24.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪಣಕಜೆ: ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಉತ್ಸವ: ಧಾರ್ಮಿಕ ಸಭೆ

ಬೆಳ್ತಂಗಡಿ: ಸನಾತನ ಧರ್ಮ ಸೂರ್ಯ ಚಂದ್ರರಿರುವರೆಗೆ ಶಾಶ್ವತವಾಗಿ ಇರಲಿದೆ ಶ್ರೀಕೃಷ್ಣನ ಜೀವನಾದರ್ಶ ಮನಕುಲಕ್ಕೆ ಪಾಲನಯೋಗ್ಯವಾಗಿದ್ದು ತಾವೆಲ್ಲರೂ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗವಹಿಸುವುದರಿಂದ ಪರಮಾತ್ಮನ ಅನುಗ್ರಹ ನಮಗೆ ಸಿಗಲಿದೆ ಎಂದು ಕಲ್ಲಡ್ಕ ಶ್ರೀರಾಮ ವಿದ್ಯಾ ಕೇಂದ್ರದ ನಿವೃತ್ತ ಶಿಕ್ಷಕ ರಾಧಕೃಷ್ಣ ಅಡ್ಯಂತಾಯ ಹೇಳಿದರು.

ಅವರು ಸೆ 6 ರಂದು ಶ್ರೀ ಕೃಷ್ಣ ಭಜನಾ ಮಂದಿರ ಪಣಕಜೆ ಶ್ರೀಕೃಷ್ಣ ಜನ್ಮಾಷ್ಟಮಿ ಸಮಿತಿ ಪಣಕಜೆ. ಶ್ರೀ ಕೃಷ್ಣ ಮಹಿಳಾ ಸಮಿತಿ ಪಣಕಜೆ, ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ (ರಿ) ಸೋಣಂದೂರು, ವಿಶ್ವ ಹಿಂದೂ ಪರಿಷತ್ ಭಜರಂಗದಳ ಪಣಕಜೆ ಖಂಡ ಸಮಿತಿ ಇದರ ಆಶ್ರಯದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಜರಗಿದ ಮೊಸರು ಕುಡಿಕೆ ಉತ್ಸವದ ಧಾರ್ಮಿಕ ಸಭೆಯಲ್ಲಿ ಮಾತನಾಡಿದರು. ಶ್ರೀಕೃಷ್ಣ ಜನ್ಮಾಷ್ಟಮಿ ಸಮಿತಿ ಅಧ್ಯಕ್ಷ‌ ಸಂಪತ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಮಾಲಾಡಿ ಗ್ರಾಮ ಪಂ ಅಧ್ಯಕ್ಷ ಪುನಿತ್ ಕುಮಾರ್. ಪುತ್ತೂರು ಜಿಲ್ಲಾ ಭಜರಂಗದಳ ಸಂಯೋಜಕ ಭರತ್ ಕು‌ಮುಡೇಲು, ಮಂಗಳೂರು ಮೆಸ್ಕಾಂ ಮಾಜಿ ನಿರ್ಧಶಕ ಕಿಶೋರ್ ಕುಮಾರ್ ಪುತ್ತೂರು, ಓಡೀಲು ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ‌ ಪ್ರಭಾಕರ ಶೆಟ್ಟಿ ಉಪ್ಪಡ್ಕ, ಉದ್ಯಮಿ  ಕಿರಣ್ ಕುಮಾರ್ ಹೊಕ್ಕಾಡಿಗೋಳಿ ಅರಂಬೋಡಿ ಅಗಮಿಸಿದ್ದರು.

ಮೂಡುಮನೆ ಶ್ರೀನಿವಾಸ ಅಮ್ಮುಣ್ಣಾಯ ವೈದಿಕ ವಿಧಿ ವಿಧಾನಗಳನ್ನು ನೆರವೇರಿಸಿದರು. ಮಕ್ಕಳಿಗೆ ಸಾರ್ವಜನಿಕರಿಗೆ ವಿವಿಧ ಅಟೋಟ ಸ್ಪರ್ಧೆ ಮುದ್ದು ಕೃಷ್ಣ ಸ್ಪರ್ಧೆ ನಡೆಸಿ ಬಹುಮಾನ ವಿತರಿಸಲಾಯಿತು.ಈ ಸಂದರ್ಭದಲ್ಲಿ ಅತೀ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು.

ಶ್ರೀ ಕೃಷ್ಣ ಭಜನಮಂದಿರದಲ್ಲಿ ಕೃಷ್ಣಾಷ್ಟಮಿಯಂದು ಉತ್ತಮ ಅಂಕ ಪಡೆದ ಅನ್ವಿತಾ.ವಿ. ಸಾಲ್ಯಾನ್ ಪಣಕಜೆ, ಪವನ್ ಪಾಲು ಮನೆ, ಅಭಿಷೇಕ್ ನಾಯಕ್ ಪಣಕಜೆ ಸನ್ಮಾನಿಸಲಾಯಿತು.

