27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪಣಕಜೆ: ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಉತ್ಸವ: ಧಾರ್ಮಿಕ ಸಭೆ

ಬೆಳ್ತಂಗಡಿ: ಸನಾತನ ಧರ್ಮ ಸೂರ್ಯ ಚಂದ್ರರಿರುವರೆಗೆ ಶಾಶ್ವತವಾಗಿ ಇರಲಿದೆ ಶ್ರೀಕೃಷ್ಣನ ಜೀವನಾದರ್ಶ ಮನಕುಲಕ್ಕೆ ಪಾಲನಯೋಗ್ಯವಾಗಿದ್ದು ತಾವೆಲ್ಲರೂ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗವಹಿಸುವುದರಿಂದ ಪರಮಾತ್ಮನ ಅನುಗ್ರಹ ನಮಗೆ ಸಿಗಲಿದೆ ಎಂದು ಕಲ್ಲಡ್ಕ ಶ್ರೀರಾಮ ವಿದ್ಯಾ ಕೇಂದ್ರದ ನಿವೃತ್ತ ಶಿಕ್ಷಕ ರಾಧಕೃಷ್ಣ ಅಡ್ಯಂತಾಯ ಹೇಳಿದರು.

ಅವರು ಸೆ 6 ರಂದು ಶ್ರೀ ಕೃಷ್ಣ ಭಜನಾ ಮಂದಿರ ಪಣಕಜೆ ಶ್ರೀಕೃಷ್ಣ ಜನ್ಮಾಷ್ಟಮಿ ಸಮಿತಿ ಪಣಕಜೆ. ಶ್ರೀ ಕೃಷ್ಣ ಮಹಿಳಾ ಸಮಿತಿ ಪಣಕಜೆ, ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ (ರಿ) ಸೋಣಂದೂರು, ವಿಶ್ವ ಹಿಂದೂ ಪರಿಷತ್ ಭಜರಂಗದಳ ಪಣಕಜೆ ಖಂಡ ಸಮಿತಿ ಇದರ ಆಶ್ರಯದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಜರಗಿದ ಮೊಸರು ಕುಡಿಕೆ ಉತ್ಸವದ ಧಾರ್ಮಿಕ ಸಭೆಯಲ್ಲಿ ಮಾತನಾಡಿದರು. ಶ್ರೀಕೃಷ್ಣ ಜನ್ಮಾಷ್ಟಮಿ ಸಮಿತಿ ಅಧ್ಯಕ್ಷ‌ ಸಂಪತ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಮಾಲಾಡಿ ಗ್ರಾಮ ಪಂ ಅಧ್ಯಕ್ಷ ಪುನಿತ್ ಕುಮಾರ್. ಪುತ್ತೂರು ಜಿಲ್ಲಾ ಭಜರಂಗದಳ ಸಂಯೋಜಕ ಭರತ್ ಕು‌ಮುಡೇಲು, ಮಂಗಳೂರು ಮೆಸ್ಕಾಂ ಮಾಜಿ ನಿರ್ಧಶಕ ಕಿಶೋರ್ ಕುಮಾರ್ ಪುತ್ತೂರು, ಓಡೀಲು ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ‌ ಪ್ರಭಾಕರ ಶೆಟ್ಟಿ ಉಪ್ಪಡ್ಕ, ಉದ್ಯಮಿ  ಕಿರಣ್ ಕುಮಾರ್ ಹೊಕ್ಕಾಡಿಗೋಳಿ ಅರಂಬೋಡಿ ಅಗಮಿಸಿದ್ದರು.

ಮೂಡುಮನೆ ಶ್ರೀನಿವಾಸ ಅಮ್ಮುಣ್ಣಾಯ ವೈದಿಕ ವಿಧಿ ವಿಧಾನಗಳನ್ನು ನೆರವೇರಿಸಿದರು. ಮಕ್ಕಳಿಗೆ ಸಾರ್ವಜನಿಕರಿಗೆ ವಿವಿಧ ಅಟೋಟ ಸ್ಪರ್ಧೆ ಮುದ್ದು ಕೃಷ್ಣ ಸ್ಪರ್ಧೆ ನಡೆಸಿ ಬಹುಮಾನ ವಿತರಿಸಲಾಯಿತು.ಈ ಸಂದರ್ಭದಲ್ಲಿ ಅತೀ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು.

ಶ್ರೀ ಕೃಷ್ಣ ಭಜನಮಂದಿರದಲ್ಲಿ ಕೃಷ್ಣಾಷ್ಟಮಿಯಂದು ಉತ್ತಮ ಅಂಕ ಪಡೆದ ಅನ್ವಿತಾ.ವಿ. ಸಾಲ್ಯಾನ್ ಪಣಕಜೆ, ಪವನ್ ಪಾಲು ಮನೆ, ಅಭಿಷೇಕ್ ನಾಯಕ್ ಪಣಕಜೆ ಸನ್ಮಾನಿಸಲಾಯಿತು.

