25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಮದ್ದಡ್ಕ ಶ್ರೀರಾಮ ಸೇವಾ ಸಮಿತಿ, ವಿಶ್ವ ಹಿಂದೂ ಪರಿಷತ್ ಭಜರಂಗದಳ ಮದ್ದಡ್ಕ ಇದರ ಆಶ್ರಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಠಮಿ ಪ್ರಯಕ್ತ ಮೊಸರು ಕುಡಿಕೆ ಉತ್ಸವ

ಬೆಳ್ತಂಗಡಿ: ಶ್ರೀಕ್ರಷ್ಣ ಜನ್ಮಾಷ್ಠಮಿ  ಸಾಮೂಹಿಕ ಆಚರಣೆ ಮಾಡುವ ಮೂಲಕ ಸಂಬಂಧ ವೃದ್ಧಿಯಾಗುತ್ತದೆ. ಶ್ರೀಕೃಷ್ಣ ಮನುಕುಲಕ್ಕೆ‌ ನೀಡಿದ ಸಂದೇಶ ಅಪಾರವಾಗಿದ್ದು ಸಮಾಜದ ಉದ್ಧಾರದ ಚಿಂತನೆ ಪ್ರತಿಯೊಬ್ಬರಲ್ಲೂ ಬೆಳೆಯಬೇಕು ಎಂದು ಗುರುವಾಯನಕೆರೆ ಪ್ರೌಢಶಾಲೆ ಸಹ ಶಿಕ್ಷಕ ಯೋಗೀಶ್ ನಾಯಕ್ ನುಡಿದರು.

ಅವರು  ಶ್ರೀರಾಮ ಸೇವಾ ಸಮಿತಿ ಮದ್ದಡ್ಕ ವಿಶ್ವ ಹಿಂದೂ ಪರಿಷತ್ ಭಜರಂಗದಳ ಮದ್ದಡ್ಕ ಇದರ ಆಶ್ರಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಠಮಿ ಪ್ರಯಕ್ತ ಜರಗಿದ ಮೊಸರು ಕುಡಿಕೆ ಉತ್ಸವದ ಧಾರ್ಮಿಕ ಸಭೆಯಲ್ಲಿ ಮಾತನಾಡಿದರು.

ಮಾಜಿ ಶಾಸಕ ಕೆ ಪ್ರಭಾಕರ ಬಂಗೇರ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಯೂನಿಯನ್ ಬ್ಯಾಂಕ್ ಮದ್ದಡ್ಕ ಶಾಖೆಯ ಮುಖ್ಯ ಪ್ರಭಂದಕರು ಸುಧೀರ್ ನಾಯ್ಕ್ ಆಗಮಿಸಿದ್ದರು. ವೇದಿಕೆಯಲ್ಲಿ ಶ್ರೀರಾಮ ಸೇವಾ ಸಮಿತಿಯ ಅಧ್ಯಕ್ಷ ರಾಜ್ ಪ್ರಕಾಶ್ ಪಡ್ಡೈಲು, ಗೌರವಾಧ್ಯಕ್ಷ ಶೇಖರ ಶೆಟ್ಟಿ ಉಪ್ಪಡ್ಕ, ಪ್ರಧಾನ ಕಾರ್ಯದರ್ಶಿ ಮನೋಹರ ಕೇದಳಿಕೆ, ಕೋಶಾಧಿಕಾರಿ ಹರೀಶ್ ಬಪ್ಪಳಿಕೆ, ಬಜರಂಗದಳ ಮದ್ದಡ್ಕ ಘಟಕದ ಸಂಚಾಲಕ ಯಶೋದರ ಶೆಟ್ಟಿ ಅರ್ಕಜೆ, ವಿಶ್ವ ಹಿಂದೂ ಪರಿಷತ್ ಅಧ್ಯಕ್ಷ ಗಣೇಶ್ ಶೆಟ್ಟಿ ಅರ್ಕಜೆ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಕೇಂದ್ರ ಸರಕಾರಿ ನೌಕರಿಯಿಂದ ನಿವೃತ್ತಿಗೊಂಡ ವಿಠಲ ಶೆಟ್ಟಿ ಉಪ್ಪಡ್ಕ ಇವರನ್ನು ಸಮಿತಿಯಿಂದ ಸನ್ಮಾನಿಸಲಾಯಿತು.

