23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ ಧ. ಮಂ. ಮಹಿಳಾ ಐಟಿಐ ಕಾಲೇಜಿನಲ್ಲಿ ಕರಕುಶಲ ಕಲೆಗಳ ಬಗ್ಗೆ ಕಾರ್ಯಾಗಾರ

ಉಜಿರೆ: ಇಲ್ಲಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಹಿಳಾ ಐಟಿಐ ಕಾಲೇಜು ಹಾಗೂ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಡಿ.ಎಡ್. ಕಾಲೇಜು ಸಹಯೋಗದಲ್ಲಿ ಕರಕುಶಲ ಕಲೆಗಳ ಬಗ್ಗೆ ಒಂದು ದಿನದ ಕಾರ್ಯಾಗಾರವು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಹಿಳಾ ಐಟಿಐ ಕಾಲೇಜಿನಲ್ಲಿ ಸೆ.2ರಂದು ನಡೆಯಿತು.

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಂಶುಪಾಲ ವಿ. ಪ್ರಕಾಶ್ ಕಾಮತ್ ಕಾರ್ಯಾಗಾರ ಉದ್ಘಾಟಿಸಿದರು.

ಬಳಿಕ ಮಾತನಾಡಿದ ಅವರು, “ಪಾಠದ ಜತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳಿಗೆ ತಮ್ಮನ್ನು ತಾವು ಸಕ್ರಿಯವಾಗಿ ತೊಡಗಿಸಿಕೊಳ್ಳುವಂತೆ ಮಾಡಿ ಅವರಲ್ಲಿರುವ ಕೌಶಲಗಳನ್ನು ಗುರುತಿಸಿ, ನಿರಂತರ ಪ್ರೋತ್ಸಾಹ, ಸಹಕಾರ ನೀಡಿದಾಗ ಹೊಸತನ ಸಾಧ್ಯವಾಗುತ್ತದೆ. ಕರಕುಶಲ ಕಲೆಯಿಂದ ಹೊಸ ಹೊಸ ಉತ್ಪನ್ನಗಳು ಉತ್ಪತ್ತಿಯಾಗುತ್ತವೆ. ಅದಕ್ಕಾಗಿ ಕಾರ್ಯಾಗಾರ ಹಮ್ಮಿಕೊಂಡಿದ್ದು, ಈ ಕಾರ್ಯಕ್ರಮ ಸದುಪಯೋಗವಾಗಲಿ ಮತ್ತು ನಿಮ್ಮ ಜೀವನ ನಿರ್ವಹಣೆ ಮಾಡಲು ಸಹಕಾರಿ ಆಗಲಿ” ಎಂದು ಶುಭ ಹಾರೈಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಕರ ತರಬೇತಿ ಸಂಸ್ಥೆಯ ಪ್ರಾಂಶುಪಾಲ ಸ್ವಾಮಿ ಕೆ.ಎ. ಅವರು ಮಾತನಾಡಿ, “ಪ್ರಶಿಕ್ಷಣಾರ್ಥಿಗಳು ಇಲ್ಲಿ ಕಲಿತ ಕಲೆಯನ್ನು ನಂತರ ತಮ್ಮ ತಮ್ಮ ಮನೆಗಳಲ್ಲಿ ಹಾಗೂ ತಾವು ಮುಂದೆ ದುಡಿಯಲು ಹೋದ ಶಾಲೆಯ ಮಕ್ಕಳಿಗೆ ಕಲಿಸಿ” ಎಂದು ಸೂಚನೆ ನೀಡಿದರು.

“ನಮ್ಮ ಈ ಎರಡೂ ಸಂಸ್ಥೆಗಳು ಈ ಹಿಂದೆಯೂ ಅನೇಕ ಬಾರಿ ಜಂಟಿಯಾಗಿ ಕಾರ್ಯಕ್ರಮ ಆಯೋಜಿಸಿದ್ದು, ಮುಂದೆಯೂ ಇದೇ ರೀತಿ ಮುಂದುವರಿಯಲಿ” ಎಂದು ಅವರು ಆಶಿಸಿದರು.

