22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಮುಂಡೂರು: ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಉತ್ಸವ, ನೂತನ ಯುವಕ ಮಂಡಲಕ್ಕೆ ಚಾಲನೆ, ಬಡ ಕುಟುಂಬಕ್ಕೆ ಆಹಾರ ಕಿಟ್ ವಿತರಣೆ

ಬಂದಾರು : ಬಂದಾರು ಗ್ರಾಮದ ಮುಂಡೂರು ಶ್ರೀ ಕ್ಷೇತ್ರ ಚಾಮುಂಡೇಶ್ವರಿ ದೇವಸ್ಥಾನದ ವಠಾರದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಉತ್ಸವ,ನೂತನವಾಗಿ ರಚನೆಗೊಂಡಿರುವ ಚಾಮುಂಡೇಶ್ವರಿ ಯುವಕ ಮಂಡಲ ಸಂಘಕ್ಕೆ ಚಾಲನೆ, ಹಾಗೂ ಬಡ ಕುಟುಂಬ ಉಷಾ ವಿಶ್ವನಾಥ ಬಜಿಲ ಮನೆಯವರಿಗೆ ಆಹಾರ ಕಿಟ್ ಸೆ. 6 ರಂದು ವಿತರಿಸಲಾಯಿತು.


ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮದ ಉದ್ಘಾಟನೆಯನ್ನು ಶ್ರೀ ಕ್ಷೇತ್ರದ ಧರ್ಮದರ್ಶಿಗಳಾದ ಆನಂದ ಗೌಡ ನೆರವೇರಿಸಿದರು. ಮುಖ್ಯ ಅಥಿತಿಗಳಾಗಿ ಬಂದಾರು ಗ್ರಾಮ ಅಧ್ಯಕ್ಷರಾದ ದಿನೇಶ್ ಗೌಡ ಖಂಡಿಗ ಇವರು ಕಾರ್ಯಕ್ರಮಕೆ ಶುಭಕೋರಿದರು.

ವೇದಿಕೆಯಲ್ಲಿ ಗಿರೀಶ್ ಗೌಡ ಬಿ.ಕೆ ಕುಂಬುಡoಗೆ, ಚಾಮುಂಡೇಶ್ವರಿ ಯುವಕ ಮಂಡಲದ ಅಧ್ಯಕ್ಷರಾದ ಅಶ್ವಥ್ ಗೌಡ, ಅಕ್ಷಯ ಗೌಡ,ಶ್ರೀಮತಿ ಧರ್ಣಮ್ಮ ಸುಬ್ಬಣ್ಣ ಗೌಡ, ನಾರಾಯಣ ಗೌಡ ಮುಂಡೂರು, ಯುವಕ ಮಂಡಲದ ಪದಾಧಿಕಾರಿಗಳು,ಸದಸ್ಯರು, ಭಕ್ತಾಭಿಮಾನಿಗಳು, ಮನೆಯವರು ಉಪಸ್ಥಿತರಿದ್ದರು.

ವಿವಿಧ ಆಟೋಟ ಸ್ಪರ್ಧೆಗಳು,ಕಡುಬಡತನದ ಮನೆಗೆ ಆಹಾರ ವಿತರಣೆ ಕಾರ್ಯಕ್ರಮ, ಅನ್ನದಾನ ಸೇವೆ, ರಾತ್ರಿ ಶ್ರೀಕೃಷ್ಣ ದೇವರಿಗೆ ವಿಶೇಷ ಪೂಜೆ. ವಿಜೇತರಿಗೆ ಬಹುಮಾನ ವಿತರಣೆ ಕಾರ್ಯಕ್ರಮ ನೆರವೇರಿಸಲಾಯಿತು.

Related posts

ಬಂದಾರು-ಕುರಾಯ ಶ್ರೀ ಸದಾಶಿವ ದೇವಸ್ಥಾನದ ಪ್ರತಿಷ್ಠಾ ಮಹೋತ್ಸವ ಮತ್ತು ವಾರ್ಷಿಕ ಜಾತ್ರೋತ್ಸವ ಆರಂಭ

Suddi Udaya

ಎಸ್ ಡಿ ಎಮ್ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ರಾಷ್ಟ್ರೀಯ ಯುವ ದಿನಾಚರಣೆ

Suddi Udaya

ಮುತ್ತೂಟ್ ಫೈನಾನ್ಸ್ ಬೆಳ್ತಂಗಡಿ ಶಾಖೆ ಸ್ಥಳಾಂತರಗೊಂಡು ಶುಭಾರಂಭ: ಗ್ರಾಹಕರ ವಿಶ್ವಾಸ ಗಳಿಸಿದಾಗ ಸಂಸ್ಥೆ ಬೆಳೆಯುತ್ತದೆ : ಕುಸುಮಾಧರ್

Suddi Udaya

ಅಳದಂಗಡಿ: ಹೊಟೇಲ್ ಉದ್ಯಮ ನಿರ್ವಹಿಸುತ್ತಿದ್ದ ಯೋಗೀಶ್ ಪೂಜಾರಿ ಹೆನ್ಕಲ ಅನಾರೋಗ್ಯದಿಂದ ನಿಧನ

Suddi Udaya

ತೆಂಕಕಾರಂದೂರು ಗ್ರಾಮದಲ್ಲಿ ರಾಜರೋಷವಾಗಿ ತಿರುಗಾಡುತ್ತಿರುವ ಚಿರತೆ: ಜನತೆ ಕಂಗಾಲು

Suddi Udaya

ಗುರುವಾಯನಕೆರೆ ಹೋಟೆಲ್ ರೇಸ್ ಇನ್ ನ ಆಹಾರ ವಿಭಾಗವಾದ “ಪೆಗ್ಸ್ ರೆಸ್ಟೋ ಬಾರ್ & ಫ್ಯಾಮಿಲಿ ರೆಸ್ಟೋರೆಂಟ್” ಹೊಸ ಆಡಳಿತದೊಂದಿಗೆ ಶುಭಾರಂಭ

Suddi Udaya
error: Content is protected !!