September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪಣಕಜೆ: ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಉತ್ಸವ: ಧಾರ್ಮಿಕ ಸಭೆ

ಬೆಳ್ತಂಗಡಿ: ಸನಾತನ ಧರ್ಮ ಸೂರ್ಯ ಚಂದ್ರರಿರುವರೆಗೆ ಶಾಶ್ವತವಾಗಿ ಇರಲಿದೆ ಶ್ರೀಕೃಷ್ಣನ ಜೀವನಾದರ್ಶ ಮನಕುಲಕ್ಕೆ ಪಾಲನಯೋಗ್ಯವಾಗಿದ್ದು ತಾವೆಲ್ಲರೂ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗವಹಿಸುವುದರಿಂದ ಪರಮಾತ್ಮನ ಅನುಗ್ರಹ ನಮಗೆ ಸಿಗಲಿದೆ ಎಂದು ಕಲ್ಲಡ್ಕ ಶ್ರೀರಾಮ ವಿದ್ಯಾ ಕೇಂದ್ರದ ನಿವೃತ್ತ ಶಿಕ್ಷಕ ರಾಧಕೃಷ್ಣ ಅಡ್ಯಂತಾಯ ಹೇಳಿದರು.

ಅವರು ಸೆ 6 ರಂದು ಶ್ರೀ ಕೃಷ್ಣ ಭಜನಾ ಮಂದಿರ ಪಣಕಜೆ ಶ್ರೀಕೃಷ್ಣ ಜನ್ಮಾಷ್ಟಮಿ ಸಮಿತಿ ಪಣಕಜೆ. ಶ್ರೀ ಕೃಷ್ಣ ಮಹಿಳಾ ಸಮಿತಿ ಪಣಕಜೆ, ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ (ರಿ) ಸೋಣಂದೂರು, ವಿಶ್ವ ಹಿಂದೂ ಪರಿಷತ್ ಭಜರಂಗದಳ ಪಣಕಜೆ ಖಂಡ ಸಮಿತಿ ಇದರ ಆಶ್ರಯದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಜರಗಿದ ಮೊಸರು ಕುಡಿಕೆ ಉತ್ಸವದ ಧಾರ್ಮಿಕ ಸಭೆಯಲ್ಲಿ ಮಾತನಾಡಿದರು. ಶ್ರೀಕೃಷ್ಣ ಜನ್ಮಾಷ್ಟಮಿ ಸಮಿತಿ ಅಧ್ಯಕ್ಷ‌ ಸಂಪತ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಮಾಲಾಡಿ ಗ್ರಾಮ ಪಂ ಅಧ್ಯಕ್ಷ ಪುನಿತ್ ಕುಮಾರ್. ಪುತ್ತೂರು ಜಿಲ್ಲಾ ಭಜರಂಗದಳ ಸಂಯೋಜಕ ಭರತ್ ಕು‌ಮುಡೇಲು, ಮಂಗಳೂರು ಮೆಸ್ಕಾಂ ಮಾಜಿ ನಿರ್ಧಶಕ ಕಿಶೋರ್ ಕುಮಾರ್ ಪುತ್ತೂರು, ಓಡೀಲು ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ‌ ಪ್ರಭಾಕರ ಶೆಟ್ಟಿ ಉಪ್ಪಡ್ಕ, ಉದ್ಯಮಿ  ಕಿರಣ್ ಕುಮಾರ್ ಹೊಕ್ಕಾಡಿಗೋಳಿ ಅರಂಬೋಡಿ ಅಗಮಿಸಿದ್ದರು.

ಮೂಡುಮನೆ ಶ್ರೀನಿವಾಸ ಅಮ್ಮುಣ್ಣಾಯ ವೈದಿಕ ವಿಧಿ ವಿಧಾನಗಳನ್ನು ನೆರವೇರಿಸಿದರು. ಮಕ್ಕಳಿಗೆ ಸಾರ್ವಜನಿಕರಿಗೆ ವಿವಿಧ ಅಟೋಟ ಸ್ಪರ್ಧೆ ಮುದ್ದು ಕೃಷ್ಣ ಸ್ಪರ್ಧೆ ನಡೆಸಿ ಬಹುಮಾನ ವಿತರಿಸಲಾಯಿತು.ಈ ಸಂದರ್ಭದಲ್ಲಿ ಅತೀ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು.

ಶ್ರೀ ಕೃಷ್ಣ ಭಜನಮಂದಿರದಲ್ಲಿ ಕೃಷ್ಣಾಷ್ಟಮಿಯಂದು ಉತ್ತಮ ಅಂಕ ಪಡೆದ ಅನ್ವಿತಾ.ವಿ. ಸಾಲ್ಯಾನ್ ಪಣಕಜೆ, ಪವನ್ ಪಾಲು ಮನೆ, ಅಭಿಷೇಕ್ ನಾಯಕ್ ಪಣಕಜೆ ಸನ್ಮಾನಿಸಲಾಯಿತು.

