25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ವಾಣಿ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ

ಬೆಳ್ತಂಗಡಿ: ಉತ್ತಮ ಗುಣನಡತೆಗಳಿಂದ ಶ್ರೇಷ್ಠ ವ್ಯಕ್ತಿತ್ವ ರೂಪಿತವಾಗಲು ಸಾಧ್ಯ ಎಂದು ಮಡಂತ್ಯಾರು ಸೇಕ್ರೇಡ್ ಹಾರ್ಟ್ ಪದವಿ ಪೂರ್ವ ಕಾಲೇಜಿನ ನಿವೃತ್ತ ಶಿಕ್ಷಕ ವಿಶ್ವನಾಥ ಶೆಟ್ಟಿ ಹೇಳಿದರು.

ಅವರು ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಗುರುವಂದನೆ ಪ್ರಯುಕ್ತ ಸನ್ಮಾನ ಸ್ವೀಕರಿಸಿ ಮಾತನಾಡುತ್ತಾ, ಸಮಾಜದಲ್ಲಿ ಯಾರಿಗೂ ತೊಂದರೆ ಕೊಡದೆ, ಯಾವ ಕಾರಣಕ್ಕೂ ಹಿಂಜರಿಯದೆ, ಇನ್ನೊಬ್ಬರ ಬಾಯಿಗೆ ಆಹಾರವಾಗದೆ ಬಾಳಬೇಕು. ಹಣ ಸಂಪಾದನೆ ಮುಖ್ಯ ಉದ್ದೇಶವಾಗದೆ, ಮಾನಸಿಕ ನೆಮ್ಮದಿಯನ್ನು ಹೊಂದಿದವರಾಗಬೇಕು. ವ್ಯಸನಗಳಿಗೆ ಬಲಿಯಾಗದೆ, ಉತ್ತಮ ವಿಚಾರದ ಕುರಿತು ಧ್ಯಾನಾಸ್ತಕರಾಗಿ ಜ್ಞಾನ ಗಳಿಸಬೇಕು. ನಾವಿರುವ ಪರಿಸರ ಸ್ವಚ್ಛವಾಗಿದ್ದರೆ, ಮನಸ್ಸು ಸ್ವಚ್ಛವಾಗಿರುತ್ತದೆ. ನಮಗೆ ತಾಯಿ ತಂದೆ ಜೀವ ಕೊಟ್ಟರೆ, ಗುರು ಜೀವನವನ್ನು ಕೊಡುತ್ತಾರೆ ಎಂದರು.

ಕಾಲೇಜಿನ ಪ್ರಾಂಶುಪಾಲ ಯದುಪತಿ ಗೌಡ ಅಧ್ಯಕ್ಷತೆ ವಹಿಸಿದ್ದರು. ಉಪಪ್ರಾಂಶುಪಾಲ ವಿಷ್ಣುಪ್ರಕಾಶ್ ಎಂ ಹಾಗೂ ಉಪನ್ಯಾಸಕ ವೃಂದದವರು ಉಪಸ್ಥಿತರಿದ್ದರು. ವಿದ್ಯಾರ್ಥಿ ಕ್ಷೇಮಪಾಲನಾ ಕಾರ್ಯದರ್ಶಿ ಕು| ಪಂಚಮಿ ಸ್ವಾಗತಿಸಿದರು. ಕು|ಮೌನ್ವಿತ ಧನ್ಯವಾದ ಸಲ್ಲಿಸಿದರು. ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಕು| ನಮೃತಾ ಮತ್ತು ಕು|ಸನುಷಾ ಪಿಂಟೋ ಕಾರ್ಯಕ್ರಮ ನಿರೂಪಿಸಿದರು.

Related posts

ಕರಾಯ – ಇಳಂತಿಲ ರಸ್ತೆಯಲ್ಲಿ ಅಲ್ಲಿ ಅಲ್ಲಿ ಬರೆ ಕುಸಿತ

Suddi Udaya

ಜಿಲ್ಲೆಯ ಹಾಸ್ಟೇಲ್‌ಗಳ ಸ್ಥಿತಿಗಳ ಬಗ್ಗೆ ವಿಧಾನ ಪರಿಷತ್ತಿನಲ್ಲಿ ಸದಸ್ಯ ಪ್ರತಾಪಸಿಂಹ ನಾಯಕ್‌ ಪ್ರಶ್ನೆ

Suddi Udaya

ಮಾಜಿ ಶಾಸಕ ಕೆ ವಸಂತ ಬಂಗೇರ ನಿಧನಕ್ಕೆ ಬೆಳ್ತಂಗಡಿ ಬಿಷಪ್ ಲಾರೆನ್ಸ್ ಮುಕ್ಕುಯಿ ರವರಿಂದ ಸಂತಾಪ

Suddi Udaya

ಪಂಚಾಯತ್ ಕಾಮಗಾರಿಗಳನ್ನು ನಡೆಸಲು ಇಂಜಿನಿಯರ್ ಗಳ ಕೊರತೆ: ಕೂಡಲೇ ಸರಕಾರ ಕ್ರಮ ಜರುಗಿಸುವಂತೆ ಕೊಕ್ಕಡ ಗ್ರಾ.ಪಂ. ಉಪಾಧ್ಯಕ್ಷ ಪ್ರಭಾಕರ ಗೌಡ ಒತ್ತಾಯ

Suddi Udaya

ನ್ಯಾಯತರ್ಪು ಜಾರಿಗೆಬೈಲು ನಿವಾಸಿ ಕೆ.ಎಂ. ಅಬೂಬಕ್ಕರ್ ರವರ ಬ್ಯಾಂಕ್ ಖಾತೆಯಿಂದ ಅಪರಿಚಿತ ಇಬ್ಬರು ವ್ಯಕ್ತಿಗಳಿಂದ ಹಣ ಕಳವು

Suddi Udaya

ಅಗ್ರಿಲೀಫ್ ಗೆ ದಾಖಲೆಯ ರೂ. 20 ಕೋಟಿ ಹೂಡಿಕೆ : 2 ವರ್ಷಗಳಲ್ಲಿ ರೂ. 100 ಕೋಟಿ ವ್ಯವಹಾರದ ಗುರಿ: ಗ್ರಾಮೀಣ ಭಾಗದ ವಿದೇಶಿ ರಫ್ತು ಸಂಸ್ಥೆಯ ಅಪೂರ್ವ ಸಾಧನೆ

Suddi Udaya
error: Content is protected !!