July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ನಿಟ್ಟಡೆ: ತೋಟದ ಶೆಡ್‌ ನಲ್ಲಿ ತಂದಿರಿಸಿದ್ದ ರೂ.70 ಸಾವಿರ ಮೌಲ್ಯದ ಎರಡು ವಿದ್ಯುತ್ ಚಾಲಿತ ಪಂಪು ಕಳವು

ಬೆಳ್ತಂಗಡಿ: ಕುಕ್ಕೇಡಿ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ಸರ್ಕಾರಿ ಕಾಮಗಾರಿಗಾಗಿ, ಬೆಳ್ತಂಗಡಿ ತಾಲೂಕು ನಿಟ್ಟಡೆ ಗ್ರಾಮದ ಸತ್ಯರಾಜ್‌ ಎಂಬವರ ಬಾಬ್ತು ತೋಟದ ಶೆಡ್‌ ನಲ್ಲಿ ತಂದಿರಿಸಿದ್ದ ಅಂದಾಜು ರೂ.70,000 ಮೌಲ್ಯದ ಎರಡು ವಿದ್ಯುತ್ ಚಾಲಿತ ಪಂಪುಗಳನ್ನು ಹಾಗೂ ಶೆಡ್‌ ನ ಹೊರಗಡೆ ಇರಿಸಿದ್ದ ಪೈಪುಗಳನ್ನು, ಯಾರೋ ಕಳ್ಳರು ಕಳವುಗೈದ ಘಟನೆ ನಡೆದಿದೆ.

ಹಿರೆಕೆರೂರು ತಾಲೂಕು, ಹಾವೇರಿ ಜಿಲ್ಲೆ ನಿವಾಸಿ ಪವನ್ ಎಸ್. ಹಿತ್ತಲಮನೆ (28ವ) ಎಂಬವರ ದೂರಿನಂತೆ ವೇಣೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆಗಸ್ಟ್ 23 ರಂದು ಸಂಜೆಯಿಂದ ಸೆ .07 ರಂದು ಮಧ್ಯಾಹ್ನ ಅವಧಿಯಲ್ಲಿ ಶೆಡ್ ಬಾಗಿಲನ್ನು ಮುರಿದು ಕಳವು ಮಾಡಿಕೊಂಡು ಹೋಗಿರುವುದಾಗಿ ನೀಡಿದ ದೂರಿನಂತೆ ವೇಣೂರು ಪೊಲೀಸ್ ಠಾಣಾ 56/2023 ಕಲಂ: 454,457,380 IPC ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಶತಾಯುಷಿ ಚೆಲುವಮ್ಮ ಇರ್ತಿಲಾಲ್ ನಿಧನ

Suddi Udaya

ಹೃದಯ ಸಮಸ್ಯೆಯಿಂದ ಮೃತಪಟ್ಟ ಬಾಲಕ ಅಶ್ವಿನ್ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ಶಿಕ್ಷಕ-ಪೋಷಕರ ಸಭೆ

Suddi Udaya

ಕಡಿರುದ್ಯಾವರ ಶ್ರೀ ವನದುರ್ಗಾದೇವಿ ದೇವಸ್ಥಾನ ಟ್ರಸ್ಟ್ ವತಿಯಿಂದ ಎಕ್ಸೆಲ್ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಇವರಿಗೆ ಅಭಿನಂದನೆ

Suddi Udaya

ಮಡಂತ್ಯಾರು: ಮಾಲಾಡಿ ಬಿ ಎಂ ಆಟೋ ರಿಕ್ಷಾ ಚಾಲಕ ಮಾಲಕರ ಸಂಘದ ಮಹಾಸಭೆ: ನೂತನ ಸಮಿತಿ ರಚನೆ

Suddi Udaya

ನಾಳೆಯಿಂದ ಗಡಾಯಿಕಲ್ಲು ಪ್ರವೇಶ ನಿಷೇಧ

Suddi Udaya
error: Content is protected !!