25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವೇಣೂರು: ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದನ್ವಯ ಸ್ವ ಉದ್ಯೋಗ ಪ್ರೇರಣಾ ಶಿಬಿರ

ವೇಣೂರು : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿಸಿ ಟ್ರಸ್ಟ್ (ರಿ), ಗುರುವಾಯನಕೆರೆ, ವೇಣೂರು ವಲಯದ ಕರಿಮಣೇಲು ಕಾರ್ಯಕ್ಷೇತ್ರ ದ ಪಡ್ಡಂತಡ್ಕ ಮಂಜುನಾಥೇಶ್ವರ ಭಜನಾ ಮಂದಿರದಲ್ಲಿ ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದನ್ವಯ ಸ್ವ ಉದ್ಯೋಗ ಪ್ರೇರಣಾ ಶಿಬಿರ ಕಾರ್ಯಕ್ರಮದ ಉದ್ಘಾಟನೆಯನ್ನು ಒಕ್ಕೂಟದ ಅಧ್ಯಕ್ಷರಾದ ದೋಗೂ ನಾಯ್ಕರವರು ನೆರವೇರಿಸಿದರು.

ಸಂಪನ್ಮೂಲ ವ್ಯಕ್ತಿಯಾಗಿ ಸಿದ್ದವನ ಉಜಿರೆಯ ರುಡ್ ಸೆಟ್ ಸಂಸ್ಥೆಯ ಸಿಬ್ಬಂದಿ ರಶ್ಮಿ ರವರು ಮಾತನಾಡಿ ರುಡ್ ಸೆಟ್ ಸಂಸ್ಥೆ ಬೆಳೆದು ಬಂದ ಬಗ್ಗೆ ಇಲ್ಲಿ ನೀಡುವ ತರಭೇತಿಗಳು, ತರಬೇತಿ ಯ ನಂತರ ಫಲಾನುಭವಿಗಳು ಸ್ವ ಉದ್ಯೋಗ ಮಾಡಲು ಪ್ರೇರಣೆ, ಬ್ಯಾಂಕ್ ನಲ್ಲಿ ಸಬ್ಸಿಡಿ ಯಲ್ಲಿ ಸಿಗುವ ಸಾಲಗಳ ಬಗ್ಗೆ ಮಾಹಿತಿ ನೀಡಲಾಗುತಿದೆ. ತರಭೇತಿ ಪಡೆಯುವುದು ಮುಖ್ಯವಲ್ಲ ನಂತರ ದಿನಗಳಲ್ಲಿ ಕಲಿತ ವಿದ್ಯೆ ಯಲ್ಲಿ ಸ್ವ ಉದ್ಯೋಗ ಮಾಡುವುದು ಮುಖ್ಯ ವಾಗಿರುತ್ತದೆ ಇದರ ಬಗ್ಗೆ ನಾವು ತರಭೇತಿಯ ಬಳಿಕವು ಪಲಾನುಭಾವಿಯ ಸಂಪರ್ಕದಲ್ಲಿ ಇರುತ್ತೇವೆ. ಯಾಕೆಂದ್ರೆ ಎಲ್ಲರಿಗೂ ಸರಕಾರಿ, ಹಾಗೂ ಖಾಸಗಿ ಉದ್ಯೋಗ ಸಿಗಲು ಸಾಧ್ಯವಿಲ್ಲ ಅದರಿಂದ ಸ್ವ ಉದ್ಯೋಗ ಮಾಡಬೇಕಾದ ಅನಿವಾರ್ಯತೆ ಇದೇ ಎಂದರು. ನಮ್ಮ ತರಬೇತಿ ಸಂಸ್ಥೆಯಲ್ಲಿ ಕೃಷಿ ಸಂಬ0ಧಿತ, ಉತ್ಪನ ಸಂಬಂಧಿತ, ಉದ್ಯಮಶೀಲತಾ ತರಭೇತಿ , ಸೇವೆಗೆ ಸಂಬಂಧಿಸಿದಂತೆ ಸೆಲ್ ಫೋನ್ ರಿಪೇರಿ, ಸಿ. ಸಿ ಟಿವಿ, ಕಂಪ್ಯೂಟರ್, ಗ್ರಹೋಪಯೋಗಿ ಉಪಕರಣಗಳ ರಿಪೇರಿ, ಹಾಗೂ ಇನ್ನಿತರ ತರಭೇತಿಗಳನ್ನು ನೀಡಲಾಗುವುದು ಕಲಿಯಲು ಆಸಕ್ತಿ ಇರುವವರು ಇ-ಮೆಲ್,ವೆಬ್ ಸೈಟ್, ದೂರವಾಣಿ ಮುಖಂತರವು ಅರ್ಜಿ ನೀಡಬಹುದು ಎಂದರು.

