25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಮುಂಡೂರು: ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಉತ್ಸವ, ನೂತನ ಯುವಕ ಮಂಡಲಕ್ಕೆ ಚಾಲನೆ, ಬಡ ಕುಟುಂಬಕ್ಕೆ ಆಹಾರ ಕಿಟ್ ವಿತರಣೆ

ಬಂದಾರು : ಬಂದಾರು ಗ್ರಾಮದ ಮುಂಡೂರು ಶ್ರೀ ಕ್ಷೇತ್ರ ಚಾಮುಂಡೇಶ್ವರಿ ದೇವಸ್ಥಾನದ ವಠಾರದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಉತ್ಸವ,ನೂತನವಾಗಿ ರಚನೆಗೊಂಡಿರುವ ಚಾಮುಂಡೇಶ್ವರಿ ಯುವಕ ಮಂಡಲ ಸಂಘಕ್ಕೆ ಚಾಲನೆ, ಹಾಗೂ ಬಡ ಕುಟುಂಬ ಉಷಾ ವಿಶ್ವನಾಥ ಬಜಿಲ ಮನೆಯವರಿಗೆ ಆಹಾರ ಕಿಟ್ ಸೆ. 6 ರಂದು ವಿತರಿಸಲಾಯಿತು.


ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮದ ಉದ್ಘಾಟನೆಯನ್ನು ಶ್ರೀ ಕ್ಷೇತ್ರದ ಧರ್ಮದರ್ಶಿಗಳಾದ ಆನಂದ ಗೌಡ ನೆರವೇರಿಸಿದರು. ಮುಖ್ಯ ಅಥಿತಿಗಳಾಗಿ ಬಂದಾರು ಗ್ರಾಮ ಅಧ್ಯಕ್ಷರಾದ ದಿನೇಶ್ ಗೌಡ ಖಂಡಿಗ ಇವರು ಕಾರ್ಯಕ್ರಮಕೆ ಶುಭಕೋರಿದರು.

ವೇದಿಕೆಯಲ್ಲಿ ಗಿರೀಶ್ ಗೌಡ ಬಿ.ಕೆ ಕುಂಬುಡoಗೆ, ಚಾಮುಂಡೇಶ್ವರಿ ಯುವಕ ಮಂಡಲದ ಅಧ್ಯಕ್ಷರಾದ ಅಶ್ವಥ್ ಗೌಡ, ಅಕ್ಷಯ ಗೌಡ,ಶ್ರೀಮತಿ ಧರ್ಣಮ್ಮ ಸುಬ್ಬಣ್ಣ ಗೌಡ, ನಾರಾಯಣ ಗೌಡ ಮುಂಡೂರು, ಯುವಕ ಮಂಡಲದ ಪದಾಧಿಕಾರಿಗಳು,ಸದಸ್ಯರು, ಭಕ್ತಾಭಿಮಾನಿಗಳು, ಮನೆಯವರು ಉಪಸ್ಥಿತರಿದ್ದರು.

ವಿವಿಧ ಆಟೋಟ ಸ್ಪರ್ಧೆಗಳು,ಕಡುಬಡತನದ ಮನೆಗೆ ಆಹಾರ ವಿತರಣೆ ಕಾರ್ಯಕ್ರಮ, ಅನ್ನದಾನ ಸೇವೆ, ರಾತ್ರಿ ಶ್ರೀಕೃಷ್ಣ ದೇವರಿಗೆ ವಿಶೇಷ ಪೂಜೆ. ವಿಜೇತರಿಗೆ ಬಹುಮಾನ ವಿತರಣೆ ಕಾರ್ಯಕ್ರಮ ನೆರವೇರಿಸಲಾಯಿತು.

Related posts

ಬಂದಾರು: ಶಾಲಾ ಅಕ್ಷರ ದಾಸೋಹ ಕೊಠಡಿಯ ಉದ್ಘಾಟನೆ: ಶಾಲಾ ಪೋಷಕರ ಸಭೆ

Suddi Udaya

ಪಾಂಗಳ ಬಿಜೆಪಿ ಬೂತ್ ಸಮಿತಿ ಅಧ್ಯಕ್ಷರಾಗಿ ರಾಮಚಂದ್ರ ಭಟ್, ಕಾರ್ಯದರ್ಶಿಯಾಗಿ ಮುಖೇಶ್ ಆಯ್ಕೆ

Suddi Udaya

ವಾಲಿಬಾಲ್ ಪಂದ್ಯಾಟ: ವೇಣೂರು ವಿದ್ಯೋದಯ ಆಂಗ್ಲ ಮಾಧ್ಯಮ ಶಾಲಾ ಬಾಲಕರ ತಂಡ ಪ್ರಥಮ ಸ್ಥಾನ

Suddi Udaya

ಫೆ.15-22: ಕೊರಿಂಜ ಪಂಚಲಿಂಗೇಶ್ವರ ದೇವರ ಪುನಃ ಪ್ರತಿಷ್ಠೆ ಅಷ್ಟಬಂಧ ಬ್ರಹ್ಮಕಲಶೋತ್ಸವ ಮತ್ತು ದೈವಗಳ ಪ್ರತಿಷ್ಠೆ ಹಾಗೂ ವಾರ್ಷಿಕ ಜಾತ್ರಾ ಮಹೋತ್ಸವ, ದೇವಗಳ ನೇಮೋತ್ಸವ

Suddi Udaya

ಉಜಿರೆ: ಕುಂಜರ್ಪ ನಿವಾಸಿ ತಿಮ್ಮಪ್ಪ ಪೂಜಾರಿ ನಿಧನ

Suddi Udaya

ಚಿಬಿದ್ರೆ: ಪಿತ್ತಿಲು ನಿವಾಸಿ ದಯಾನಂದ ಪಿ ನಿಧನ

Suddi Udaya
error: Content is protected !!