September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಸೆ.10: ಗುರುವಾಯನಕೆರೆ ಎಕ್ಸೆಲ್ ಪ. ಪೂ. ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆಯ ಪ್ರಯುಕ್ತ ಗುರುನಮನ: ಎಕ್ಸೆಲ್ ನ ವಿದ್ಯಾರ್ಥಿಗಳ ಪಾಲಕರಾದ 272 ಶಿಕ್ಷಕರಿಗೆ ಗೌರವಾರ್ಪಣೆ

ಗುರುವಾಯನಕೆರೆ: ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆಯ ಪ್ರಯುಕ್ತ ಗುರುನಮನ -2023 ಎಕ್ಸೆಲ್ ನ ವಿದ್ಯಾರ್ಥಿಗಳ ಪಾಲಕರಾದ 272 ಶಿಕ್ಷಕರಿಗೆ ಗೌರವಾರ್ಪಣೆಯು ಸೆ.10 ರಂದು ವಿದ್ಯಾಸಾಗರ ಕ್ಯಾಂಪಸ್ ನಲ್ಲಿ ನಡೆಯಲಿದೆ.

ನರಸಿಂಹರಾಜಪುರ ಬಸ್ತಿಮಠ ಶ್ರೀ ಕ್ಷೇತ್ರ ಸಿಂಹನಗದ್ದೆ ಪರಮಪೂಜ್ಯ ಶ್ರೀ ಶ್ರೀಮದ್ ಅಭಿನವ ಲಕ್ಷ್ಮೀಸೇನಾ ಭಟ್ಟಾರಕ ಸ್ವಾಮೀಜಿ ಯವರು ಆಶೀರ್ವಚನ ನೀಡಲಿದ್ದಾರೆ.

ದೀಪ ಪ್ರಜ್ವಲನೆಯನ್ನು ಮುಖ್ಯಮಂತ್ರಿಯವರ ಉಪಕಾರ್ಯದರ್ಶಿ ಅರುಣ್ ಪುರ್ಟಾಡೋ ನೆರವೇರಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಶಾಸಕ ಹರೀಶ್ ಪೂಂಜ, ಮಾಜಿ ವಿಧಾನ ಪರಿಷತ್ ಸದಸ್ಯ ಗಣೇಶ್ ಕಾರ್ಣಿಕ್, ಕುವೆಟ್ಟು ಗ್ರಾ.ಪಂ. ಅಧ್ಯಕ್ಷೆ ಭಾರತಿ ಎಸ್.ಶೆಟ್ಟಿ, ಬೆಳ್ತಂಗಡಿ ರೋಟರಿ ಕ್ಲಬ್ ಅಧ್ಯಕ್ಷ ರೊ| ಅನಂತ ಭಟ್ ಮಚ್ಚಿಮಲೆ ಭಾಗವಹಿಸಲಿದ್ದಾರೆ.

ಎಕ್ಸೆಲ್ ವಿದ್ಯಾಸಂಸ್ಥೆ ಕಾರ್ಯದರ್ಶಿ ಅಭಿರಾಮ್ ಬಿ ಎಸ್, ಪ್ರಾಂಶುಪಾಲರು ಡಾ. ನವೀನ್ ಕುಮಾರ್ ಮರಿಕೆ ಗೌರವ ಉಪಸ್ಥಿತರಿರುವರು.

ಮಧ್ಯಾಹ್ನ ಸಾಂಸ್ಕೃತಿಕ ಕಾರ್ಯಕ್ರಮ ವಿ.ಕೆ ಜೋಡಿ ತಾರೆ ಖ್ಯಾತಿಯ ಕೃಷ್ಣರಾಜ್ ಎನ್ ಮತ್ತು ಬಳಗದವರಿಂದ ಮ್ಯೂಸಿಕ್ ಮಸ್ತಿ ನಡೆಯಲಿದೆ.

Related posts

ಬಂದಾರು ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ದಿನೇಶ್ ಖಂಡಿಗ ಆಯ್ಕೆ

Suddi Udaya

ಮೈಸೂರಿನಲ್ಲಿ ಬಾಲಕಿಯರ ವಿಭಾಗದ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾಟ: ಜಿದ್ದಾಜಿದ್ದಿನ ಪಂದ್ಯಾವಳಿಯಲ್ಲಿ ಸತತ 9ನೇ ಬಾರಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ಬಂದಾರು ಶಾಲೆ

Suddi Udaya

ಶ್ರೀ ಗೆಜ್ಜೆಗಿರಿ ಕ್ಷೇತ್ರ ಆಡಳಿತ ಸಮಿತಿ ಸಭೆ

Suddi Udaya

ರೈತರಿಗೆ ಬೆಳೆ ವಿಮೆ ಪಾವತಿಸಲು ಜು.31 ಕೊನೆಯ ದಿನ

Suddi Udaya

ಫೆ.3: ಬೆಳ್ತಂಗಡಿ ಆರ್.ಜೆ. ಫ್ರೆಂಡ್ಸ್ ಕ್ಲಬ್ ಕಲ್ಲಗುಡ್ಡೆ ಆಶ್ರಯದಲ್ಲಿ ತಾಲೂಕು ಮಟ್ಟದ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ

Suddi Udaya

ಧರ್ಮಸ್ಥಳದಿಂದ ನಾರಾವಿಗೆ ಕೆಎಸ್ಸಾರ್ಟಿಸಿ ಬಸ್ ಮಂಜೂರು – ಶಾಸಕರ ಶಿಫಾರಸ್ಸಿನಂತೆ ಬಸ್ಸು ಮಂಜೂರಾಗಿದ್ದರೆ, ಅವರು ಧರ್ಮಸ್ಥಳಕ್ಕೆ ಬಂದು ಪ್ರಮಾಣ ಮಾಡಲಿ- ಬಸ್ಸು ಮಂಜೂರು ಮಾಡಿಸಿದ್ದು, ನಾನೇ ಎಂದು ನಾನು ಪ್ರಮಾಣ ಮಾಡುತ್ತೇನೆ ಪತ್ರಿಕಾಗೋಷ್ಠಿಯಲ್ಲಿ ಮಾಜಿ ಶಾಸಕ ಕೆ. ವಸಂತ ಬಂಗೇರ ಸವಾಲು

Suddi Udaya
error: Content is protected !!