24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಚಾರ್ಮಾಡಿ ಘಾಟಿಯಲ್ಲಿ ಪ್ರತ್ಯೇಕ ಎರಡು ಅಪಘಾತ: ಪ್ರಾಣಾಪಾಯದಿಂದ ಪಾರು

ಚಾರ್ಮಾಡಿ: ಚಾರ್ಮಾಡಿ ಘಾಟಿಯಲ್ಲಿ ಮಳೆ ಸುರಿಯುತ್ತಿದ್ದು ದಟ್ಟನೆಯ ಮಂಜು ಕವಿದ ಈ ಹಿನ್ನಲೆಯಲ್ಲಿ ಶುಕ್ರವಾರ ಸಂಜೆ ಎರಡು ಪ್ರತ್ಯೇಕ ಅಪಘಾತಗಳು ಸಂಭವಿಸಿವೆ.

ಚಾರ್ಮಾಡಿ ಬಿದಿರುತಳ ಬಸ್ ನಿಲ್ದಾಣದ ಅಂತರದಲ್ಲಿ ಮಂಗಳೂರಿಗೆ ಸಾಗುತ್ತಿದ್ದ ಬೊಲೆರೊ ವಾಹನವೊಂದು ಮಂಜು ಕವಿದ ಕಾರಣ ದಾರಿ ಕಾಣದೇ ತಡೆಗೋಡೆಗೆ ಹತ್ತಿ ಪಲ್ಟಿಯಾಗಿದ್ದು ಅದೃಷ್ಟ ವಶಾತ್ ಬೊಲೇರೊ ವಾಹನದಲ್ಲಿ ಇದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಇನ್ನೊಂದು ಪ್ರಕರಣ ಅಣ್ಣಪ್ಪ ಸ್ವಾಮಿ ದೇವಸ್ಥಾನದಿಂದ ಸ್ವಲ್ಪ ಮುಂದೆ ಕಿರು ದಾರಿಯಲ್ಲಿ ಮಂಜು ಮುಸುಕಿದ್ದರಿಂದ ದಾರಿ ಕಾಣದೇ ಹುಬ್ಬಳ್ಳಿಯಿಂದ ಧರ್ಮಸ್ಥಳಕ್ಕೆ ಸಾಗುತ್ತಿದ್ದ ಬಸ್, ಆ ಕಡೆಯಿಂದ ಧರ್ಮಸ್ಥಳದಿಂದ ದಾರವಾಡಕ್ಕೆ ಸಾಗುತ್ತಿದ್ದ ಕಾರು ಕಿರು ದಾರಿಯಲ್ಲಿ ಅಪಘಾತ ಸಂಭವಿಸಿ ತಡೆಗೋಡೆ ಕುಸಿದಿದ್ದು ಸಣ್ಣ ಪುಟ್ಟ ಗಾಯಗಳಾಗಿವೆ.

ಈ ಕಿರು ಸ್ಥಳದಲ್ಲಿ ಸಾವಿರ ಅಡಿಯಷ್ಟು ಪ್ರಫಾತ ಇರುವುದರಿಂದ ತಡೆ ಗೋಡೆ ಕುಸಿದಿದ್ದು, ದಟ್ಟ ಮಂಜು ಕವಿದ ಹಿನ್ನಲೆಯಲ್ಲಿ ಇನ್ನಷ್ಟು ಅಪಾಯವಾಗುವ ಸಾಧ್ಯತೆಯಿದ್ದು ಹೆದ್ದಾರಿ ಪ್ರಾಧಿಕಾರ ಕೂಡಲೇ ತಡೆಗೋಡೆ ದುರಸ್ತಿ ಮಾಡಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

Related posts

ಧರ್ಮಸ್ಥಳ ಪ್ರಾ.ಕೃ.ಪ.ಸ. ಸಂಘದ ಸದಸ್ಯರು, ಆಡಳಿತ ಮಂಡಳಿ, ಸಿಬ್ಬಂದಿ ವರ್ಗದವರ ಮಾನವೀಯ ಸ್ಪಂದನೆ: ಪುದುವೆಟ್ಟುವಿನಲ್ಲಿ ಬಡ ಕುಟುಂಬಕ್ಕೆ ನೂತನ ಮನೆಯ ನಿರ್ಮಾಣಕ್ಕೆ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ದ.ಕ. ಜಿಲ್ಲಾ ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ಗೆ ಆಡಳಿತಾಧಿಕಾರಿ ನೇಮಕ ಮಾಡಿ ಕರ್ನಾಟಕ ರಾಜ್ಯ ಸರಕಾರ ಆದೇಶ

Suddi Udaya

ಉಜಿರೆ ಎಸ್.ಡಿ.ಎಂ. ಪದವಿ ಕಾಲೇಜಿನ ವಿವಿಧ ವಿಭಾಗದಲ್ಲಿ 38 ವರ್ಷಗಳ ಕಾಲ ಸೇವೆ ಸಲ್ಲಿಸಿದ ಸದಾನಂದ ಬಿ ಮುಂಡಾಜೆ ರವರಿಗೆ ಗ್ರಂಥಾಲಯ ವಿಭಾಗದಿಂದ ಬೀಳ್ಕೊಡುಗೆ

Suddi Udaya

ನೆರಿಯ ಪ್ರದೇಶದಲ್ಲಿ ಭಾರೀ ಮಳೆ ಸೇತುವೆ ಮತ್ತೆ ಮುಳುಗಡೆ ಆತಂಕದಲ್ಲಿ ಜನತೆ

Suddi Udaya

ಸಂಜಯ್ ಗ್ಲೋಬಲ್ ಫೌಂಡೇಶನ್ ಬೆಳ್ತಂಗಡಿ ನೂತನ ಅಧ್ಯಕ್ಷರಾಗಿ ಇಸ್ಮಾಯಿಲ್ ಐ.ಬಿ

Suddi Udaya

ದ.ಕ ಜಿಲ್ಲಾ ಕೇಂದ್ರ ಬ್ಯಾಂಕಿನ ಮಹಾಸಭೆಯಲ್ಲಿ ಮುಂಡಾಜೆ ಸಹಕಾರಿ ಸಂಘಕ್ಕೆ ಪ್ರಶಸ್ತಿ

Suddi Udaya
error: Content is protected !!