ಪದ್ಮನಾಭ ಶೆಟ್ಟಿ ಅರ್ಕಜೆ ಸ್ವಾಗತಿಸಿ, ಸತೀಶ್ ಆಚಾರ್ಯ ಕಾರ್ಯಕ್ರಮ ನಿರೂಪಿಸಿದರು.  ಸಾಂಸ್ಕ್ರತಿಕ ಕಾರ್ಯಕ್ರಮ ನಮ್ಮ ಕುಡ್ಲ ಯಕ್ಷ ತೆಲಿಕೆ ಕಲಾವಿದರು ಕುಸಾಲ್ದ ಗುರಿಕಾರೆ ದಿನೇಶ್ ಕೋಡಪದವು ಸಾರತ್ಯದಲ್ಲಿ ಯಕ್ಷ ತೆಲಿಕೆ ಯಕ್ಷ ಹಾಸ್ಯ ವೈಭವ ಜರಗಿತು.  ಸಾಯಂಕಾಲ ಸ್ಥಳೀಯ ವಿವಿಧ ಭಜನಾ ಮಂಡಳಿ ಸದಸ್ಯರಿಂದ ಭಜನಾ ಕಾರ್ಯಕ್ರಮ ಜರಗಿತು. ಶ್ರೀ ಕೃಷ್ಣ ಭಜನಾ ಮಂದಿರದ ಅಧ್ಯಕ್ಷ ಶ್ರೀಕಾಂತ ಶೆಟ್ಟಿ ಮುಂಡಾಡಿ, ಶ್ರೀಕೃಷ್ಣ ಜನ್ಮಾಷ್ಟಮಿ ಸಮಿತಿಯ ಗೌರವಾಧ್ಯಕ್ಷ ಚಂದ್ರಶೇಖರ ಬಿ ಶೆಟ್ಟಿ ಪೆರಂಗೋಡಿ, ಕಾರ್ಯದರ್ಶಿ ಸುದೀಪ್ ಕುಲಾಲ್ ಭಂಡಾರದಕೊಟ್ಯ, ಕೋಶಾಧಿಕಾರಿ ಅಭಿಲಾಷ್ ಆಚಾರ್ಯ ಪೊಮ್ಮಾಜೆ, ಶ್ರೀ ಕೃಷ್ಣ ಮಹಿಳಾ ಸಮಿತಿ ಅಧ್ಯಕ್ಷೆ ಅಶ್ವಿನಿ ನಾಯಕ್ ಪಣಕಜೆ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜೆನೆ ಸೇವಾ ಪ್ರತಿನಿಧಿ ಆನಂದ ಪೂಜಾರಿ ಬರಮೇಲು ಮತ್ತು ಪುಷ್ಪಾ ಕೃಷ್ಣನಗರ ಹಾಗೂ ವಿವಿಧ ಸಮಿತಿಗಳ ಪದಾಧಿಕಾರಿಗಳು ಸದಸ್ಯರು ಉಪಸ್ಥಿತರಿದ್ದರು. 

Related posts

ಬಂದಾರು ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘಕ್ಕೆ ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಜಿಲ್ಲಾವಾರು ಉತ್ತಮ ಸಂಘ ಪ್ರಶಸ್ತಿ ಪ್ರಧಾನ

Suddi Udaya

ಶಾಸಕ ಹರೀಶ್ ಪೂಂಜರವರನ್ನು ಭೇಟಿ ಮಾಡಿದ ಬಳಂಜ ಶಾಲಾ ಅಮೃತ ಮಹೋತ್ಸವ ಆಚರಣಾ ಸಮಿತಿ

Suddi Udaya

ಉಜಿರೆ ಗ್ರಾ. ಪಂ. ವಾರ್ಡ್ 4ರ ಉಪಚುನಾವಣೆ: ಅನಿಲ್ ಪ್ರಕಾಶ್ ಡಿ’ ಸೋಜ ಗೆಲುವು

Suddi Udaya

ಕನ್ನಡ ಸೇನೆ -ಕರ್ನಾಟಕ ಬೆಳ್ತಂಗಡಿ ಸಮಿತಿ ವತಿಯಿಂದ ಬೆಳ್ತಂಗಡಿ ಆಸ್ಪತ್ರೆಯ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

Suddi Udaya

ಕೊಯ್ಯೂರು: ಪ್ರಗತಿಪರ ಕೃಷಿಕ ಲಿಂಗಪ್ಪ ಗೌಡ ಬಜಿಲ ನಿಧನ

Suddi Udaya

ಚುನಾವಣಾ ನೀತಿ ಸಂಹಿತೆ ಹಿನ್ನೆಲೆ: ಚಾರ್ಮಾಡಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ- ಜಿಲ್ಲಾಧ್ಯಕ್ಷರ ಕಾರು ತಪಾಸಣೆ ನಡೆಸಿದ ಅಧಿಕಾರಿಗಳು

Suddi Udaya
error: Content is protected !!