September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಚಾರ್ಮಾಡಿ ಘಾಟಿಯಲ್ಲಿ ಪ್ರತ್ಯೇಕ ಎರಡು ಅಪಘಾತ: ಪ್ರಾಣಾಪಾಯದಿಂದ ಪಾರು

ಚಾರ್ಮಾಡಿ: ಚಾರ್ಮಾಡಿ ಘಾಟಿಯಲ್ಲಿ ಮಳೆ ಸುರಿಯುತ್ತಿದ್ದು ದಟ್ಟನೆಯ ಮಂಜು ಕವಿದ ಈ ಹಿನ್ನಲೆಯಲ್ಲಿ ಶುಕ್ರವಾರ ಸಂಜೆ ಎರಡು ಪ್ರತ್ಯೇಕ ಅಪಘಾತಗಳು ಸಂಭವಿಸಿವೆ.

ಚಾರ್ಮಾಡಿ ಬಿದಿರುತಳ ಬಸ್ ನಿಲ್ದಾಣದ ಅಂತರದಲ್ಲಿ ಮಂಗಳೂರಿಗೆ ಸಾಗುತ್ತಿದ್ದ ಬೊಲೆರೊ ವಾಹನವೊಂದು ಮಂಜು ಕವಿದ ಕಾರಣ ದಾರಿ ಕಾಣದೇ ತಡೆಗೋಡೆಗೆ ಹತ್ತಿ ಪಲ್ಟಿಯಾಗಿದ್ದು ಅದೃಷ್ಟ ವಶಾತ್ ಬೊಲೇರೊ ವಾಹನದಲ್ಲಿ ಇದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಇನ್ನೊಂದು ಪ್ರಕರಣ ಅಣ್ಣಪ್ಪ ಸ್ವಾಮಿ ದೇವಸ್ಥಾನದಿಂದ ಸ್ವಲ್ಪ ಮುಂದೆ ಕಿರು ದಾರಿಯಲ್ಲಿ ಮಂಜು ಮುಸುಕಿದ್ದರಿಂದ ದಾರಿ ಕಾಣದೇ ಹುಬ್ಬಳ್ಳಿಯಿಂದ ಧರ್ಮಸ್ಥಳಕ್ಕೆ ಸಾಗುತ್ತಿದ್ದ ಬಸ್, ಆ ಕಡೆಯಿಂದ ಧರ್ಮಸ್ಥಳದಿಂದ ದಾರವಾಡಕ್ಕೆ ಸಾಗುತ್ತಿದ್ದ ಕಾರು ಕಿರು ದಾರಿಯಲ್ಲಿ ಅಪಘಾತ ಸಂಭವಿಸಿ ತಡೆಗೋಡೆ ಕುಸಿದಿದ್ದು ಸಣ್ಣ ಪುಟ್ಟ ಗಾಯಗಳಾಗಿವೆ.

ಈ ಕಿರು ಸ್ಥಳದಲ್ಲಿ ಸಾವಿರ ಅಡಿಯಷ್ಟು ಪ್ರಫಾತ ಇರುವುದರಿಂದ ತಡೆ ಗೋಡೆ ಕುಸಿದಿದ್ದು, ದಟ್ಟ ಮಂಜು ಕವಿದ ಹಿನ್ನಲೆಯಲ್ಲಿ ಇನ್ನಷ್ಟು ಅಪಾಯವಾಗುವ ಸಾಧ್ಯತೆಯಿದ್ದು ಹೆದ್ದಾರಿ ಪ್ರಾಧಿಕಾರ ಕೂಡಲೇ ತಡೆಗೋಡೆ ದುರಸ್ತಿ ಮಾಡಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

Related posts

ಉಜಿರೆ: ಎಸ್ ಡಿ ಎಂ ಪದವಿ ಪೂರ್ವ ಕಾಲೇಜಿನಲ್ಲಿ ಯುವ ದಿನಾಚರಣೆ

Suddi Udaya

ಹೊಸಪಟ್ಣ: ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ನಯನಾಡು ಗೆಳೆಯರ ಬಳಗ ಸೇವಾ ಸಂಸ್ಥೆಯ ಗೌರವಾಧ್ಯಕ್ಷ ನೆಲ್ವಿಸ್ಟರ್ ಪಿಂಟೋ ರವರಿಗೆ ಸನ್ಮಾನ

Suddi Udaya

ಸೀನಿಯರ್ ನ್ಯಾಶನಲ್ ನೆಟ್ಬಾಲ್ ಪಂದ್ಯಾಟ : ಉಜಿರೆಯ ಎಸ್.ಡಿ.ಎಂ ವಿದ್ಯಾರ್ಥಿಗಳ ಸಾಧನೆ

Suddi Udaya

ಕಳಿಯ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ನಾಗದೇವರಿಗೆ ಕ್ಷೀರಾಭಿಷೇಕ, ವಿಶೇಷ ಪೂಜೆ

Suddi Udaya

ಕರಾಯ ತ್ರಿವರ್ಣ ಸಂಗಮ ಆಟೋ ಚಾಲಕ ಮಾಲಕ ಸಂಘದ ಸಮಿತಿ ರಚನೆ: ಅಧ್ಯಕ್ಷರಾಗಿ ವೆಂಕಟೇಶ್ ಪೂಜಾರಿ ಅವಿರೋಧ ಆಯ್ಕೆ

Suddi Udaya
error: Content is protected !!