28.6 C
ಪುತ್ತೂರು, ಬೆಳ್ತಂಗಡಿ
March 31, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಪ್ರಮುಖ ಸುದ್ದಿವರದಿ

ಬೆಳ್ತಂಗಡಿ ಹೋಲಿ ರೆಡಿಮರ್ ಚರ್ಚ್‌ನಲ್ಲಿ ತೆನೆ ಹಬ್ಬ: ಬೆಳ್ತಂಗಡಿ ನಗರದಲ್ಲಿ ಸಂಭ್ರಮದ ಮೆರವಣಿಗೆ

ಬೆಳ್ತಂಗಡಿ: ಏಸು ಕ್ರಿಸ್ತರ ತಾಯಿ ಮೇರಿ ಮಾತೆಯ ಜನ್ಮದಿನವಾದ ಸೆ.8 ರಂದು ಬೆಳ್ತಂಗಡಿ ಹೋಲಿ ರಿಡೀಮರ್ ಚರ್ಚ್‌ನಲ್ಲಿ ಮೊಂತಿ ಫೆಸ್ತ್(ತೆನೆ ಹಬ್ಬ)ವನ್ನು ಸಂಭ್ರಮ ಸಡಗರದಿಂದ ಆಚರಿಸಲಾಯಿತು.


ಬೆಳ್ತಂಗಡಿ ಬಸ್‌ನಿಲ್ದಾಣದ ಬಳಿ ಚರ್ಚ್‌ನ ಧರ್ಮಗುರುಗಳಾದ ರೆ|ಫಾ ವಾಲ್ಟರ್ ಡಿ’ಮೊಲ್ಲೋ ನೇತೃತ್ವದಲ್ಲಿ ಭತ್ತದ ತೆನೆಗಳಿಗೆ ವಿಶೇಷ ಪೂಜೆ ನಡೆಯಿತು. ನಂತರ ಅಲ್ಲಿಂದ ಅಲಂಕೃತ ವಾಹನದಲ್ಲಿ ಬೆಳ್ತಂಗಡಿ ಮುಖ್ಯ ಪೇಟೆಯ ಮೂಲಕ ಚರ್ಚ್ ರೋಡಿಗಾಗಿ ತೆನೆಯನ್ನು ಮೆರವಣಿಗೆ ಮೂಲಕ ಚರ್ಚ್‌ಗೆ ತರಲಾಯಿತು. ಚರ್ಚ್‌ನಲ್ಲಿ ಹಬ್ಬದ ಬಲಿ ಪೂಜೆ ನಡೆದು ಧರ್ಮಗುರುಗಳು ಹೊಸ ತೆನೆಯ ಆಶೀರ್ವಚನ ನೆರವೇರಿಸಿದರು.

ಬಳಿಕ ಪ್ರತಿಯೊಬ್ಬರ ಮನೆಗೂ ಭತ್ತದ ತೆನೆಗಳನ್ನು ವಿತರಿಸಲಾಯಿತು. ಚರ್ಚ್ ವ್ಯಾಪ್ತಿಯ ಕ್ರೈಸ್ತ ಬಂಧುಗಳು, ಚರ್ಚ್ ಆಡಳಿತ ಮಂಡಳಿಯ ಸದಸ್ಯರು, ಮಕ್ಕಳು, ಮಹಿಳೆಯರು ಮೆರವಣಿಗೆಯಲ್ಲಿ ಭಾಗವಹಿಸಿದ್ದರು. ಹಬ್ಬದ ಪೂರ್ವಭಾವಿಯಾಗಿ ಒಂಭತ್ತು ದಿನಗಳ ಕಾಲ ನಡೆದ ನೊವೆನಾ ಪ್ರಾರ್ಥನೆಯಲ್ಲಿ ಮಕ್ಕಳು ಪ್ರತಿದಿನ ಮನೆಗಳಿಂದ ಹೂವುಗಳನ್ನು ಕೊಂಡೊಯ್ದು ಅರ್ಪಿಸಿರುವುದು ವಿಶೇಷವಾಗಿದೆ.

Related posts

ಹತ್ಯಡ್ಕ ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರದಲ್ಲಿ ಪ್ರತಿಷ್ಠಾ ಅಷ್ಠಬಂಧ ಬ್ರಹ್ಮಕಲಶೋತ್ಸವ: ಧಾರ್ಮಿಕ ಸಭೆ

Suddi Udaya

ಉಜಿರೆ ಎಸ್.ಡಿ.ಎಂ ಪದವಿ ಪೂರ್ವ ವಿದ್ಯಾರ್ಥಿಗಳಿಗೆ ನಿಸರ್ಗದ ಮಡಿಲಲ್ಲಿ ಪರಿಸರ ಪಾಠ

Suddi Udaya

ಬಿರುವೆರ್ ಕುಡ್ಲ ಸಂಘಟನೆಯಿಂದ ಯುವವಾಹಿನಿಗೆ ಗೌರವದ ಸನ್ಮಾನ: ಕೇಂದ್ರ ಸಮಿತಿಯ ಅಧ್ಯಕ್ಷರಾದ ಹರೀಶ್ ಕೆ ಪೂಜಾರಿ ಬಳಂಜ ಸನ್ಮಾನ ಸ್ವೀಕಾರ

Suddi Udaya

ಎಸ್ ಡಿ ಎಂ ಬೆಳ್ತಂಗಡಿ ಆಂಗ್ಲ ಮಾಧ್ಯಮ ಶಾಲೆಗೆ ಸಿ ಡಬ್ಲ್ಯೂ ಬಿ ವಿದ್ಯಾರ್ಥಿಗಳ ತಂಡ ಭೇಟಿ

Suddi Udaya

ಲಯನ್ ಹೆರಾಲ್ಡ್ ತಾವ್ರೋ ರವರ ಪ್ರಾಂತ್ಯ ಸಮ್ಮೇಳನಕ್ಕೆ : ಚಲನಚಿತ್ರ ನಟ ಮುಖ್ಯಮಂತ್ರಿ ಚಂದ್ರು ಹಾಗೂ ತುಳುನಾಡ ಮಾಣಿಕ್ಯ ನಟ ಅರವಿಂದ ಬೋಳಾರ್

Suddi Udaya

ಮುಂಬೈ – ಬೆಂಗಳೂರಿನಂತಹ ಮಹಾನಗರಗಳಲ್ಲಿ ಲಭ್ಯವಿದ್ದಂತಹ ವಿವಿಧ ಕೋರ್ಸ್ ಗಳೆಲ್ಲಾ ಇದೀಗ ಪುತ್ತೂರಿನಲ್ಲೂ: VFX, AI, SAP ಕೋರ್ಸ್ ಗಳಿಗೆ ಲಕ್ಷಾಂತರ ರೂಪಾಯಿ ವ್ಯಯಿಸಬೇಕಿಲ್ಲ; ಅತೀ ಕಡಿಮೆ ಶುಲ್ಕದೊಂದಿಗೆ ನುರಿತ ತಂಡದಿಂದ ತರಬೇತಿ ನೀಡಲಿದೆ ವಿದ್ಯಾಮಾತಾ

Suddi Udaya
error: Content is protected !!