22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಚಾರ್ಮಾಡಿ ಘಾಟಿಯಲ್ಲಿ ಪ್ರತ್ಯೇಕ ಎರಡು ಅಪಘಾತ: ಪ್ರಾಣಾಪಾಯದಿಂದ ಪಾರು

ಚಾರ್ಮಾಡಿ: ಚಾರ್ಮಾಡಿ ಘಾಟಿಯಲ್ಲಿ ಮಳೆ ಸುರಿಯುತ್ತಿದ್ದು ದಟ್ಟನೆಯ ಮಂಜು ಕವಿದ ಈ ಹಿನ್ನಲೆಯಲ್ಲಿ ಶುಕ್ರವಾರ ಸಂಜೆ ಎರಡು ಪ್ರತ್ಯೇಕ ಅಪಘಾತಗಳು ಸಂಭವಿಸಿವೆ.

ಚಾರ್ಮಾಡಿ ಬಿದಿರುತಳ ಬಸ್ ನಿಲ್ದಾಣದ ಅಂತರದಲ್ಲಿ ಮಂಗಳೂರಿಗೆ ಸಾಗುತ್ತಿದ್ದ ಬೊಲೆರೊ ವಾಹನವೊಂದು ಮಂಜು ಕವಿದ ಕಾರಣ ದಾರಿ ಕಾಣದೇ ತಡೆಗೋಡೆಗೆ ಹತ್ತಿ ಪಲ್ಟಿಯಾಗಿದ್ದು ಅದೃಷ್ಟ ವಶಾತ್ ಬೊಲೇರೊ ವಾಹನದಲ್ಲಿ ಇದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಇನ್ನೊಂದು ಪ್ರಕರಣ ಅಣ್ಣಪ್ಪ ಸ್ವಾಮಿ ದೇವಸ್ಥಾನದಿಂದ ಸ್ವಲ್ಪ ಮುಂದೆ ಕಿರು ದಾರಿಯಲ್ಲಿ ಮಂಜು ಮುಸುಕಿದ್ದರಿಂದ ದಾರಿ ಕಾಣದೇ ಹುಬ್ಬಳ್ಳಿಯಿಂದ ಧರ್ಮಸ್ಥಳಕ್ಕೆ ಸಾಗುತ್ತಿದ್ದ ಬಸ್, ಆ ಕಡೆಯಿಂದ ಧರ್ಮಸ್ಥಳದಿಂದ ದಾರವಾಡಕ್ಕೆ ಸಾಗುತ್ತಿದ್ದ ಕಾರು ಕಿರು ದಾರಿಯಲ್ಲಿ ಅಪಘಾತ ಸಂಭವಿಸಿ ತಡೆಗೋಡೆ ಕುಸಿದಿದ್ದು ಸಣ್ಣ ಪುಟ್ಟ ಗಾಯಗಳಾಗಿವೆ.

ಈ ಕಿರು ಸ್ಥಳದಲ್ಲಿ ಸಾವಿರ ಅಡಿಯಷ್ಟು ಪ್ರಫಾತ ಇರುವುದರಿಂದ ತಡೆ ಗೋಡೆ ಕುಸಿದಿದ್ದು, ದಟ್ಟ ಮಂಜು ಕವಿದ ಹಿನ್ನಲೆಯಲ್ಲಿ ಇನ್ನಷ್ಟು ಅಪಾಯವಾಗುವ ಸಾಧ್ಯತೆಯಿದ್ದು ಹೆದ್ದಾರಿ ಪ್ರಾಧಿಕಾರ ಕೂಡಲೇ ತಡೆಗೋಡೆ ದುರಸ್ತಿ ಮಾಡಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

Related posts

ಪೆರಿಂಜೆ ಶ್ರೀ ಧ.ಮಂ.ಅ. ಪ್ರೌಢಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಭಜನಾ ಮಂಡಳಿಯ ಬೆಳ್ಳಿಹಬ್ಬ ವಾರ್ಷಿಕೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ ತಾಲೂಕು ಚಿತ್ಪಾವನ ಬ್ರಾಹ್ಮಣರ ಸಂಘ ಪದಾಧಿಕಾರಿಗಳ ಆಯ್ಕೆ

Suddi Udaya

ಇಂದಬೆಟ್ಟು : ಕಲ್ಲಾಜೆ ನವ ಭಾರತ್ ಗೆಳೆಯರ ಬಳಗ ವಾರ್ಷಿಕ ಮಹಾಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ನಗರ ಪಂಚಾಯತದ ಒಳಚರಂಡಿಗೆ ಬಿದ್ದ ದನ: ಅಗ್ನಿಶಾಮಕದವರ ಸಹಕಾರದಿಂದ ಮೇಲಕ್ಕೆ

Suddi Udaya

ಉಜಿರೆಯಲ್ಲಿ ಸರಣಿ ಅಪಘಾತ: ಮೂವರಿಗೆ ಗಾಯ

Suddi Udaya
error: Content is protected !!