23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ: ರುಡ್‌ಸೆಟ್ ಸಂಸ್ಥೆಯಲ್ಲಿ ಫೋಟೋಗ್ರಫಿ ಮತ್ತು ವಿಡೀಯೋಗ್ರಫಿ ತರಬೇತಿಯ ಸಮಾರೋಪ ಸಮಾರಂಭ

ಉಜಿರೆ: ಯುವ ಶಕ್ತಿ ಎಂಬುದು ದೊಡ್ಡ ಪ್ರವಾಹ ಇದ್ದ ಹಾಗೆ, ಪ್ರವಾಹವು ಪ್ರಖರವಾದ ವೇಗದಿಂದ ಕೂಡಿರುತ್ತದೆ. ಈ ಜಲರಾಶಿಗೆ ಅದರ ಪಾಡಿಗೆ ಅದನ್ನು ಬಿಟ್ಟರೆ ಅನೇಕ ನಾಶ ನಷ್ಟಗಳನ್ನು ಉಂಟು ಮಾಡಿ ಸಮುದ್ರ ಸೇರುತ್ತದೆ, ಆದರೆ ಆ ನೀರನ್ನು ಅಣೆಕಟ್ಟು ಕಟ್ಟಿ ಅದನ್ನು ನೀರಾವರಿಗೆ ಬಳಸಿಕೊಳ್ಳಲು ಅವಕಾಶ ಇದೆ. ಅದರಂತೆ ಯುವ ಶಕ್ತಿಗೆ ಸರಿಯಾದ ಮಾರ್ಗದರ್ಶನ ನೀಡಿದರೆ ಅವರಿಂದ ಕೂಡ ದೇಶಕ್ಕೆ ಪ್ರಯೋಜನವಿದೆ. ಜ್ಞಾನ, ಕೌಶಲ್ಯ, ದೋರಣೆ ಮತ್ತು ಮೌಲ್ಯಗಳನ್ನು ಯುವಜನರಿಗೆ ನೀಡಬೇಕು. ಅದರಂತೆ ರುಡ್‌ಸೆಟ್ ಸಂಸ್ಥೆಯ ಎಲ್ಲಾ ತರಬೇತಿಗಳಲ್ಲಿ ಈ ವಿಷಯಗಳನ್ನು ನೀಡಲಾಗುತ್ತದೆ, ಅವಕಾಶಗಳನ್ನು ಬಾಚಿಕೊಳ್ಳಬೇಕು ಅದರ ಜೊತೆಗೆ ಅವಕಾಶಗಳನ್ನು ನಾವೇ ಸೃಷ್ಠಿಸಬೇಕು, ಉನ್ನತ ಶಿಕ್ಷಣವನ್ನು ಪಡೆದು ಜೀವನದಲ್ಲಿ ನೆಲೆ ನಿಲ್ಲಲು ಸಾದ್ಯ ಇಲ್ಲದೇ ಇರಬಹುದು ಆದರೆ ರುಡ್‌ಸೆಟ್ ಸಂಸ್ಥೆಯಲ್ಲಿ ತರಬೇತಿಯನ್ನು ಪಡೆದ ಯುವ ಜನತೆ ಸ್ವಾವಲಂಬಿಗಳಾಗಿ ಬಾಳುತ್ತಾರೆ ಎಂದು ಎಸ್‌ಡಿಎಮ್ ಏಜುಕೇಷನಲ್ ಸೊಸೈಟಿಯ ಕಾರ್ಯದರ್ಶಿಯಾದ ಡಾ. ಎಸ್. ಸತೀಶ್ಚ್ಂದ್ರ ಅವರು ಅಭಿಪ್ರಾಯ ಪಟ್ಟರು.

