25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ: ಸಂತ ಅಂತೋನಿ ಚರ್ಚ್ ನಲ್ಲಿ ಸಂಭ್ರಮದ ತೆನೆ ಹಬ್ಬ

ಉಜಿರೆ: ಸಂತ ಅಂತೋನಿ ಚರ್ಚ್ ನಲ್ಲಿ ಸಂಭ್ರಮದ ತೆನೆ ಹಬ್ಬವನ್ನು ಸೆ.8ರಂದು ಆಚರಿಸಲಾಯಿತು.

ಸಂಭ್ರಮದ ದಿವ್ಯ ಬಲಿ ಪೂಜೆಯನ್ನು ಉಜಿರೆ ದಯಾಳ್ ಬಾಗ್ ಆಶ್ರಮದ ಮುಖ್ಯ ಧರ್ಮಗುರು ವ.ಫಾ. ಫೆಡ್ರಿಕ್ ಬ್ಯಾಗ್ಸ್ ಅರ್ಪಿಸಿ ತೆನೆಯನ್ನು ಆಶೀರ್ವದಿಸಿ ಸಂದೇಶ ನೀಡಿದರು.
ಈ ಸಂದರ್ಭದಲ್ಲಿ ಚರ್ಚ್ ನ ಪ್ರಧಾನ ಧರ್ಮಗುರು ಜೇಮ್ಸ್ ಡಿಸೋಜಾ, ಅನುಗ್ರಹ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ವ.ಫಾ.ವಿಜಯ್ ಲೋಬೊ, ವ.ಫಾ.ವಲೇರಿಯನ್ ಸಿಕ್ವೆರಾ, ವ.ಫಾ.ಪ್ರದೀಪ್ ಪಿಂಟೊ, ಚರ್ಚ್ ಪಾಲನಾ ಮಂಡಳಿ ಉಪಾಧ್ಯಕ್ಷ ಆಂಟೋನಿ ಫೆರ್ನಾಂಡಿಸ್, ಕಾರ್ಯದರ್ಶಿ ಲಿಗೋರಿ ವಾಸ್, ಪಾಲನಾ ಮಂಡಳಿ ಸದಸ್ಯರು, ಆರ್ಥಿಕ ಮಂಡಳಿ ಸದಸ್ಯರು, ಸಹಕರಿಸಿದರು.

ಕನ್ಯಾ ಮರಿಯಮ್ಮ ಹುಟ್ಟು ಹಬ್ಬದ ಪ್ರಯುಕ್ತ ಎಲ್ಲರೂ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಮರಿಯಮ್ಮಗೆ ಹೂ ಅರ್ಪಿಸಿದರು. ಬಳಿಕ ಪ್ರತಿಯೊಬ್ಬರ ಮನೆಗೂ ತೆನೆಯನ್ನು ವಿತರಿಸಲಾಯಿತು.

ಆಗಮಿಸಿದ ಭಕ್ತಾಧಿಗಳಿಗೆ ಕಬ್ಬು ವಿತರಿಸಿ, ಹಳ್ಳಿ ಮನೆ ಪ್ರವೀಣ್ ಫೆರ್ನಾಂಡಿಸ್ ಪ್ರಯೋಜಕತ್ವದಲ್ಲಿ ಉಪಹಾರದ ವ್ಯವಸ್ಥೆ ಮಾಡಲಾಗಿತ್ತು.

Related posts

ಜೆಡಿಎಸ್ ಅಭ್ಯರ್ಥಿ ಅಶ್ರಫ್ ಆಲಿಕುಂಞಿ ರವರಿಂದ ರೋಡ್ ಶೋ: ಗಣ್ಯರ ಭೇಟಿ

Suddi Udaya

ಮಚ್ಚಿನ ಸ.ಉ. ಹಿ.ಪ್ರಾ. ಶಾಲೆಗೆ ಯುವ ಬೆಂಗಳೂರು ಟ್ರಸ್ಟ್ ವತಿಯಿಂದ ಸ್ಮಾರ್ಟ್ ಬೋರ್ಡ್ ಕೊಡುಗೆ

Suddi Udaya

ಕರ್ನಾಟಕ ದಲಿತ ಚಳುವಳಿ 50ರ ಸಂಭ್ರಮ ಸಮಾವೇಶ’ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಉಜಿರೆ ಎಸ್‌.ಡಿ.ಎಂ ಸಿ.ಬಿ.ಎಸ್.ಇ ಶಾಲೆಯ ಶಿಕ್ಷಕರಿಗೆ “ಕಲಿಕಾ ಫಲಿತಾಂಶ ಮತ್ತು ವಿಧಾನಗಳು” ಕಾರ್ಯಾಗಾರ

Suddi Udaya

ಆಪರೇಷನ್ ಸಿಂಧೂರ ಯಶಸ್ವಿ ಕಾರ್ಯಾಚರಣೆ ಪ್ರಯುಕ್ತ ಉಜಿರೆ ಶ್ರೀ ಜನಾರ್ಧನ ದೇವಸ್ಥಾನದಲ್ಲಿ ಬಿಜೆಪಿ ಬೆಳ್ತಂಗಡಿ ಮಂಡಲ ಮಹಿಳಾ ಮೋರ್ಚಾ ವತಿಯಿಂದ ಶ್ರೀ ದೇವರಿಗೆ ವಿಶೇಷ ಪೂಜೆ

Suddi Udaya

ಎಸ್.ಡಿ.ಎಂ ಪ.ಪೂರ್ವ ಕಾಲೇಜಿನಲ್ಲಿ ‘ಆರೋಹಣಂ – 2025’ ವಾರ್ಷಿಕೋತ್ಸವ ಸಮಾರಂಭ

Suddi Udaya
error: Content is protected !!