March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಮುಂಡೂರು: ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಉತ್ಸವ, ನೂತನ ಯುವಕ ಮಂಡಲಕ್ಕೆ ಚಾಲನೆ, ಬಡ ಕುಟುಂಬಕ್ಕೆ ಆಹಾರ ಕಿಟ್ ವಿತರಣೆ

ಬಂದಾರು : ಬಂದಾರು ಗ್ರಾಮದ ಮುಂಡೂರು ಶ್ರೀ ಕ್ಷೇತ್ರ ಚಾಮುಂಡೇಶ್ವರಿ ದೇವಸ್ಥಾನದ ವಠಾರದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಉತ್ಸವ,ನೂತನವಾಗಿ ರಚನೆಗೊಂಡಿರುವ ಚಾಮುಂಡೇಶ್ವರಿ ಯುವಕ ಮಂಡಲ ಸಂಘಕ್ಕೆ ಚಾಲನೆ, ಹಾಗೂ ಬಡ ಕುಟುಂಬ ಉಷಾ ವಿಶ್ವನಾಥ ಬಜಿಲ ಮನೆಯವರಿಗೆ ಆಹಾರ ಕಿಟ್ ಸೆ. 6 ರಂದು ವಿತರಿಸಲಾಯಿತು.


ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮದ ಉದ್ಘಾಟನೆಯನ್ನು ಶ್ರೀ ಕ್ಷೇತ್ರದ ಧರ್ಮದರ್ಶಿಗಳಾದ ಆನಂದ ಗೌಡ ನೆರವೇರಿಸಿದರು. ಮುಖ್ಯ ಅಥಿತಿಗಳಾಗಿ ಬಂದಾರು ಗ್ರಾಮ ಅಧ್ಯಕ್ಷರಾದ ದಿನೇಶ್ ಗೌಡ ಖಂಡಿಗ ಇವರು ಕಾರ್ಯಕ್ರಮಕೆ ಶುಭಕೋರಿದರು.

ವೇದಿಕೆಯಲ್ಲಿ ಗಿರೀಶ್ ಗೌಡ ಬಿ.ಕೆ ಕುಂಬುಡoಗೆ, ಚಾಮುಂಡೇಶ್ವರಿ ಯುವಕ ಮಂಡಲದ ಅಧ್ಯಕ್ಷರಾದ ಅಶ್ವಥ್ ಗೌಡ, ಅಕ್ಷಯ ಗೌಡ,ಶ್ರೀಮತಿ ಧರ್ಣಮ್ಮ ಸುಬ್ಬಣ್ಣ ಗೌಡ, ನಾರಾಯಣ ಗೌಡ ಮುಂಡೂರು, ಯುವಕ ಮಂಡಲದ ಪದಾಧಿಕಾರಿಗಳು,ಸದಸ್ಯರು, ಭಕ್ತಾಭಿಮಾನಿಗಳು, ಮನೆಯವರು ಉಪಸ್ಥಿತರಿದ್ದರು.

ವಿವಿಧ ಆಟೋಟ ಸ್ಪರ್ಧೆಗಳು,ಕಡುಬಡತನದ ಮನೆಗೆ ಆಹಾರ ವಿತರಣೆ ಕಾರ್ಯಕ್ರಮ, ಅನ್ನದಾನ ಸೇವೆ, ರಾತ್ರಿ ಶ್ರೀಕೃಷ್ಣ ದೇವರಿಗೆ ವಿಶೇಷ ಪೂಜೆ. ವಿಜೇತರಿಗೆ ಬಹುಮಾನ ವಿತರಣೆ ಕಾರ್ಯಕ್ರಮ ನೆರವೇರಿಸಲಾಯಿತು.

Related posts

ಕುಂಟಾಲಪಳಿಕೆ ಸಮನ್ವಿ ಕಿಶೋರಿ ಸಂಘದ ಉದ್ಘಾಟನೆ

Suddi Udaya

ಬೆಳ್ತಂಗಡಿ ಡಿ.ಕೆ.ಆರ್.ಡಿ.ಎಸ್ ಸ್ನೇಹಜ್ಯೋತಿ ಮಹಿಳಾ ತಾಲೂಕು ಒಕ್ಕೂಟದ ಮಹಾಸಭೆ ಹಾಗೂ ತರಬೇತಿ

Suddi Udaya

ಶಿಬಾಜೆ: ಮಧು ಎಂಟರ್ ಪ್ರೈಸಸ್ ಶುಭಾರಂಭ

Suddi Udaya

ಕೊಕ್ಕಡ : ಕಾಡಾನೆ ದಾಳಿಯಿಂದ ಮೃತಪಟ್ಟ ಬಾಲಕೃಷ್ಣ ಶೆಟ್ಟಿ ಮನೆಗೆ ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

Suddi Udaya

ವಾಣಿ ಶಿಕ್ಷಣ ಸಂಸ್ಥೆಗೆ ಅಮೇರಿಕದ ಡಾ. ರಾಮಯ್ಯ ಗೌಡ, ಶ್ರೀಮತಿ ಕೋನಿ ದಂಪತಿ ಭೇಟಿ

Suddi Udaya

ವಾಣಿ ಪ.ಪೂ. ಕಾಲೇಜಿನ ರಿತ್ವಿಕ್ ಶೆಟ್ಟಿ ಏಕಪಾತ್ರ ಅಭಿನಯದಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya
error: Content is protected !!