ಬೆಳ್ತಂಗಡಿ ಎಸ್ ಡಿ ಎಮ್ ಶಾಲಾ ವಿದ್ಯಾರ್ಥಿಗಳು ಎಲ್ ಐ ಸಿ 67ನೇ ಸಪ್ತಹದಲ್ಲಿ ಹಲವಾರು ಪ್ರಶಸ್ತಿಗಳು

Suddi Udaya

ಬೆಳ್ತಂಗಡಿ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯ ವಿದ್ಯಾರ್ಥಿಗಳು ಎಲ್ ಐ ಸಿ 67ನೇ ಸಪ್ತಹದಲ್ಲಿ ಹಲವಾರು ಪ್ರಶಸ್ತಿಗಳನ್ನು ಮುಡಿಗೇರಿಸಿಕೊಂಡಿದ್ದಾರೆ.


ಭಾವಗೀತೆಯಲ್ಲಿ ಹತ್ತನೇ ತರಗತಿಯ ಚಿನ್ಮಯ್ ಜಿ ಕೆ ಪ್ರಥಮ ಬಹುಮಾನ, ಸಹನ ಆಚಾರ್ಯ ಎಂಟನೇ ತರಗತಿ ದ್ವಿತೀಯ ಬಹುಮಾನವನ್ನು ಪಡೆದುಕೊಂಡಿರುತ್ತಾರೆ.


ಚಿತ್ರಕಲಾ ಸ್ಪರ್ಧೆಯಲ್ಲಿ ಹಿರಿಯ ಪ್ರಾರ್ಥಮಿಕ ವಿಭಾಗದಲ್ಲಿ ಏಳನೇ ತರಗತಿಯ ಬೃಂದಾ ಪ್ರಥಮ ಬಹುಮಾನ ಪಡೆದಿದ್ದು, ರಿತಿಕಾ ಶೆಣೈ ಚತುರ್ಥ ಬಹುಮಾನ, ಕಿರಿಯ ಪ್ರಾಥಮಿಕ ವಿಭಾಗದಲ್ಲಿ ಉನ್ನತಿ ಎಸ್ ಚತುರ್ಥ ಬಹುಮಾನ ಪಡೆದಿರುತ್ತಾರೆ. ಮುಖ್ಯ ಶಿಕ್ಷಕಿ ಶ್ರೀಮತಿ ಹೇಮಲತಾ ಎಂ ಆರ್ ರವರ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳು ಹಲವಾರು ಪ್ರಶಸ್ತಿಗಳನ್ನು ತಮ್ಮದಾಗಿಸಿಕೊಂಡಿರುತ್ತಾರೆ.

Leave a Comment

error: Content is protected !!