ಬೆಳಿಗ್ಗೆ ಶ್ರೀ ರಾಮ ಭಜನಾ ಮಂದಿರದಲ್ಲಿ ಗಣಹೋಮ ವಿಶೇಷ ಪೂಜಾ ವೈದಿಕ ಕಾರ್ಯಕ್ರಮವನ್ನು ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪ್ರದಾನ ಅರ್ಚಕ ವೇದಮೂರ್ತಿ ಯಂ. ರಘರಾಮ ಭಟ್ ಮಠ ನೆರವೇರಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಮಕ್ಕಳಿಗೆ ಮುದ್ದು ಕೃಷ್ಣ ಸ್ಪರ್ಧೆ ಮಕ್ಕಳಿಗೆ ಸಾರ್ವಜನಿಕರಿಗೆ ಅಟೋಟ ಸ್ಪರ್ಧೆ ನಡೆಸಿ ಬಹುಮಾನ ವಿತರಿಸಲಾಯಿತು. ಪ್ರಭಾಕರ‌ ಶೆಟ್ಟಿ ಉಪ್ಪಡ್ಕ ಸ್ವಾಗತಿಸಿ, ಉಮೇಶ್ ಮದ್ದಡ್ಕ ಕಾರ್ಯಕ್ರಮ ನಿರೂಪಿಸಿದರು. ಹರೀಶ್ ಕೋಟ್ಯಾನ್ ಧನ್ಯವಾದವಿತ್ತರು.

ಸಂಜೆ ಭಜನಾ ಮಂದಿರದಲ್ಲಿ ಮಹಾಲಿಂಗೇಶ್ವರ ಭಜನಾ ಮಂಡಳಿ ಓಡೀಲು ಇವರಿಂದ ಭಜನಾ ಕಾರ್ಯಕ್ರಮ ಜರಗಿತು. ಶ್ರೀರಾಮ ಸೇವಾ ಸಮಿತಿ. ವಿಶ್ವ ಹಿಂದೂ ಪರಿಷತ್. ಭಜರಂಗದಳ ಪಧಾದಿಕಾರಿಗಳು ಸರ್ವ ಸದಸ್ಯರು ಕಾರ್ಯಕ್ರಮದ ಯಶಶ್ವಿಗೆ ಸಹಕರಿಸಿದರು .

Related posts

ಚೆಕ್ ಅಮಾನ್ಯ ಪ್ರಕರಣ; ನ್ಯಾಯಾಲಯದಲ್ಲಿ ಖುಲಾಸೆ

Suddi Udaya

ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಚಾತುರ್ಮಾಸ್ಯ ವ್ರತಾರಂಭ

Suddi Udaya

ಉಜಿರೆ: ಗ್ರಾ.ಪಂ ಮಾಜಿ ಸದಸ್ಯ ಮುಹಮ್ಮದ್‌ ಕುಂಞಿ ನಿಧನ

Suddi Udaya

ಕೊಕ್ಕಡ: ಉಪ್ಪಾರಪಳಿಕೆ-ಉಪ್ಪಾರಹಳ್ಳ ರಸ್ತೆಗೆ ಕಾಂಕ್ರೀಟ್ ಹಾಕಿ ಶ್ರಮದಾನ

Suddi Udaya

ವಾಣಿ ಪದವಿ ಪೂರ್ವ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಡಿ.ಯದುಪತಿ ಗೌಡರಿಗೆ ಗೌರವಾರ್ಪಣೆ

Suddi Udaya

ವಿಶ್ವ ಹಿಂದೂ ಪರಿಷತ್ ಭಜರಂಗದಳ ಚಾರ್ಮಾಡಿ, ಘಟಕ ಶ್ರೀ ರಾಮ್ ಚಾರ್ಮಾಡಿ ಇದರ ಸಹಭಾಗಿತ್ವದಲ್ಲಿ ಹೊನಲು ಬೆಳಕಿನ ಹಿಂದೂ ಭಾಂಧವರ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

Suddi Udaya
error: Content is protected !!