22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಪ್ರಮುಖ ಸುದ್ದಿವರದಿ

ಬೆಳ್ತಂಗಡಿ ಹೋಲಿ ರೆಡಿಮರ್ ಚರ್ಚ್‌ನಲ್ಲಿ ತೆನೆ ಹಬ್ಬ: ಬೆಳ್ತಂಗಡಿ ನಗರದಲ್ಲಿ ಸಂಭ್ರಮದ ಮೆರವಣಿಗೆ

ಬೆಳ್ತಂಗಡಿ: ಏಸು ಕ್ರಿಸ್ತರ ತಾಯಿ ಮೇರಿ ಮಾತೆಯ ಜನ್ಮದಿನವಾದ ಸೆ.8 ರಂದು ಬೆಳ್ತಂಗಡಿ ಹೋಲಿ ರಿಡೀಮರ್ ಚರ್ಚ್‌ನಲ್ಲಿ ಮೊಂತಿ ಫೆಸ್ತ್(ತೆನೆ ಹಬ್ಬ)ವನ್ನು ಸಂಭ್ರಮ ಸಡಗರದಿಂದ ಆಚರಿಸಲಾಯಿತು.


ಬೆಳ್ತಂಗಡಿ ಬಸ್‌ನಿಲ್ದಾಣದ ಬಳಿ ಚರ್ಚ್‌ನ ಧರ್ಮಗುರುಗಳಾದ ರೆ|ಫಾ ವಾಲ್ಟರ್ ಡಿ’ಮೊಲ್ಲೋ ನೇತೃತ್ವದಲ್ಲಿ ಭತ್ತದ ತೆನೆಗಳಿಗೆ ವಿಶೇಷ ಪೂಜೆ ನಡೆಯಿತು. ನಂತರ ಅಲ್ಲಿಂದ ಅಲಂಕೃತ ವಾಹನದಲ್ಲಿ ಬೆಳ್ತಂಗಡಿ ಮುಖ್ಯ ಪೇಟೆಯ ಮೂಲಕ ಚರ್ಚ್ ರೋಡಿಗಾಗಿ ತೆನೆಯನ್ನು ಮೆರವಣಿಗೆ ಮೂಲಕ ಚರ್ಚ್‌ಗೆ ತರಲಾಯಿತು. ಚರ್ಚ್‌ನಲ್ಲಿ ಹಬ್ಬದ ಬಲಿ ಪೂಜೆ ನಡೆದು ಧರ್ಮಗುರುಗಳು ಹೊಸ ತೆನೆಯ ಆಶೀರ್ವಚನ ನೆರವೇರಿಸಿದರು.

ಬಳಿಕ ಪ್ರತಿಯೊಬ್ಬರ ಮನೆಗೂ ಭತ್ತದ ತೆನೆಗಳನ್ನು ವಿತರಿಸಲಾಯಿತು. ಚರ್ಚ್ ವ್ಯಾಪ್ತಿಯ ಕ್ರೈಸ್ತ ಬಂಧುಗಳು, ಚರ್ಚ್ ಆಡಳಿತ ಮಂಡಳಿಯ ಸದಸ್ಯರು, ಮಕ್ಕಳು, ಮಹಿಳೆಯರು ಮೆರವಣಿಗೆಯಲ್ಲಿ ಭಾಗವಹಿಸಿದ್ದರು. ಹಬ್ಬದ ಪೂರ್ವಭಾವಿಯಾಗಿ ಒಂಭತ್ತು ದಿನಗಳ ಕಾಲ ನಡೆದ ನೊವೆನಾ ಪ್ರಾರ್ಥನೆಯಲ್ಲಿ ಮಕ್ಕಳು ಪ್ರತಿದಿನ ಮನೆಗಳಿಂದ ಹೂವುಗಳನ್ನು ಕೊಂಡೊಯ್ದು ಅರ್ಪಿಸಿರುವುದು ವಿಶೇಷವಾಗಿದೆ.

Related posts

ಆಳ್ವಾಸ್ ಕಾಲೇಜು: ಡಾ. ನರಹಳ್ಳಿ ಬಾಲಸುಬ್ರಮಣ್ಯ ಮತ್ತು ಜೀವನ: ಒಂದು ಪಟ್ಟಾಂಗ – ಪ್ರೀತಿಯ ಸಖ್ಯ” ವಿಶೇಷ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಮತ ಎಣಿಕೆ : ಹತ್ತನೇ ಸುತ್ತಿನಲ್ಲಿ 8442 ಮತಗಳ ಮೂಲಕ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಮುನ್ನಡೆ

Suddi Udaya

ನಿಡ್ಲೆ: ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಆಟೋಚಾಲಕ

Suddi Udaya

ನ.16-17: ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್‌ ಕ್ಲಬ್ ನಿಂದ ಸ್ವಸ್ತಿಕ್ ಇಂಡಿಯಾ ಕಪ್ ಗೋಲ್ಡ್ ಮೆಡಲ್ ಕಬಡ್ಡಿ ಉತ್ಸವ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ದೀಪಾವಳಿ ಸಂಭ್ರಮ

Suddi Udaya

ಕಟ್ಟಡ ಕಾರ್ಮಿಕರ ವೈದ್ಯಕೀಯ ಸಹಾಯಧನ ಹಾಗೂ ಅಪಘಾತ ಚಿಕಿತ್ಸಾ ವೆಚ್ಚದ ಮರುಪಾವತಿಯಲ್ಲಿರುವ ಅವ್ಯವಸ್ಥೆಯ ಬಗ್ಗೆ ಮತ್ತು ಕಾರ್ಮಿಕರ ಹೆಲ್ತ್ ಚೆಕಪ್‌ನ ಯೋಜನೆಯಲ್ಲಿ ಮಂಡಳಿಯ ಹಣ ದುರುಪಯೋಗ: ಕೂಡಲೇ ಕ್ರಮ ವಹಿಸುವಂತೆ ವಿ.ಪ. ಸದಸ್ಯ ಪ್ರತಾಪ್ ಸಿಂಹ ನಾಯಕ್ ರಿಂದ ಕಾರ್ಮಿಕ ಸಚಿವ ಸಂತೋಷ್ ಎಸ್. ಲಾಡ್ ರಿಗೆ ಮನವಿ

Suddi Udaya
error: Content is protected !!