ಪದ್ಮನಾಭ ಶೆಟ್ಟಿ ಅರ್ಕಜೆ ಸ್ವಾಗತಿಸಿ, ಸತೀಶ್ ಆಚಾರ್ಯ ಕಾರ್ಯಕ್ರಮ ನಿರೂಪಿಸಿದರು.  ಸಾಂಸ್ಕ್ರತಿಕ ಕಾರ್ಯಕ್ರಮ ನಮ್ಮ ಕುಡ್ಲ ಯಕ್ಷ ತೆಲಿಕೆ ಕಲಾವಿದರು ಕುಸಾಲ್ದ ಗುರಿಕಾರೆ ದಿನೇಶ್ ಕೋಡಪದವು ಸಾರತ್ಯದಲ್ಲಿ ಯಕ್ಷ ತೆಲಿಕೆ ಯಕ್ಷ ಹಾಸ್ಯ ವೈಭವ ಜರಗಿತು.  ಸಾಯಂಕಾಲ ಸ್ಥಳೀಯ ವಿವಿಧ ಭಜನಾ ಮಂಡಳಿ ಸದಸ್ಯರಿಂದ ಭಜನಾ ಕಾರ್ಯಕ್ರಮ ಜರಗಿತು. ಶ್ರೀ ಕೃಷ್ಣ ಭಜನಾ ಮಂದಿರದ ಅಧ್ಯಕ್ಷ ಶ್ರೀಕಾಂತ ಶೆಟ್ಟಿ ಮುಂಡಾಡಿ, ಶ್ರೀಕೃಷ್ಣ ಜನ್ಮಾಷ್ಟಮಿ ಸಮಿತಿಯ ಗೌರವಾಧ್ಯಕ್ಷ ಚಂದ್ರಶೇಖರ ಬಿ ಶೆಟ್ಟಿ ಪೆರಂಗೋಡಿ, ಕಾರ್ಯದರ್ಶಿ ಸುದೀಪ್ ಕುಲಾಲ್ ಭಂಡಾರದಕೊಟ್ಯ, ಕೋಶಾಧಿಕಾರಿ ಅಭಿಲಾಷ್ ಆಚಾರ್ಯ ಪೊಮ್ಮಾಜೆ, ಶ್ರೀ ಕೃಷ್ಣ ಮಹಿಳಾ ಸಮಿತಿ ಅಧ್ಯಕ್ಷೆ ಅಶ್ವಿನಿ ನಾಯಕ್ ಪಣಕಜೆ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜೆನೆ ಸೇವಾ ಪ್ರತಿನಿಧಿ ಆನಂದ ಪೂಜಾರಿ ಬರಮೇಲು ಮತ್ತು ಪುಷ್ಪಾ ಕೃಷ್ಣನಗರ ಹಾಗೂ ವಿವಿಧ ಸಮಿತಿಗಳ ಪದಾಧಿಕಾರಿಗಳು ಸದಸ್ಯರು ಉಪಸ್ಥಿತರಿದ್ದರು. 

Related posts

ಬೆಳ್ತಂಗಡಿ ಎಸ್ ಡಿ ಎಂ ಆಂ.ಮಾ. ಶಾಲೆಯಲ್ಲಿ ತಾಲೂಕು ಮಟ್ಟದ ಪ್ರಾರಂಭಿಕ ತರಬೇತಿ ಶಿಬಿರ ಹಾಗೂ ಪುನಶ್ಚೇತನ ತರಬೇತಿ ಶಿಬಿರ

Suddi Udaya

ಗುಂಡೇರಿ ಲಯನ್ಸ್ ಬಸ್ ತಂಗುದಾನದಲ್ಲಿದ್ದ ಶ್ರೀ ಕೃಷ್ಣನ ಮೂರ್ತಿ ತೆರವು,: ಲಯನ್ಸ್ ಕ್ಲಬ್ ಅದ್ಯಕ್ಷ ದೇವದಾಸ್ ಶೆಟ್ಟಿ ನೇತೃತ್ವದಲ್ಲಿ ಪವಿತ್ರ ಪಲ್ಗುಣಿ ನದಿಯಲ್ಲಿ ಮೂರ್ತಿ ವಿಸರ್ಜನೆ

Suddi Udaya

ದ.ಕ ಜಿಲ್ಲಾ ಕೇಂದ್ರ ಬ್ಯಾಂಕಿನ ಮಹಾಸಭೆಯಲ್ಲಿ ಹತ್ಯಡ್ಕ ಸಹಕಾರಿ ಸಂಘಕ್ಕೆ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ಬೆಳ್ತಂಗಡಿ: ಸಂತೆಕಟ್ಟೆಯಲ್ಲಿ ಆನ್ ಫಿಟ್ ಮಲ್ಟಿ ಜಿಮ್ ಶುಭಾರಂಭ

Suddi Udaya

ಉಜಿರೆಯ ಮಾನಸ ಜಿ ಶೆಟ್ಟಿ ರವರಿಗೆ ಪಿಎಚ್‌ಡಿ ಪದವಿ ಪ್ರಧಾನ

Suddi Udaya

ಮೂಡಿಗೆರೆ ಪಟ್ಟಣದಲ್ಲಿ ಮಾದಕ ವಸ್ತು ಗಾಂಜಾ ಮಾರಾಟದಲ್ಲಿ ತೊಡಗಿದ್ದ ಬೆಳ್ತಂಗಡಿಯ ಇಬ್ಬರು ಯುವಕರ ಬಂಧನ

Suddi Udaya
error: Content is protected !!