ಎಸ್.ಡಿ.ಎಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯ ಕಿರಿಯ ತರಬೇತಿ ಅಧಿಕಾರಿ ದಿವ್ಯ ಅವರು ಕರಕುಶಲ ವಸ್ತುಗಳ ತಯಾರಿಕೆ ಕುರಿತು ಮಾಹಿತಿ ನೀಡಿದರು. ವಿದ್ಯಾರ್ಥಿಗಳು ವಿವಿಧ ಬಗೆಯ ವಸ್ತುಗಳನ್ನು ತಯಾರಿಸಿದರು.

ಎಸ್.ಡಿ.ಎಂ. ಡಿ.ಎಡ್. ಕಾಲೇಜಿನ ಶಿಕ್ಷಕಿ ಅನುಷಾ ಎ. ಜೆ. ಸ್ವಾಗತಿಸಿ, ವಂದಿಸಿದರು. ಯತೀಕ್ಷಾ ಕಾರ್ಯಕ್ರಮ ನಿರೂಪಿಸಿದರು.

Related posts

ದೇಶದ ಪ್ರಧಾನಿ ನರೇಂದ್ರ ಮೋದಿಯವರಿಗೆ ಮದುವೆ ಆಮಂತ್ರಣ ಕಳುಹಿಸಿದ ವರ: ವೈವಾಹಿಕ ಬದುಕಿಗೆ ಕಾಲಿಟ್ಟ ಸುಬ್ರಹ್ಮಣ್ಯ ಆಚಾರ್ಯ – ಸವಿತಾ ದಂಪತಿಗೆ ಪ್ರಧಾನಿ ಕಾರ್ಯಲಯದಿಂದ ತಲುಪಿತು ಶುಭಾಶಯ ಪತ್ರ

Suddi Udaya

ಇಂದಬೆಟ್ಟು ಗ್ರಾ.ಪಂ. ಅಧ್ಯಕ್ಷ ಆನಂದ ಅಡಿಲು ರವರಿಗೆ ಸನ್ಮಾನ ಮತ್ತು ಪಿಡಿಒ ಸವಿತಾ ರವರಿಗೆ ಬೀಳ್ಕೊಡುಗೆ

Suddi Udaya

ಪುದುವೆಟ್ಟು ಗ್ರಾ.ಪಂ. ಪ್ರಥಮ ಸುತ್ತಿನ ಗ್ರಾಮಸಭೆ

Suddi Udaya

ಕರ್ನೋಡಿ ಸ.ಉ.ಹಿ.ಪ್ರಾ. ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ ಅಂಗವಾಗಿ ಹಳೆ ವಿದ್ಯಾರ್ಥಿ ಸಂಘದ ವತಿಯಿಂದ “ಗುರುವಂದನಾ ಕಾರ್ಯಕ್ರಮ

Suddi Udaya

ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನ ಕುರಿತಾದ “ನಾ…ರವಿ” ಬ್ರಹ್ಮಾಂಡದೊಡೆಯಗೆ ಭಕ್ತಿ ಪ್ರಜ್ವಲನೆ ಕನ್ನಡ ಆಲ್ಬಂ ಸಾಂಗ್ ಬಿಡುಗಡೆ

Suddi Udaya

ಬಂಗಾಡಿ ಪರಿಸರದಲ್ಲಿ ವಿದ್ಯುತ್ ಸಮಸ್ಯೆ: ಬಗೆಹರಿಸದೆ ಇದ್ದಲ್ಲಿ ಕಛೇರಿಯ ಮುಂದೆ ಪ್ರತಿಭಟನೆ ಗ್ರಾಮಸ್ಥರ ಆಗ್ರಹ

Suddi Udaya
error: Content is protected !!