ಅವರು ಉಜಿರೆಯ ರುಡ್‌ಸೆಟ್ ಸಂಸ್ಥೆಯಲ್ಲಿ ಫೋಟೋಗ್ರಫಿ ಮತ್ತು ವಿಡೀಯೋಗ್ರಫಿ ತರಬೇತಿಯ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿ ಶಿಬಿರಾರ್ಥಿಗಳಿಗೆ ಪ್ರಮಾಣ ಪತ್ರ ವಿತರಿಸಿದರು. ಈ ಕಾರ್ಯಕ್ರಮದಲ್ಲಿ ರುಡ್‌ಸೆಟ್ ಸಂಸ್ಥೆಗಳ ಕಾರ್ಯನಿರ್ವಾಹಕ ನಿರ್ದೇಶಕರಾದ ಗಿರಿಧರ್ ಕಲ್ಲಾಪುರರವರು ಅಧ್ಯಕ್ಷ ಸ್ಥಾನ ವಹಿಸಿದ್ದರು, ಸಂಸ್ಥೆಯ ನಿರ್ದೇಶಕರಾದ ಎಮ್. ಸುರೇಶ್‌ರವರು ಅತಿಥಿಗಳನ್ನು ಸ್ವಾಗತಿಸಿ ತರಬೇತಿಯ ಹಿನ್ನೋಟವನ್ನು ನೀಡಿದರು. ಹಿರಿಯ ಉಪನ್ಯಾಸಕಿ ಶ್ರೀಮತಿ ಅನಸೂಯರವರು ಕಾರ್ಯಕ್ರಮ ನಿರ್ವಹಿಸಿದರೆ, ಹಿರಿಯ ಉಪನ್ಯಾಸಕರಾದ ಉಪನ್ಯಾಸಕರಾದ ಅಬ್ರಹಾಂ ಜೇಮ್ಸ್‌ರವರು ಧನ್ಯವಾದವಿತ್ತರು. ಕೆಲವು ಶಿಬಿರಾರ್ಥಿಗಳು ತರಬೇತಿಯ ಅನಿಸಿಕೆಯನ್ನು ವ್ಯಕ್ತಪಡಿಸಿದರು.

ಕಾರ್ಯಕ್ರಮದಲ್ಲಿ ಫೋಟೋಗ್ರಫಿ ಮತ್ತು ವಿಡಿಯೋಗ್ರಫಿ ತರಬೇತಿಯ 35 ಶಿಭಿರಾರ್ಥಿಗಳ ಜೊತೆಗೆ ಸಂಸ್ಥೆಯಲ್ಲಿ ನಡೆಯುತ್ತಿರುವ ಬ್ಯೂಟಿ ಪಾರ್ಲರ್ ಮತ್ತು ಕಂಪ್ಯೂಟರ್ ಟ್ಯಾಲಿ ತರಬೇತಿಗಳ ಶಿಬಿರಾರ್ಥಿಗಳು ಭಾಗವಹಿಸಿದ್ದರು.

Related posts

ಬೆಳ್ತಂಗಡಿ ಹೋಲಿ ರಿಡೀಮರ್ ಚರ್ಚ್, ಭಾರತೀಯ ಕಥೊಲಿಕ್ ಯುವ ಸಂಚಲನ ಹಾಗೂ ಯುವ ಕಥೊಲಿಕ್ ವಿದ್ಯಾರ್ಥಿ ಸಂಚಲನ ವತಿಯಿಂದ ಸ್ವಚ್ಛತಾ ಅಭಿಯಾನ

Suddi Udaya

ಅರಸಿನಮಕ್ಕಿ ಸರಕಾರಿ ಪದವಿ ಪೂರ್ವ ಕಾಲೇಜಿನ ನೂತನ ಕಟ್ಟಡಕ್ಕೆ ಶಿಲಾನ್ಯಾಸ

Suddi Udaya

ಉಜಿರೆ ಎಸ್.ಡಿ.ಎಂ. ಮಹಿಳಾ ಐಟಿಐ ಕಾಲೇಜಿನಲ್ಲಿ ಪ್ರಥಮ ಚಿಕಿತ್ಸೆ ಹಾಗೂ ಹೃದಯ-ಶ್ವಾಸ ಪುನಶ್ಚೇತನ ಕುರಿತು ಮಾಹಿತಿ, ಪ್ರಾತ್ಯಕ್ಷಿಕೆ ಕಾರ್ಯಕ್ರಮ

Suddi Udaya

ಸ್ತುತಿರವರ ಹುಟ್ಟುಹಬ್ಬದ ಪ್ರಯುಕ್ತ ಉರುಂಬಿದೊಟ್ಟು ಅಂಗನವಾಡಿಯ ಸುತ್ತ ಗಿಡಗಂಟಿಗಳ ಸ್ವಚ್ಛತೆ ಹಾಗೂ ತೆಂಗಿನ ಗಿಡ ನೆಡುವ ಮೂಲಕ ಆಚರಣೆ

Suddi Udaya

ಬಳಂಜ: ಮುಡಾಯಿಬೆಟ್ಟು ನಿವಾಸಿ ಲಲಿತ ನಿಧನ

Suddi Udaya

ಕೊಕ್ಕಡ ಸೈಂಟ್ ಫ್ರಾನ್ಸಿಸ್ ಪ.ಪೂ ಕಾಲೇಜಿಗೆ ಶೇ.100 ಫಲಿತಾಂಶ

Suddi Udaya
error: Content is protected !!