23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಚಾರ್ಮಾಡಿ ಘಾಟಿಯಲ್ಲಿ ಪ್ರತ್ಯೇಕ ಎರಡು ಅಪಘಾತ: ಪ್ರಾಣಾಪಾಯದಿಂದ ಪಾರು

ಚಾರ್ಮಾಡಿ: ಚಾರ್ಮಾಡಿ ಘಾಟಿಯಲ್ಲಿ ಮಳೆ ಸುರಿಯುತ್ತಿದ್ದು ದಟ್ಟನೆಯ ಮಂಜು ಕವಿದ ಈ ಹಿನ್ನಲೆಯಲ್ಲಿ ಶುಕ್ರವಾರ ಸಂಜೆ ಎರಡು ಪ್ರತ್ಯೇಕ ಅಪಘಾತಗಳು ಸಂಭವಿಸಿವೆ.

ಚಾರ್ಮಾಡಿ ಬಿದಿರುತಳ ಬಸ್ ನಿಲ್ದಾಣದ ಅಂತರದಲ್ಲಿ ಮಂಗಳೂರಿಗೆ ಸಾಗುತ್ತಿದ್ದ ಬೊಲೆರೊ ವಾಹನವೊಂದು ಮಂಜು ಕವಿದ ಕಾರಣ ದಾರಿ ಕಾಣದೇ ತಡೆಗೋಡೆಗೆ ಹತ್ತಿ ಪಲ್ಟಿಯಾಗಿದ್ದು ಅದೃಷ್ಟ ವಶಾತ್ ಬೊಲೇರೊ ವಾಹನದಲ್ಲಿ ಇದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಇನ್ನೊಂದು ಪ್ರಕರಣ ಅಣ್ಣಪ್ಪ ಸ್ವಾಮಿ ದೇವಸ್ಥಾನದಿಂದ ಸ್ವಲ್ಪ ಮುಂದೆ ಕಿರು ದಾರಿಯಲ್ಲಿ ಮಂಜು ಮುಸುಕಿದ್ದರಿಂದ ದಾರಿ ಕಾಣದೇ ಹುಬ್ಬಳ್ಳಿಯಿಂದ ಧರ್ಮಸ್ಥಳಕ್ಕೆ ಸಾಗುತ್ತಿದ್ದ ಬಸ್, ಆ ಕಡೆಯಿಂದ ಧರ್ಮಸ್ಥಳದಿಂದ ದಾರವಾಡಕ್ಕೆ ಸಾಗುತ್ತಿದ್ದ ಕಾರು ಕಿರು ದಾರಿಯಲ್ಲಿ ಅಪಘಾತ ಸಂಭವಿಸಿ ತಡೆಗೋಡೆ ಕುಸಿದಿದ್ದು ಸಣ್ಣ ಪುಟ್ಟ ಗಾಯಗಳಾಗಿವೆ.

ಈ ಕಿರು ಸ್ಥಳದಲ್ಲಿ ಸಾವಿರ ಅಡಿಯಷ್ಟು ಪ್ರಫಾತ ಇರುವುದರಿಂದ ತಡೆ ಗೋಡೆ ಕುಸಿದಿದ್ದು, ದಟ್ಟ ಮಂಜು ಕವಿದ ಹಿನ್ನಲೆಯಲ್ಲಿ ಇನ್ನಷ್ಟು ಅಪಾಯವಾಗುವ ಸಾಧ್ಯತೆಯಿದ್ದು ಹೆದ್ದಾರಿ ಪ್ರಾಧಿಕಾರ ಕೂಡಲೇ ತಡೆಗೋಡೆ ದುರಸ್ತಿ ಮಾಡಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

Related posts

ತಿಮ್ಮಣಬೆಟ್ಟು ಸ.ಉ.ಪ್ರಾ.ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ನ್ಯೂ ಇಂಡಿಯಾ ಚಾರಿಟೇಬಲ್ ಟ್ರಸ್ಟ್ ನಿಂದ ವಿದ್ಯಾರ್ಥಿ ವೇತನ, ಅಶಕ್ತರಿಗೆ ನೆರವು, ಆಹಾರ- ಔಷಧ ಕಿಟ್ ವಿತರಣೆ

Suddi Udaya

ಮಾಲಾಡಿ ಗ್ರಾ.ಪಂ. ಗ್ರಾಮ ಸಭೆ

Suddi Udaya

ನ್ಯಾಯತರ್ಪು ಕಲಾಯಿದೊಟ್ಟು ನಲ್ಲಿ ಧರೆ ಕುಸಿತ: ಇನ್ನಷ್ಟು ಧರೆ ಕುಸಿಯುವ ಭೀತಿ

Suddi Udaya

ಓಡಿಲ್ನಾಳ ಸ.ಉ. ಪ್ರಾ ಶಾಲೆಯಲ್ಲಿ ವಿದ್ಯಾರ್ಥಿ ಮಂತ್ರಿ ಮಂಡಲದ ಚುನಾವಣೆ

Suddi Udaya

ಮಡಂತ್ಯಾರು ಯಂಗ್ ಟೈಗರ್ಸ್ ಅಲೆಕ್ಕಿ ಫ್ರೆಂಡ್ಸ್ ಇದರ ಹತ್ತನೇ ವರ್ಷದ ವಾರ್ಷಿಕೋತ್ಸವ

Suddi Udaya
error: Content is protected !!