23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ: ಸಂತ ಅಂತೋನಿ ಚರ್ಚ್ ನಲ್ಲಿ ಸಂಭ್ರಮದ ತೆನೆ ಹಬ್ಬ

ಉಜಿರೆ: ಸಂತ ಅಂತೋನಿ ಚರ್ಚ್ ನಲ್ಲಿ ಸಂಭ್ರಮದ ತೆನೆ ಹಬ್ಬವನ್ನು ಸೆ.8ರಂದು ಆಚರಿಸಲಾಯಿತು.

ಸಂಭ್ರಮದ ದಿವ್ಯ ಬಲಿ ಪೂಜೆಯನ್ನು ಉಜಿರೆ ದಯಾಳ್ ಬಾಗ್ ಆಶ್ರಮದ ಮುಖ್ಯ ಧರ್ಮಗುರು ವ.ಫಾ. ಫೆಡ್ರಿಕ್ ಬ್ಯಾಗ್ಸ್ ಅರ್ಪಿಸಿ ತೆನೆಯನ್ನು ಆಶೀರ್ವದಿಸಿ ಸಂದೇಶ ನೀಡಿದರು.
ಈ ಸಂದರ್ಭದಲ್ಲಿ ಚರ್ಚ್ ನ ಪ್ರಧಾನ ಧರ್ಮಗುರು ಜೇಮ್ಸ್ ಡಿಸೋಜಾ, ಅನುಗ್ರಹ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ವ.ಫಾ.ವಿಜಯ್ ಲೋಬೊ, ವ.ಫಾ.ವಲೇರಿಯನ್ ಸಿಕ್ವೆರಾ, ವ.ಫಾ.ಪ್ರದೀಪ್ ಪಿಂಟೊ, ಚರ್ಚ್ ಪಾಲನಾ ಮಂಡಳಿ ಉಪಾಧ್ಯಕ್ಷ ಆಂಟೋನಿ ಫೆರ್ನಾಂಡಿಸ್, ಕಾರ್ಯದರ್ಶಿ ಲಿಗೋರಿ ವಾಸ್, ಪಾಲನಾ ಮಂಡಳಿ ಸದಸ್ಯರು, ಆರ್ಥಿಕ ಮಂಡಳಿ ಸದಸ್ಯರು, ಸಹಕರಿಸಿದರು.

ಕನ್ಯಾ ಮರಿಯಮ್ಮ ಹುಟ್ಟು ಹಬ್ಬದ ಪ್ರಯುಕ್ತ ಎಲ್ಲರೂ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಮರಿಯಮ್ಮಗೆ ಹೂ ಅರ್ಪಿಸಿದರು. ಬಳಿಕ ಪ್ರತಿಯೊಬ್ಬರ ಮನೆಗೂ ತೆನೆಯನ್ನು ವಿತರಿಸಲಾಯಿತು.

ಆಗಮಿಸಿದ ಭಕ್ತಾಧಿಗಳಿಗೆ ಕಬ್ಬು ವಿತರಿಸಿ, ಹಳ್ಳಿ ಮನೆ ಪ್ರವೀಣ್ ಫೆರ್ನಾಂಡಿಸ್ ಪ್ರಯೋಜಕತ್ವದಲ್ಲಿ ಉಪಹಾರದ ವ್ಯವಸ್ಥೆ ಮಾಡಲಾಗಿತ್ತು.

Related posts

ವೇಣೂರು: ಮನೆಗೆ ಮರ ಬಿದ್ದು ಹಾನಿ

Suddi Udaya

ಮೈರೋಳ್ತಡ್ಕ ಸ. ಉ. ಹಿ.ಪ್ರಾ.ಶಾಲೆಯ ನೂತನ ಶಾಲಾಭಿವೃದ್ಧಿ ಸಮಿತಿ ರಚನೆ

Suddi Udaya

ಶಾಸಕ ಹರೀಶ್ ಪೂಂಜರಿಂದ ಮ್ಯಾರಥನ್ ಜನಸ್ಪಂದನ ಸಭೆ

Suddi Udaya

ಎಕ್ಸೆಲ್ ನಲ್ಲಿ ಪ್ರಥಮ ಪಿಯುಸಿ ವಿಜ್ಞಾನ ವಿದ್ಯಾರ್ಥಿಗಳ ಒರಿಯಂಟೇಶನ್

Suddi Udaya

ಶ್ರೀ ಧ.ಮಂ. ಇಂಜಿನಿಯರಿಂಗ್ ಕಾಲೇಜಿನ ಕಂಪ್ಯೂಟರ್ ಸಯನ್ಸ್ ವಿಭಾಗದ ಸಹ ಪ್ರಾಧ್ಯಾಪಕ ಮನೋಜ್ ಗಡಿಯಾರ್ ಅವರಿಗೆ ಪಿ.ಎಚ್.ಡಿ. ಪದವಿ

Suddi Udaya

ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸ್ವಯಂ ಸೇವಕರಿಂದ ಸ್ವಚ್ಛತಾ ಕಾರ್ಯ

Suddi Udaya
error: Content is protected !!