ಪದ್ಮನಾಭ ಶೆಟ್ಟಿ ಅರ್ಕಜೆ ಸ್ವಾಗತಿಸಿ, ಸತೀಶ್ ಆಚಾರ್ಯ ಕಾರ್ಯಕ್ರಮ ನಿರೂಪಿಸಿದರು.  ಸಾಂಸ್ಕ್ರತಿಕ ಕಾರ್ಯಕ್ರಮ ನಮ್ಮ ಕುಡ್ಲ ಯಕ್ಷ ತೆಲಿಕೆ ಕಲಾವಿದರು ಕುಸಾಲ್ದ ಗುರಿಕಾರೆ ದಿನೇಶ್ ಕೋಡಪದವು ಸಾರತ್ಯದಲ್ಲಿ ಯಕ್ಷ ತೆಲಿಕೆ ಯಕ್ಷ ಹಾಸ್ಯ ವೈಭವ ಜರಗಿತು.  ಸಾಯಂಕಾಲ ಸ್ಥಳೀಯ ವಿವಿಧ ಭಜನಾ ಮಂಡಳಿ ಸದಸ್ಯರಿಂದ ಭಜನಾ ಕಾರ್ಯಕ್ರಮ ಜರಗಿತು. ಶ್ರೀ ಕೃಷ್ಣ ಭಜನಾ ಮಂದಿರದ ಅಧ್ಯಕ್ಷ ಶ್ರೀಕಾಂತ ಶೆಟ್ಟಿ ಮುಂಡಾಡಿ, ಶ್ರೀಕೃಷ್ಣ ಜನ್ಮಾಷ್ಟಮಿ ಸಮಿತಿಯ ಗೌರವಾಧ್ಯಕ್ಷ ಚಂದ್ರಶೇಖರ ಬಿ ಶೆಟ್ಟಿ ಪೆರಂಗೋಡಿ, ಕಾರ್ಯದರ್ಶಿ ಸುದೀಪ್ ಕುಲಾಲ್ ಭಂಡಾರದಕೊಟ್ಯ, ಕೋಶಾಧಿಕಾರಿ ಅಭಿಲಾಷ್ ಆಚಾರ್ಯ ಪೊಮ್ಮಾಜೆ, ಶ್ರೀ ಕೃಷ್ಣ ಮಹಿಳಾ ಸಮಿತಿ ಅಧ್ಯಕ್ಷೆ ಅಶ್ವಿನಿ ನಾಯಕ್ ಪಣಕಜೆ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜೆನೆ ಸೇವಾ ಪ್ರತಿನಿಧಿ ಆನಂದ ಪೂಜಾರಿ ಬರಮೇಲು ಮತ್ತು ಪುಷ್ಪಾ ಕೃಷ್ಣನಗರ ಹಾಗೂ ವಿವಿಧ ಸಮಿತಿಗಳ ಪದಾಧಿಕಾರಿಗಳು ಸದಸ್ಯರು ಉಪಸ್ಥಿತರಿದ್ದರು. 

Related posts

ಸಾಮಾಜಿಕ ಜಾಲತಾಣದಲ್ಲಿ ಸಿ.ಎಂ. ಸಿದ್ದರಾಮಯ್ಯರವರ ಬಗ್ಗೆ ಅಶ್ಲೀಲ ಆಡಿಯೋ ವೈರಲ್: ರಜಿತ್ ಕೊಕ್ಕಡ ವಿರುದ್ದ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ವೇಣೂರು ಪೊಲೀಸರು

Suddi Udaya

ಬಿಜೆಪಿ ತನ್ನ ಗುರಿಯನ್ನು ಮೀರಿ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದಲ್ಲಿ ಗೆಲುವನ್ನು ಸಾಧಿಸಲಿದೆ: ಹರೀಶ್ ಪೂಂಜ

Suddi Udaya

ಚಾರ್ಮಾಡಿ ಸ. ಉ. ಪ್ರಾ. ಶಾಲೆಯಲ್ಲಿ ವಲಯ ಮಟ್ಟದ ಕಬಡ್ಡಿ ಪಂದ್ಯಾಟ

Suddi Udaya

ಸಾರ್ವಜನಿಕರಿಗೆ ಉಚಿತ ರಕ್ತದೂತ್ತಡ ಹಾಗೂ ಮಧುಮೇಹ ತಪಾಸಣೆ

Suddi Udaya

ಬೆಳ್ತಂಗಡಿ ತಾಲೂಕಿನ ಸರಕಾರಿ ಶಾಲೆಗಳ ದುರಸ್ತಿ ಹಾಗೂ ಶೌಚಾಲಯ ಅಭಿವೃದ್ಧಿಗೆ ರೂ.57.93 ಲಕ್ಷ ಅನುದಾನ ಬಿಡುಗಡೆ: ಶಾಸಕ ಹರೀಶ್ ಪೂಂಜ

Suddi Udaya
error: Content is protected !!