July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ವಾಣಿ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ

ಬೆಳ್ತಂಗಡಿ: ಉತ್ತಮ ಗುಣನಡತೆಗಳಿಂದ ಶ್ರೇಷ್ಠ ವ್ಯಕ್ತಿತ್ವ ರೂಪಿತವಾಗಲು ಸಾಧ್ಯ ಎಂದು ಮಡಂತ್ಯಾರು ಸೇಕ್ರೇಡ್ ಹಾರ್ಟ್ ಪದವಿ ಪೂರ್ವ ಕಾಲೇಜಿನ ನಿವೃತ್ತ ಶಿಕ್ಷಕ ವಿಶ್ವನಾಥ ಶೆಟ್ಟಿ ಹೇಳಿದರು.

ಅವರು ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಗುರುವಂದನೆ ಪ್ರಯುಕ್ತ ಸನ್ಮಾನ ಸ್ವೀಕರಿಸಿ ಮಾತನಾಡುತ್ತಾ, ಸಮಾಜದಲ್ಲಿ ಯಾರಿಗೂ ತೊಂದರೆ ಕೊಡದೆ, ಯಾವ ಕಾರಣಕ್ಕೂ ಹಿಂಜರಿಯದೆ, ಇನ್ನೊಬ್ಬರ ಬಾಯಿಗೆ ಆಹಾರವಾಗದೆ ಬಾಳಬೇಕು. ಹಣ ಸಂಪಾದನೆ ಮುಖ್ಯ ಉದ್ದೇಶವಾಗದೆ, ಮಾನಸಿಕ ನೆಮ್ಮದಿಯನ್ನು ಹೊಂದಿದವರಾಗಬೇಕು. ವ್ಯಸನಗಳಿಗೆ ಬಲಿಯಾಗದೆ, ಉತ್ತಮ ವಿಚಾರದ ಕುರಿತು ಧ್ಯಾನಾಸ್ತಕರಾಗಿ ಜ್ಞಾನ ಗಳಿಸಬೇಕು. ನಾವಿರುವ ಪರಿಸರ ಸ್ವಚ್ಛವಾಗಿದ್ದರೆ, ಮನಸ್ಸು ಸ್ವಚ್ಛವಾಗಿರುತ್ತದೆ. ನಮಗೆ ತಾಯಿ ತಂದೆ ಜೀವ ಕೊಟ್ಟರೆ, ಗುರು ಜೀವನವನ್ನು ಕೊಡುತ್ತಾರೆ ಎಂದರು.

ಕಾಲೇಜಿನ ಪ್ರಾಂಶುಪಾಲ ಯದುಪತಿ ಗೌಡ ಅಧ್ಯಕ್ಷತೆ ವಹಿಸಿದ್ದರು. ಉಪಪ್ರಾಂಶುಪಾಲ ವಿಷ್ಣುಪ್ರಕಾಶ್ ಎಂ ಹಾಗೂ ಉಪನ್ಯಾಸಕ ವೃಂದದವರು ಉಪಸ್ಥಿತರಿದ್ದರು. ವಿದ್ಯಾರ್ಥಿ ಕ್ಷೇಮಪಾಲನಾ ಕಾರ್ಯದರ್ಶಿ ಕು| ಪಂಚಮಿ ಸ್ವಾಗತಿಸಿದರು. ಕು|ಮೌನ್ವಿತ ಧನ್ಯವಾದ ಸಲ್ಲಿಸಿದರು. ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಕು| ನಮೃತಾ ಮತ್ತು ಕು|ಸನುಷಾ ಪಿಂಟೋ ಕಾರ್ಯಕ್ರಮ ನಿರೂಪಿಸಿದರು.

Related posts

ಮಾ.8: ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ವತಿಯಿಂದ, ತುಂಗಪ್ಪ ಬಂಗೇರ ನೇತೃತ್ವದಲ್ಲಿ 18ನೇ ವರ್ಷದ ಸಾಮೂಹಿಕ ವಿವಾಹ

Suddi Udaya

ಬಳಂಜ ಸ.ಪ್ರೌಢ ಶಾಲೆಗೆ ಶೇ. 100 ಫಲಿತಾಂಶ

Suddi Udaya

ಬೆಳ್ತಂಗಡಿ: ಸುದೆಮುಗೇರು ಅನುಗ್ರಹ ವೃದ್ಧಾಶ್ರಮದಲ್ಲಿ ಶ್ರೀಮತಿ ಇಂದಿರಾ ಗಾಂಧಿ ಜನ್ಮದಿನಾಚರಣೆ

Suddi Udaya

ಶಿಶಿಲ: ಬರ್ಗುಳದಲ್ಲಿ ಮರ ಬಿದ್ದು ಎರಡು ವಿದ್ಯುತ್ ಕಂಬಗಳು ಧರಾಶಾಹಿ: ಶೌರ್ಯ ವಿಪತ್ತು ನಿರ್ವಹಣಾ ತಂಡದಿಂದ ತೆರವು ಕಾರ್ಯ

Suddi Udaya

ಉದ್ಯೋಗದ ಪ್ರಥಮ ವೇತನ ಬಾರ್ಯ ಶ್ರೀ ಮಹಾವಿಷ್ಣು ಕ್ಷೇತ್ರಕ್ಕೆ ಸಮರ್ಪಣೆ

Suddi Udaya

ಕೊಲೆಯಾದ ಸುಮಂತ್ ಮನೆಗೆ ಪ್ರತಿಭಾ ಕುಳಾಯಿ ಭೇಟಿ

Suddi Udaya
error: Content is protected !!