July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ: ಸಂತ ಅಂತೋನಿ ಚರ್ಚ್ ನಲ್ಲಿ ಸಂಭ್ರಮದ ತೆನೆ ಹಬ್ಬ

ಉಜಿರೆ: ಸಂತ ಅಂತೋನಿ ಚರ್ಚ್ ನಲ್ಲಿ ಸಂಭ್ರಮದ ತೆನೆ ಹಬ್ಬವನ್ನು ಸೆ.8ರಂದು ಆಚರಿಸಲಾಯಿತು.

ಸಂಭ್ರಮದ ದಿವ್ಯ ಬಲಿ ಪೂಜೆಯನ್ನು ಉಜಿರೆ ದಯಾಳ್ ಬಾಗ್ ಆಶ್ರಮದ ಮುಖ್ಯ ಧರ್ಮಗುರು ವ.ಫಾ. ಫೆಡ್ರಿಕ್ ಬ್ಯಾಗ್ಸ್ ಅರ್ಪಿಸಿ ತೆನೆಯನ್ನು ಆಶೀರ್ವದಿಸಿ ಸಂದೇಶ ನೀಡಿದರು.
ಈ ಸಂದರ್ಭದಲ್ಲಿ ಚರ್ಚ್ ನ ಪ್ರಧಾನ ಧರ್ಮಗುರು ಜೇಮ್ಸ್ ಡಿಸೋಜಾ, ಅನುಗ್ರಹ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ವ.ಫಾ.ವಿಜಯ್ ಲೋಬೊ, ವ.ಫಾ.ವಲೇರಿಯನ್ ಸಿಕ್ವೆರಾ, ವ.ಫಾ.ಪ್ರದೀಪ್ ಪಿಂಟೊ, ಚರ್ಚ್ ಪಾಲನಾ ಮಂಡಳಿ ಉಪಾಧ್ಯಕ್ಷ ಆಂಟೋನಿ ಫೆರ್ನಾಂಡಿಸ್, ಕಾರ್ಯದರ್ಶಿ ಲಿಗೋರಿ ವಾಸ್, ಪಾಲನಾ ಮಂಡಳಿ ಸದಸ್ಯರು, ಆರ್ಥಿಕ ಮಂಡಳಿ ಸದಸ್ಯರು, ಸಹಕರಿಸಿದರು.

ಕನ್ಯಾ ಮರಿಯಮ್ಮ ಹುಟ್ಟು ಹಬ್ಬದ ಪ್ರಯುಕ್ತ ಎಲ್ಲರೂ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಮರಿಯಮ್ಮಗೆ ಹೂ ಅರ್ಪಿಸಿದರು. ಬಳಿಕ ಪ್ರತಿಯೊಬ್ಬರ ಮನೆಗೂ ತೆನೆಯನ್ನು ವಿತರಿಸಲಾಯಿತು.

ಆಗಮಿಸಿದ ಭಕ್ತಾಧಿಗಳಿಗೆ ಕಬ್ಬು ವಿತರಿಸಿ, ಹಳ್ಳಿ ಮನೆ ಪ್ರವೀಣ್ ಫೆರ್ನಾಂಡಿಸ್ ಪ್ರಯೋಜಕತ್ವದಲ್ಲಿ ಉಪಹಾರದ ವ್ಯವಸ್ಥೆ ಮಾಡಲಾಗಿತ್ತು.

Related posts

ತುಳುವ ಮಹಾಸಭೆ ಬೆಳ್ತಂಗಡಿ ತಾಲೂಕು ಸಂಚಾಲಕರಾಗಿ ಡಾ. ದಿವ ಕೊಕ್ಕಡ ಆಯ್ಕೆ

Suddi Udaya

ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆ, ಪುಷ್ಪರಥೋತ್ಸವ: ಅಭಿನಂದನೆ ಕಾರ್ಯಕ್ರಮ

Suddi Udaya

ನಮ್ಮೂರ ಕನ್ನಡ ಶಾಲೆ ನಮ್ಮ ಹೆಮ್ಮೆ ಉಜಿರೆ ಹಳೆಪೇಟೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ‘ಸೇವಾಯಜ್ಞ’

Suddi Udaya

ಬೆಂಗಳೂರು ಸೆಮಿಕಂಡಕ್ಟರ್ ವಿನ್ಯಾಸ ಸಂಸ್ಥೆ: 280 ಕೋಟಿ ರೂ. ಗೆ ಇನ್ಫೋಸಿಸ್ ಸ್ವಾಧೀನ

Suddi Udaya

ರಾಣಿ ಅಬ್ಬಕ್ಕ 500 ವಿಶೇಷ ಉಪನ್ಯಾಸ ಕಾರ್ಯಕ್ರಮ: ಶ್ರೀಮತಿ ರಶ್ಮಿತಾ ಜೈನ್ ಇವರಿಗೆ ರಾಣಿ ಅಬ್ಬಕ್ಕ ವಿಶೇಷ ಪುರಸ್ಕಾರ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನ ಆಚರಣೆ

Suddi Udaya
error: Content is protected !!