ನಿಟ್ಟಡೆ: ತೋಟದ ಶೆಡ್‌ ನಲ್ಲಿ ತಂದಿರಿಸಿದ್ದ ರೂ.70 ಸಾವಿರ ಮೌಲ್ಯದ ಎರಡು ವಿದ್ಯುತ್ ಚಾಲಿತ ಪಂಪು ಕಳವು

Suddi Udaya

ಬೆಳ್ತಂಗಡಿ: ಕುಕ್ಕೇಡಿ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ಸರ್ಕಾರಿ ಕಾಮಗಾರಿಗಾಗಿ, ಬೆಳ್ತಂಗಡಿ ತಾಲೂಕು ನಿಟ್ಟಡೆ ಗ್ರಾಮದ ಸತ್ಯರಾಜ್‌ ಎಂಬವರ ಬಾಬ್ತು ತೋಟದ ಶೆಡ್‌ ನಲ್ಲಿ ತಂದಿರಿಸಿದ್ದ ಅಂದಾಜು ರೂ.70,000 ಮೌಲ್ಯದ ಎರಡು ವಿದ್ಯುತ್ ಚಾಲಿತ ಪಂಪುಗಳನ್ನು ಹಾಗೂ ಶೆಡ್‌ ನ ಹೊರಗಡೆ ಇರಿಸಿದ್ದ ಪೈಪುಗಳನ್ನು, ಯಾರೋ ಕಳ್ಳರು ಕಳವುಗೈದ ಘಟನೆ ನಡೆದಿದೆ.

ಹಿರೆಕೆರೂರು ತಾಲೂಕು, ಹಾವೇರಿ ಜಿಲ್ಲೆ ನಿವಾಸಿ ಪವನ್ ಎಸ್. ಹಿತ್ತಲಮನೆ (28ವ) ಎಂಬವರ ದೂರಿನಂತೆ ವೇಣೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆಗಸ್ಟ್ 23 ರಂದು ಸಂಜೆಯಿಂದ ಸೆ .07 ರಂದು ಮಧ್ಯಾಹ್ನ ಅವಧಿಯಲ್ಲಿ ಶೆಡ್ ಬಾಗಿಲನ್ನು ಮುರಿದು ಕಳವು ಮಾಡಿಕೊಂಡು ಹೋಗಿರುವುದಾಗಿ ನೀಡಿದ ದೂರಿನಂತೆ ವೇಣೂರು ಪೊಲೀಸ್ ಠಾಣಾ 56/2023 ಕಲಂ: 454,457,380 IPC ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Leave a Comment

error: Content is protected !!