September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಚಾರ್ಮಾಡಿ ಘಾಟಿಯಲ್ಲಿ ಪ್ರತ್ಯೇಕ ಎರಡು ಅಪಘಾತ: ಪ್ರಾಣಾಪಾಯದಿಂದ ಪಾರು

ಚಾರ್ಮಾಡಿ: ಚಾರ್ಮಾಡಿ ಘಾಟಿಯಲ್ಲಿ ಮಳೆ ಸುರಿಯುತ್ತಿದ್ದು ದಟ್ಟನೆಯ ಮಂಜು ಕವಿದ ಈ ಹಿನ್ನಲೆಯಲ್ಲಿ ಶುಕ್ರವಾರ ಸಂಜೆ ಎರಡು ಪ್ರತ್ಯೇಕ ಅಪಘಾತಗಳು ಸಂಭವಿಸಿವೆ.

ಚಾರ್ಮಾಡಿ ಬಿದಿರುತಳ ಬಸ್ ನಿಲ್ದಾಣದ ಅಂತರದಲ್ಲಿ ಮಂಗಳೂರಿಗೆ ಸಾಗುತ್ತಿದ್ದ ಬೊಲೆರೊ ವಾಹನವೊಂದು ಮಂಜು ಕವಿದ ಕಾರಣ ದಾರಿ ಕಾಣದೇ ತಡೆಗೋಡೆಗೆ ಹತ್ತಿ ಪಲ್ಟಿಯಾಗಿದ್ದು ಅದೃಷ್ಟ ವಶಾತ್ ಬೊಲೇರೊ ವಾಹನದಲ್ಲಿ ಇದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಇನ್ನೊಂದು ಪ್ರಕರಣ ಅಣ್ಣಪ್ಪ ಸ್ವಾಮಿ ದೇವಸ್ಥಾನದಿಂದ ಸ್ವಲ್ಪ ಮುಂದೆ ಕಿರು ದಾರಿಯಲ್ಲಿ ಮಂಜು ಮುಸುಕಿದ್ದರಿಂದ ದಾರಿ ಕಾಣದೇ ಹುಬ್ಬಳ್ಳಿಯಿಂದ ಧರ್ಮಸ್ಥಳಕ್ಕೆ ಸಾಗುತ್ತಿದ್ದ ಬಸ್, ಆ ಕಡೆಯಿಂದ ಧರ್ಮಸ್ಥಳದಿಂದ ದಾರವಾಡಕ್ಕೆ ಸಾಗುತ್ತಿದ್ದ ಕಾರು ಕಿರು ದಾರಿಯಲ್ಲಿ ಅಪಘಾತ ಸಂಭವಿಸಿ ತಡೆಗೋಡೆ ಕುಸಿದಿದ್ದು ಸಣ್ಣ ಪುಟ್ಟ ಗಾಯಗಳಾಗಿವೆ.

ಈ ಕಿರು ಸ್ಥಳದಲ್ಲಿ ಸಾವಿರ ಅಡಿಯಷ್ಟು ಪ್ರಫಾತ ಇರುವುದರಿಂದ ತಡೆ ಗೋಡೆ ಕುಸಿದಿದ್ದು, ದಟ್ಟ ಮಂಜು ಕವಿದ ಹಿನ್ನಲೆಯಲ್ಲಿ ಇನ್ನಷ್ಟು ಅಪಾಯವಾಗುವ ಸಾಧ್ಯತೆಯಿದ್ದು ಹೆದ್ದಾರಿ ಪ್ರಾಧಿಕಾರ ಕೂಡಲೇ ತಡೆಗೋಡೆ ದುರಸ್ತಿ ಮಾಡಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

Related posts

ಶಾಸಕ ಹರೀಶ್ ಪೂಂಜರವರನ್ನು ಭೇಟಿ ಮಾಡಿದ ಬಳಂಜ ಶಾಲಾ ಅಮೃತ ಮಹೋತ್ಸವ ಆಚರಣಾ ಸಮಿತಿ

Suddi Udaya

ಉಜಿರೆ ಎಸ್‌.ಡಿ.ಎಂ ತಾಂತ್ರಿಕ ಮಹಾವಿದ್ಯಾಲಯದಲ್ಲಿ ರಾಷ್ಟ್ರಮಟ್ಟದ ಎಫ್.ಡಿ.ಪಿ ಕಾರ್ಯಾಗಾರದ ಮಾಹಿತಿ ಕೈಪಿಡಿ ಬಿಡುಗಡೆ

Suddi Udaya

ಪಶ್ಚಿಮ ಏಷ್ಯಾ ಬಿಕ್ಕಟ್ಟಿನ ಹಿನ್ನೆಲೆ, ಪೆಟ್ರೋಲ್-ಡೀಸೆಲ್ ಮಿತವಾಗಿ ಬಳಸಿ: ಪ್ರಧಾನಿ ನರೇಂದ್ರ ಮೋದಿ ಸಲಹೆ

Suddi Udaya

ಚಾರ್ಮಾಡಿ ಘಾಟ್ ರಾಷ್ಟ್ರೀಯ ಹೆದ್ದಾರಿಯನ್ನು ದ್ವಿಪಥವನ್ನಾಗಿ ಅಭಿವೃದ್ಧಿಪಡಿಸಲು ಕೇಂದ್ರ ಸರ್ಕಾರದಿಂದ ರೂ. 343.74 ಕೋಟಿ ಅನುದಾನ ಬಿಡುಗಡೆ: ಸಂಸದ ಕ್ಯಾ. ಬ್ರಿಜೇಶ್ ಚೌಟ

Suddi Udaya

ಭಾರೀ ಹದಗೆಟ್ಟ ಕಳಿಯ ದೇರ್ಜಾಲು ರಸ್ತೆ: ಅಭಿವೃದ್ಧಿಗೆ ಗ್ರಾಮಸ್ಥರ ಆಗ್ರಹ

Suddi Udaya

ನಿಡ್ಲೆ: ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ಕಾರು

Suddi Udaya
error: Content is protected !!