23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ವಾಣಿ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ

ಬೆಳ್ತಂಗಡಿ: ಉತ್ತಮ ಗುಣನಡತೆಗಳಿಂದ ಶ್ರೇಷ್ಠ ವ್ಯಕ್ತಿತ್ವ ರೂಪಿತವಾಗಲು ಸಾಧ್ಯ ಎಂದು ಮಡಂತ್ಯಾರು ಸೇಕ್ರೇಡ್ ಹಾರ್ಟ್ ಪದವಿ ಪೂರ್ವ ಕಾಲೇಜಿನ ನಿವೃತ್ತ ಶಿಕ್ಷಕ ವಿಶ್ವನಾಥ ಶೆಟ್ಟಿ ಹೇಳಿದರು.

ಅವರು ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಗುರುವಂದನೆ ಪ್ರಯುಕ್ತ ಸನ್ಮಾನ ಸ್ವೀಕರಿಸಿ ಮಾತನಾಡುತ್ತಾ, ಸಮಾಜದಲ್ಲಿ ಯಾರಿಗೂ ತೊಂದರೆ ಕೊಡದೆ, ಯಾವ ಕಾರಣಕ್ಕೂ ಹಿಂಜರಿಯದೆ, ಇನ್ನೊಬ್ಬರ ಬಾಯಿಗೆ ಆಹಾರವಾಗದೆ ಬಾಳಬೇಕು. ಹಣ ಸಂಪಾದನೆ ಮುಖ್ಯ ಉದ್ದೇಶವಾಗದೆ, ಮಾನಸಿಕ ನೆಮ್ಮದಿಯನ್ನು ಹೊಂದಿದವರಾಗಬೇಕು. ವ್ಯಸನಗಳಿಗೆ ಬಲಿಯಾಗದೆ, ಉತ್ತಮ ವಿಚಾರದ ಕುರಿತು ಧ್ಯಾನಾಸ್ತಕರಾಗಿ ಜ್ಞಾನ ಗಳಿಸಬೇಕು. ನಾವಿರುವ ಪರಿಸರ ಸ್ವಚ್ಛವಾಗಿದ್ದರೆ, ಮನಸ್ಸು ಸ್ವಚ್ಛವಾಗಿರುತ್ತದೆ. ನಮಗೆ ತಾಯಿ ತಂದೆ ಜೀವ ಕೊಟ್ಟರೆ, ಗುರು ಜೀವನವನ್ನು ಕೊಡುತ್ತಾರೆ ಎಂದರು.

ಕಾಲೇಜಿನ ಪ್ರಾಂಶುಪಾಲ ಯದುಪತಿ ಗೌಡ ಅಧ್ಯಕ್ಷತೆ ವಹಿಸಿದ್ದರು. ಉಪಪ್ರಾಂಶುಪಾಲ ವಿಷ್ಣುಪ್ರಕಾಶ್ ಎಂ ಹಾಗೂ ಉಪನ್ಯಾಸಕ ವೃಂದದವರು ಉಪಸ್ಥಿತರಿದ್ದರು. ವಿದ್ಯಾರ್ಥಿ ಕ್ಷೇಮಪಾಲನಾ ಕಾರ್ಯದರ್ಶಿ ಕು| ಪಂಚಮಿ ಸ್ವಾಗತಿಸಿದರು. ಕು|ಮೌನ್ವಿತ ಧನ್ಯವಾದ ಸಲ್ಲಿಸಿದರು. ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಕು| ನಮೃತಾ ಮತ್ತು ಕು|ಸನುಷಾ ಪಿಂಟೋ ಕಾರ್ಯಕ್ರಮ ನಿರೂಪಿಸಿದರು.

Related posts

ನಾರಾವಿ ಸಂತ ಪೌಲ್ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya

ಬೆಳ್ತಂಗಡಿ: ಪವರ್ ಆನ್ ಸಂಸ್ಥೆಯಿಂದ ಉದ್ಯಮದೊಂದಿಗೆ ಸಮಾಜಮುಖಿ ಸೇವೆ:

Suddi Udaya

ಕೊಕ್ಕಡ ಕೆನರಾ ಬ್ಯಾಂಕಿನಿಂದ ಗ್ರಾಹಕರಿಗೆ ಆಗುತ್ತಿರುವ ಸಮಸ್ಯೆಗಳ ವಿರುದ್ಧ ಬೃಹತ್ ಪ್ರತಿಭಟನೆ

Suddi Udaya

ಸುಲ್ಕೇರಿ ಹಾ.ಉ. ಮಹಿಳಾ ಸಹಕಾರಿ ಸಂಘದ ಅಧ್ಯಕ್ಷರಾಗಿ ಪುಷ್ಪಾವತಿ ನಿತ್ಯಾನಂದ, ಉಪಾಧ್ಯಕ್ಷರಾಗಿ ವಿದ್ಯಾ ಗೋರೆ

Suddi Udaya

ಈಶ್ವರ ಭಟ್ ಕಾಂತಾಜೆ ನಿಧನಕ್ಕೆ ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ರಿಂದ ಸಂತಾಪ

Suddi Udaya

ವೇಣೂರು: ಕಲ್ಲು ಬಸದಿ ನಿವಾಸಿ ವಾಗೀಶ್ವರಿ ಇಂದ್ರ ನಿಧನ

Suddi Udaya
error: Content is protected !!