23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಮುಂಡೂರು: ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಉತ್ಸವ, ನೂತನ ಯುವಕ ಮಂಡಲಕ್ಕೆ ಚಾಲನೆ, ಬಡ ಕುಟುಂಬಕ್ಕೆ ಆಹಾರ ಕಿಟ್ ವಿತರಣೆ

ಬಂದಾರು : ಬಂದಾರು ಗ್ರಾಮದ ಮುಂಡೂರು ಶ್ರೀ ಕ್ಷೇತ್ರ ಚಾಮುಂಡೇಶ್ವರಿ ದೇವಸ್ಥಾನದ ವಠಾರದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಉತ್ಸವ,ನೂತನವಾಗಿ ರಚನೆಗೊಂಡಿರುವ ಚಾಮುಂಡೇಶ್ವರಿ ಯುವಕ ಮಂಡಲ ಸಂಘಕ್ಕೆ ಚಾಲನೆ, ಹಾಗೂ ಬಡ ಕುಟುಂಬ ಉಷಾ ವಿಶ್ವನಾಥ ಬಜಿಲ ಮನೆಯವರಿಗೆ ಆಹಾರ ಕಿಟ್ ಸೆ. 6 ರಂದು ವಿತರಿಸಲಾಯಿತು.


ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮದ ಉದ್ಘಾಟನೆಯನ್ನು ಶ್ರೀ ಕ್ಷೇತ್ರದ ಧರ್ಮದರ್ಶಿಗಳಾದ ಆನಂದ ಗೌಡ ನೆರವೇರಿಸಿದರು. ಮುಖ್ಯ ಅಥಿತಿಗಳಾಗಿ ಬಂದಾರು ಗ್ರಾಮ ಅಧ್ಯಕ್ಷರಾದ ದಿನೇಶ್ ಗೌಡ ಖಂಡಿಗ ಇವರು ಕಾರ್ಯಕ್ರಮಕೆ ಶುಭಕೋರಿದರು.

ವೇದಿಕೆಯಲ್ಲಿ ಗಿರೀಶ್ ಗೌಡ ಬಿ.ಕೆ ಕುಂಬುಡoಗೆ, ಚಾಮುಂಡೇಶ್ವರಿ ಯುವಕ ಮಂಡಲದ ಅಧ್ಯಕ್ಷರಾದ ಅಶ್ವಥ್ ಗೌಡ, ಅಕ್ಷಯ ಗೌಡ,ಶ್ರೀಮತಿ ಧರ್ಣಮ್ಮ ಸುಬ್ಬಣ್ಣ ಗೌಡ, ನಾರಾಯಣ ಗೌಡ ಮುಂಡೂರು, ಯುವಕ ಮಂಡಲದ ಪದಾಧಿಕಾರಿಗಳು,ಸದಸ್ಯರು, ಭಕ್ತಾಭಿಮಾನಿಗಳು, ಮನೆಯವರು ಉಪಸ್ಥಿತರಿದ್ದರು.

ವಿವಿಧ ಆಟೋಟ ಸ್ಪರ್ಧೆಗಳು,ಕಡುಬಡತನದ ಮನೆಗೆ ಆಹಾರ ವಿತರಣೆ ಕಾರ್ಯಕ್ರಮ, ಅನ್ನದಾನ ಸೇವೆ, ರಾತ್ರಿ ಶ್ರೀಕೃಷ್ಣ ದೇವರಿಗೆ ವಿಶೇಷ ಪೂಜೆ. ವಿಜೇತರಿಗೆ ಬಹುಮಾನ ವಿತರಣೆ ಕಾರ್ಯಕ್ರಮ ನೆರವೇರಿಸಲಾಯಿತು.

Related posts

ಕುಕ್ಕೇಡಿ: ಸುಡುಮದ್ದು ತಯಾರಿಕ ಘಟಕದಲ್ಲಿ ಸ್ಪೋಟ ಪ್ರಕರಣ: ಸ್ಥಳಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ

Suddi Udaya

ಬಳಂಜ: ಪ್ರಯಾಸ್ ಕಪ್ ಆಫ್ ಗುಡ್ ಹೋಪ್ ಜಾಗೃತಿ ಕಾರ್ಯಕ್ರಮ

Suddi Udaya

ತೆಂಕಕಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಮಹಾದ್ವಾರ ಲೋಕಾರ್ಪಣೆ: ರೂ 11 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಂಡ ಮಹಾದ್ವಾರ, ಶಾಸಕ ಹರೀಶ್ ಪೂಂಜರವರಿಂದ ಉದ್ಘಾಟನೆ

Suddi Udaya

ಲಾಯಿಲ ರಾಘವೇಂದ್ರ ಮಠಕ್ಕೆ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಭೇಟಿ

Suddi Udaya

ಮಚ್ಚಿನ ಸ. ಪ್ರೌ.ಶಾಲೆಯ ಸಮಾಜ ವಿಜ್ಞಾನ ಶಿಕ್ಷಕ ಯೋಗಿಶ್. ಎಸ್ ರವರಿಗೆ ಬೀಳ್ಕೊಡುಗೆ

Suddi Udaya

ಪುದುವೆಟ್ಟು ಶ್ರೀ ಧ.ಮಂ ಅ.ಹಿ.ಪ್ರಾ.ಶಾಲೆಯಲ್ಲಿ ಅಂತರರಾಷ್ಟ್ರೀಯ ಯೋಗ ದಿನಾಚರಣೆ

Suddi Udaya
error: Content is protected !!