ಕಾರ್ಯಕ್ರಮದಲ್ಲಿ ಜ್ಞಾನವಿಕಾಸ ಸಮನ್ವಯಧಿಕಾರಿ ಹರಿಣಿ, ಸೇವಾಪ್ರತಿನಿಧಿ ಶೋಭಾ, ಒಕ್ಕೂಟ ಪದಾಧಿಕಾರಿಗಳಾದ ಗಣೇಶ್, ಆನಂದ, ಯಶೋಧ ಹಾಗೂ ಸದಸ್ಯರು ಉಪಸ್ಥಿತರಿದ್ದರು. ಕಾರ್ಯಕ್ರಮದ ನಿರೂಪಣೆ ಯನ್ನು ಶ್ವೇತಾರವರು ನೆರವೇರಿಸಿದರು.

Related posts

ಶಿರ್ಲಾಲು ಶ್ರಿ ಮಹಾಲಿಂಗೇಶ್ವರ ದೇವರಿಗೆ ಬ್ರಹ್ಮ ಕಲಶಾಭಿಷೇಕ

Suddi Udaya

ಉಜಿರೆ: ಸ್ನೇಹ ಕಿರಣ್ ಬೇಬಿ ಸಿಟ್ಟಿಂಗ್ ಗೆ ಮರ ಬಿದ್ದು ಹಾನಿ, ಅಪಾಯದಿಂದ ಪಾರಾದ ಮಕ್ಕಳು

Suddi Udaya

ಎಸ್‌ಡಿಎಂ. ಶಿಕ್ಷಣ ಮಹಾವಿದ್ಯಾಲಯ(ಬಿ.ಎಡ್)ದಲ್ಲಿ ನಕ್ಕು ಬಿಡು ಬಾನಕ್ಕಿ ಗಜಲ್ ಸಂಕಲನ ಬಿಡುಗಡೆ ಮತ್ತು ಗಜಲ್ ರಚನಾ ಕಾರ್ಯಾಗಾರ

Suddi Udaya

ಬೆಳ್ತಂಗಡಿ: ಆಳ್ವಾಸ್ ಪ್ರಗತಿ, ಬೃಹತ್ ಉದ್ಯೋಗ ಮಾಹಿತಿ ಶಿಬಿರ; ಶಾಸಕ ಹರೀಶ್ ಪೂಂಜರವರಿಂದ ಚಾಲನೆ

Suddi Udaya

ಕತಾರ್ ಕಕ್ಕಿಂಜೆ ಶರೀಅತ್‌ ಕಾಲೇಜು ನೂತನ ಸಮಿತಿಗೆ ಆಯ್ಕೆ

Suddi Udaya

ಬೆಳ್ತಂಗಡಿ ಲಯನ್ಸ್ ಲಿಯೋ ಕ್ಲಬ್ ಅಧ್ಯಕ್ಷರಾಗಿ ಭಾಷಿನಿ, ಕಾರ್ಯದರ್ಶಿಯಾಗಿ ದೀಕ್ಷಿತ್ ಆಯ್ಕೆ

Suddi Udaya
error: Content is protected !!