಣನ್ ರವರ ಆದರ್ಶ್ ಇಂದಿಗೂ ಶಿಕ್ಷಕರನ್ನು ಗೌರವದಿಂದ ಕಾಣುವ ಹಾಗೆ ಆಗಿದೆ ಅದೇ ರೀತಿ ನಮ್ಮ ಬಾಲ್ಯದ ಶಿಕ್ಷಕ - ಶಿಕ್ಷಕಿಯರನ್ನು ಇಂದು ಖುದ್ದಾಗಿ ಅಥವಾ ದೂರವಾಣಿ ಮೂಲಕ ಮಾತನಾಡಲು ಪ್ರಯತ್ನ ಮಾಡೋಣ ಯಾಕೆಂದರೆ ಇಂದು ನಾವು ಈ ಮಟ್ಟಕ್ಕೆ ಬೆಳೆಯಲು ಅವರ ತ್ಯಾಗ ಹಾಗೂ ಪರಿಶ್ರಮ ಅಮೂಲ್ಯವಾದದ್ದು. ಅದೇ ರೀತಿ ನಮ್ಮ ಮೊದಲ ಗುರು ನಮ್ಮ  ತಾಯಿ-ತಂದೆ. ಇವರಿಬ್ಬರನ್ನು ತುಂಬಾ ಪ್ರೀತಿಯಿಂದ ನೋಡಿಕೊಳ್ಳಿ ಹಾಗೂ ಗೌರವಿಸಿ. ನಮ್ಮ ತಪ್ಪುಗಳನ್ನು ತಿದ್ದಿ ತೀಡಿ ನಮಗೆ ದೈರ್ಯ ತುಂಬುವ, ಉತ್ತಮ ಆಚಾರ-ವಿಚಾರಗಳನ್ನು ಕಲಿಸಿದ ಗುರುಗಳೊಂದಿಗೆ ಮುಂದೆಯೂ ಇದೇ ರೀತಿಯ ಬಾಂಧವ್ಯ ಬೆಳೆಸಲು ನಾವು ಪ್ರಯತ್ನ ಮಾಡೋಣ ಎಂದು ಹೇಳಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. 

ನಂತರ ವಿದ್ಯಾರ್ಥಿನಿಯರು ಅಧ್ಯಾಪಕರ ಮನರಂಜನೆಗಾಗಿ ಆಟಗಳನ್ನು ಆಡಿಸಿದರು. ಕೊನೆಗೆ ಸಿಹಿ ಹಂಚಿ ಸಂಭ್ರಮಿಸಿದರು. ಪ್ರಾಂಶುಪಾಲರು ಹಾಗೂ ಉಪನ್ಯಾಸಕರು ಕಾರ್ಯಕ್ರಮ ನಡೆಸಿದ ಎಲ್ಲಾ ವಿದ್ಯಾರ್ಥಿನಿಯರಿಗೆ ಧನ್ಯವಾದಗಳನ್ನು ತಿಳಿಸಿದರು.

Related posts

ಪಣಕಜೆಯ ಅರ್ಕಜೆ ಬಳಿ ಮನೆಗೆ ಗುಡ್ಡ ಕುಸಿದು ಹಾನಿ: ಮಡಂತ್ಯಾರು ಶೌರ್ಯ ಘಟಕದ ಸ್ವಯಂ ಸೇವಕರಿಂದ ಮಣ್ಣು ತೆರವು ಕಾರ್ಯ

Suddi Udaya

ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆಯಿಂದ ಇಲOತಿಲ ಕಾರ್ಯಕ್ಷೇತ್ರದ ಜ್ಞಾನವಿಕಾಸ ಕೇಂದ್ರದ ಸಭೆ

Suddi Udaya

ಬೆಳ್ತಂಗಡಿಯ ಹಿರಿಯ ಉದ್ಯಮಿ,ಕಲಾಪ್ರೇಮಿ, ಕೊಡುಗೈ ದಾನಿಗುರುವಾಯನಕೆರೆ ಹಂಸ ರೈಸ್ ಮಿಲ್ ಮಾಲಕ ಬಾಲಕೃಷ್ಣ ನಾಯಕ್ ವಿಧಿವಶ

Suddi Udaya

ಇಂದಬೆಟ್ಟು: ದೇವನಾರಿ ಶ್ರೀ ಅರ್ಧನಾರೀಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೆ ಮತ್ತು ಪ್ರತಿಷ್ಠಾ ಮಹೋತ್ಸವ: ಹೊರೆಕಾಣಿಕೆ ಸಮರ್ಪಣೆ, ಧ್ವಜಾರೋಹಣ

Suddi Udaya

ಎಸ್.ಎಸ್.ಎಲ್.ಸಿ ಫಲಿತಾಂಶ: ವಾಣಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ವಿದ್ಯಾರ್ಥಿ ರಕ್ಮಿತಾ ಎಂ. ತಾಲೂಕಿಗೆ ತೃತೀಯ ಸ್ಥಾನ

Suddi Udaya

ಬಂದಾರು : ಬಂದಾರು ಗ್ರಾ.ಪಂ. ನಿಂದ ನಿವೃತ್ತಿ ಪಡೆದ ಸಿಬ್ಬಂದಿ ಮೋಹನ್ ಬಂಗೇರ ರವರಿಗೆ ಸನ್ಮಾನ ಕಾರ್ಯಕ್ರಮ

Suddi Udaya
error: Content is protected !!