22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಚಾರ್ಮಾಡಿ ಘಾಟಿಯಲ್ಲಿ ಪ್ರತ್ಯೇಕ ಎರಡು ಅಪಘಾತ: ಪ್ರಾಣಾಪಾಯದಿಂದ ಪಾರು

ಚಾರ್ಮಾಡಿ: ಚಾರ್ಮಾಡಿ ಘಾಟಿಯಲ್ಲಿ ಮಳೆ ಸುರಿಯುತ್ತಿದ್ದು ದಟ್ಟನೆಯ ಮಂಜು ಕವಿದ ಈ ಹಿನ್ನಲೆಯಲ್ಲಿ ಶುಕ್ರವಾರ ಸಂಜೆ ಎರಡು ಪ್ರತ್ಯೇಕ ಅಪಘಾತಗಳು ಸಂಭವಿಸಿವೆ.

ಚಾರ್ಮಾಡಿ ಬಿದಿರುತಳ ಬಸ್ ನಿಲ್ದಾಣದ ಅಂತರದಲ್ಲಿ ಮಂಗಳೂರಿಗೆ ಸಾಗುತ್ತಿದ್ದ ಬೊಲೆರೊ ವಾಹನವೊಂದು ಮಂಜು ಕವಿದ ಕಾರಣ ದಾರಿ ಕಾಣದೇ ತಡೆಗೋಡೆಗೆ ಹತ್ತಿ ಪಲ್ಟಿಯಾಗಿದ್ದು ಅದೃಷ್ಟ ವಶಾತ್ ಬೊಲೇರೊ ವಾಹನದಲ್ಲಿ ಇದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಇನ್ನೊಂದು ಪ್ರಕರಣ ಅಣ್ಣಪ್ಪ ಸ್ವಾಮಿ ದೇವಸ್ಥಾನದಿಂದ ಸ್ವಲ್ಪ ಮುಂದೆ ಕಿರು ದಾರಿಯಲ್ಲಿ ಮಂಜು ಮುಸುಕಿದ್ದರಿಂದ ದಾರಿ ಕಾಣದೇ ಹುಬ್ಬಳ್ಳಿಯಿಂದ ಧರ್ಮಸ್ಥಳಕ್ಕೆ ಸಾಗುತ್ತಿದ್ದ ಬಸ್, ಆ ಕಡೆಯಿಂದ ಧರ್ಮಸ್ಥಳದಿಂದ ದಾರವಾಡಕ್ಕೆ ಸಾಗುತ್ತಿದ್ದ ಕಾರು ಕಿರು ದಾರಿಯಲ್ಲಿ ಅಪಘಾತ ಸಂಭವಿಸಿ ತಡೆಗೋಡೆ ಕುಸಿದಿದ್ದು ಸಣ್ಣ ಪುಟ್ಟ ಗಾಯಗಳಾಗಿವೆ.

ಈ ಕಿರು ಸ್ಥಳದಲ್ಲಿ ಸಾವಿರ ಅಡಿಯಷ್ಟು ಪ್ರಫಾತ ಇರುವುದರಿಂದ ತಡೆ ಗೋಡೆ ಕುಸಿದಿದ್ದು, ದಟ್ಟ ಮಂಜು ಕವಿದ ಹಿನ್ನಲೆಯಲ್ಲಿ ಇನ್ನಷ್ಟು ಅಪಾಯವಾಗುವ ಸಾಧ್ಯತೆಯಿದ್ದು ಹೆದ್ದಾರಿ ಪ್ರಾಧಿಕಾರ ಕೂಡಲೇ ತಡೆಗೋಡೆ ದುರಸ್ತಿ ಮಾಡಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

Related posts

ಉದ್ಯೋಗದ ಪ್ರಥಮ ವೇತನ ಬಾರ್ಯ ಶ್ರೀ ಮಹಾವಿಷ್ಣು ಕ್ಷೇತ್ರಕ್ಕೆ ಸಮರ್ಪಣೆ

Suddi Udaya

ಸವಣಾಲು: ಬೈಕ್ ಸಮೇತ ನೀರಿನಲ್ಲಿ ಕೊಚ್ಚಿ ಹೋದ ಯುವಕರು; ಅದೃಷ್ಟವಶಾತ್ ಬೈಕ್ ಸವಾರರು ಪ್ರಾಣಾಪಾಯದಿಂದ ಪಾರು

Suddi Udaya

ರಾಜ್ಯದಲ್ಲಿ ವಚನಭ್ರಷ್ಟ ಕಾಂಗ್ರೆಸ್ ಸರಕಾರ: ಪ್ರತಾಪಸಿಂಹ ನಾಯಕ್

Suddi Udaya

ವಿಪರೀತ ಮಳೆ : ತೆಕ್ಕಾರು ಅತಿಜಮ್ಮ ರವರ ಮನೆಯ ಮಹಡಿ ಸಂಪೂರ್ಣ ಹಾನಿ

Suddi Udaya

ಸಚಿವ ಹೆಚ್.ಡಿ ಕುಮಾರಸ್ವಾಮಿಯನ್ನು ಭೇಟಿ ಮಾಡಿದ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ: ಅಭಿವೃದ್ಧಿಗೆ ಇರುವ ಸಾಧ್ಯತೆ ಮತ್ತು ಅವಕಾಶಗಳ ಕುರಿತು ಮಾತುಕತೆ

Suddi Udaya

ಭಾರೀ ಮಳೆಗೆ ಕಾಯರ್ತಡ್ಕ ಮೈರಾರ್ ‍ನಲ್ಲಿ ಸೇತುವೆ ಮುಳುಗಡೆ

Suddi Udaya
error: Content is protected !!