25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಪ್ರಮುಖ ಸುದ್ದಿವರದಿ

ಬೆಳ್ತಂಗಡಿ ಹೋಲಿ ರೆಡಿಮರ್ ಚರ್ಚ್‌ನಲ್ಲಿ ತೆನೆ ಹಬ್ಬ: ಬೆಳ್ತಂಗಡಿ ನಗರದಲ್ಲಿ ಸಂಭ್ರಮದ ಮೆರವಣಿಗೆ

ಬೆಳ್ತಂಗಡಿ: ಏಸು ಕ್ರಿಸ್ತರ ತಾಯಿ ಮೇರಿ ಮಾತೆಯ ಜನ್ಮದಿನವಾದ ಸೆ.8 ರಂದು ಬೆಳ್ತಂಗಡಿ ಹೋಲಿ ರಿಡೀಮರ್ ಚರ್ಚ್‌ನಲ್ಲಿ ಮೊಂತಿ ಫೆಸ್ತ್(ತೆನೆ ಹಬ್ಬ)ವನ್ನು ಸಂಭ್ರಮ ಸಡಗರದಿಂದ ಆಚರಿಸಲಾಯಿತು.


ಬೆಳ್ತಂಗಡಿ ಬಸ್‌ನಿಲ್ದಾಣದ ಬಳಿ ಚರ್ಚ್‌ನ ಧರ್ಮಗುರುಗಳಾದ ರೆ|ಫಾ ವಾಲ್ಟರ್ ಡಿ’ಮೊಲ್ಲೋ ನೇತೃತ್ವದಲ್ಲಿ ಭತ್ತದ ತೆನೆಗಳಿಗೆ ವಿಶೇಷ ಪೂಜೆ ನಡೆಯಿತು. ನಂತರ ಅಲ್ಲಿಂದ ಅಲಂಕೃತ ವಾಹನದಲ್ಲಿ ಬೆಳ್ತಂಗಡಿ ಮುಖ್ಯ ಪೇಟೆಯ ಮೂಲಕ ಚರ್ಚ್ ರೋಡಿಗಾಗಿ ತೆನೆಯನ್ನು ಮೆರವಣಿಗೆ ಮೂಲಕ ಚರ್ಚ್‌ಗೆ ತರಲಾಯಿತು. ಚರ್ಚ್‌ನಲ್ಲಿ ಹಬ್ಬದ ಬಲಿ ಪೂಜೆ ನಡೆದು ಧರ್ಮಗುರುಗಳು ಹೊಸ ತೆನೆಯ ಆಶೀರ್ವಚನ ನೆರವೇರಿಸಿದರು.

ಬಳಿಕ ಪ್ರತಿಯೊಬ್ಬರ ಮನೆಗೂ ಭತ್ತದ ತೆನೆಗಳನ್ನು ವಿತರಿಸಲಾಯಿತು. ಚರ್ಚ್ ವ್ಯಾಪ್ತಿಯ ಕ್ರೈಸ್ತ ಬಂಧುಗಳು, ಚರ್ಚ್ ಆಡಳಿತ ಮಂಡಳಿಯ ಸದಸ್ಯರು, ಮಕ್ಕಳು, ಮಹಿಳೆಯರು ಮೆರವಣಿಗೆಯಲ್ಲಿ ಭಾಗವಹಿಸಿದ್ದರು. ಹಬ್ಬದ ಪೂರ್ವಭಾವಿಯಾಗಿ ಒಂಭತ್ತು ದಿನಗಳ ಕಾಲ ನಡೆದ ನೊವೆನಾ ಪ್ರಾರ್ಥನೆಯಲ್ಲಿ ಮಕ್ಕಳು ಪ್ರತಿದಿನ ಮನೆಗಳಿಂದ ಹೂವುಗಳನ್ನು ಕೊಂಡೊಯ್ದು ಅರ್ಪಿಸಿರುವುದು ವಿಶೇಷವಾಗಿದೆ.

Related posts

ನೆರಿಯ: ಹಿರಿಯ ದೈವ ನರ್ತಕ ತನಿಯಪ್ಪ ನಲಿಕೆ ನಿಧನ

Suddi Udaya

ಶಿರ್ಲಾಲು ಶಾಲಾ ಹಳೆವಿದ್ಯಾರ್ಥಿ ಸಂಘದಿಂದ ಆರ್ಥಿಕ ನೆರವು

Suddi Udaya

ಶಿರ್ಲಾಲು ಯುವವಾಹಿನಿ ಸಂಚಲನ ಸಮಿತಿ ವತಿಯಿಂದ ಆರೋಗ್ಯ ನಿಧಿ ವಿತರಣೆ

Suddi Udaya

ಇಂಡಿಯಾ ಬುಕ್ ಆಫ್ ರೆಕಾರ್ಡ್ ಸಾಧಕಿ ಶ್ರದ್ದಾ ಶೆಟ್ಟಿ ಎಣಿಂಜೆ ರವರು ಸೌತಡ್ಕ ದೇವಸ್ಥಾನಕ್ಕೆ ಭೇಟಿ, ವಿಶೇಷ ಪೂಜೆ

Suddi Udaya

ದೇವಾಲಯಗಳಲ್ಲಿ ಸೂಕ್ತ ಭದ್ರತೆ ಹಾಗೂ ಭಕ್ತಾದಿಗಳಿಗೆ ಮೂಲಭೂತ ಸೌಕರ್ಯ: ವಿಧಾನ ಪರಿಷತ್‍ನಲ್ಲಿ ಪ್ರತಾಪಸಿಂಹ ನಾಯಕ್ ಒತ್ತಾಯ

Suddi Udaya

ಸುಲ್ಕೇರಿ: ನರೇಗಾ ಯೋಜನೆಯಡಿ ಕೂಲಿ ಕಾರ್ಮಿಕರ ಆರೋಗ್ಯ ತಪಾಸಣೆ

Suddi Udaya
error: Content is protected !!